ಬಿಸಿ ಬಿಸಿ ಸುದ್ದಿ

ತೊಗರಿ ಮತ್ತು ಇತರೆ ಬೆಳೆಗಳ ಕ್ಷಿಪ್ರ ಸಂಚಾರ ತಂಡದಿಂದ ಸಮೀಕ್ಷೆ

ಕಲಬುರಗಿ: ಸೇಡಂ ತಾಲ್ಲೂಕಿನ ಕಲಕಂಬಾ, ಅಳ್ಳೊಳ್ಳಿ, ನೀಲಹಳ್ಳಿ, ಮಳಖೇಡ, ಅಡಕಿ ಮತ್ತು ಸೇಡಂ ಸುತ್ತಮುತ್ತಲಿನ ಗ್ರಾಮಗಳಲ್ಲಿನ ವಿವಿಧ ಬೆಳೆಗಳಲ್ಲಿ ಕೀಟ ಹಾಗೂ ರೋಗಗಳ ಸಮೀಕ್ಷೆ ಮಾಡಲಾಗಿದ್ದು, ತೊಗರಿ ಬೆಳೆಯು 70 ರಿಂ 80% ರಷ್ಟು ಹೂ ಬಿಟ್ಟಿರುತ್ತದೆ ಎಂದು ಕ್ಷಿಪ್ರ ಸಂಚಾರ ಸಮೀಕ್ಷೆಯ ತಂಡದ ವಿಜ್ಞಾನಿ, ಅಧಿಕಾರಿಗಳಾದ ಡಾ. ಶ್ರೀನಿವಾಸ ಬಿ. ವಿ. ತಿಳಿಸಿದರು.

ಕಲಕಂಬಾ ಗ್ರಾಮದ ಚಂದ್ರಶೇಖರ ಪಾಟೀಲ್ ರೈತರ ಹೊಲವೊಂದರಲ್ಲಿ ಜೋಳದಲ್ಲಿ ಸೈನಿಕ ಹುಳುವಿನ ಬಾಧೆಯನ್ನು ಪರಿಶೀಲಿಸಿ ಮಾತನಾಡಿ, ಕೆಲವೊಂದು ಪ್ರದೇಶಗಳಲ್ಲಿ ತೊಗರಿಯು ಕಾಯಿಕಟ್ಟುವ ಹಂತದಲ್ಲಿದ್ದು, ಅಲ್ಲಲಿ ಹೂ ಉದುರುವಿಕೆ ಮತ್ತು ಎಲೆ ಚುಕ್ಕೆ ರೋಗದ ಬಾಧೆ ಹಾಗೂಜ ಕಡಲೆಯಲ್ಲಿ ಕಡಲೆಗೆ ಹಸಿರು ಕೀಡೆ ಬಾಧೆವು  ಆರ್ಥಿಕ ನಷ್ಟದ ರೇಖೆಯನ್ನು ತಲುಪಿಲ್ಲ ಆದರೂ ಕೀಟದ ಇರುವಿಕೆಯನ್ನು ಗಮನಿಸಿ ಕೆಲವು ರೈತರು ಈಗಾಗಲೇ ೨-೩ ಬಾರಿ ಕೀಟ ನಾಶಕಗಳ ಸಿಂಪರಣೆ ಮಾಡಿದ್ದಾರೆ. ಕಲಕಂಬಾ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲ್ಲಿ ಜೋಳಕ್ಕೆ ಸೈನಿಕ ಹುಳು ಬಾಧೆ ಕಂಡು ಬಂದಿದ್ದು,  ಹತೋಟಿ ಕ್ರಮಗಳನ್ನು ರೈತರಿಗೆ ತಿಳಿಸಲಾಯಿತು. ಅಲ್ಪ ಪ್ರಮಾಣದಲ್ಲಿ ಕಂಡು ಬಂದಿದೆ ಆದರೆ ಹಲವಾರು ಪ್ರದೇಶಗಳಲ್ಲಿ ಜೋಳವು ೩೫ ರಿಂದ ೪೦ ದಿವಸಗಳ ಅವಧಿಯದ್ದಾಗಿದೆ.  ಎಲ್ಲಾ ಗ್ರಾಮಗಳಲ್ಲಿ  ಸೈನಿಕ ಕೀಡೆ ಬಾಧೆವು ಕಂಡು ಬಂದಿದೆ.  ಭೇಟಿಯಾದ ಎಲ್ಲಾ ರೈತರಿಗೂ ಯಾವ ಮತ್ತು ಎಷ್ಟು ಪ್ರಮಾಣದಲ್ಲಿ ಔಷಧಿ ಬಳಸಬೇಕೆಂದು ತಿಳಿಸಲಾಯಿತು.

ಕ್ಷಿಪ್ರ ಸಂಚಾರ ಸಮೀಕ್ಷೆ ತಂಡದಲ್ಲಿ ಕೃಷಿ ವಿಜ್ಞಾನ ಕೇಂದ್ರ, ಕಲಬುರಗಿಯ ವಿಜ್ಞಾನಿಯಾದ ಡಾ. ಶ್ರೀನಿವಾಸ ಬಿ. ವಿ, ಸಹಾಯಕ ತೋಟಗಾರಿಕಾ ಅಧಿಕಾರಿಯಾದ ಶ್ರೀ ಚಂದ್ರಶೇಖರ ಪಾಟೀಲ್, ಕೃಷಿ ಇಲಾಖೆಯ ಅಧಿಕಾರಿಗಳಾದ ಶ್ರಿ ಬಾಲರಾಜ ಭಾಗವಹಿಸಿದ್ದರು. ರೈತರು ವ್ಯಾಪಕವಾಗಿ ಪೀಡೆ ಸಮೀಕ್ಷೆ ಕೈಗೊಂಡು ಕೀಟದ ಹರಡುವಿಕೆ ಮೇಲೆ ನಿಗಾ ವಹಿಸಬೇಕು ಎಂದು ಸಲಹೆ ನೀಡಲಾಯಿತು.

emedialine

Recent Posts

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

25 mins ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

31 mins ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

34 mins ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

39 mins ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

42 mins ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

49 mins ago