ಪುಸ್ತಕದಿಂದ ಬಂದ ಹಣ ನೆರೆ ಸಂತ್ರಸ್ತ ಮಕ್ಕಳ ಶಿಕ್ಷಣಕ್ಕೆ ಕೊಡುವೆ-ಅಲ್ಲಾಗಿರಿರಾಜ್

ಸುರಪುರ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಎಂಟು ಶಾಲೆಗಳು ನೆರೆಯಿಂದ ಸಂಪೂರ್ಣ ಹಾಳಾಗಿದ್ದು ಸರಕಾರಗಳು ಆ ಶಾಲೆಗಳ ಮಕ್ಕಳಿಗೆ ಪುಸ್ತಕಗಳನ್ನು ನೀಡುತ್ತದೆ,ಆದರೆ ನಾನು ನನ್ನ ಪುಸ್ತಕಗಳ ಮಾರಾಟದಿಂದ ಬಂದ ಎಲ್ಲಾ ಹಣವನ್ನು ಆ ಶಾಲೆಯ ಮಕ್ಕಳಿಗೆ ಬ್ಯಾಗ್ ಮತ್ತಿತರೆ ವಸ್ತುಗಳ ಕೊಡಿಸಲು ನೀಡುವುದಾಗಿ ಕನಕಗಿರಿಯ ಗಜಲ್ ಸಾಹಿತಿ ಅಲ್ಲಾಗಿರಿರಾಜ್ ಮಾತನಾಡಿದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಗರದ ಗರುಡಾದ್ರಿ ಕಲಾ ಮಂದಿರದಲ್ಲಿ ಹಮ್ಮಿಕೊಂಡಿದ್ದ ವಿವಿಧ ಗಣ್ಯರಿಗೆ ಸನ್ಮಾನ ಹಾಗು ಕವಿಗೋಷ್ಟಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ,ಗಜಲ್ ಸಾಹಿತ್ಯ ಜಗತ್ತಿನಲ್ಲಿಯೆ ವಿಶಿಷ್ಟ ಪ್ರಕಾರದ ಸಾಹಿತ್ಯವಾಗಿದೆ.ಸಾಹಿತಿಗಳಾದವರು ಜನರಿಗೆ,ಸಮಾಜಕ್ಕೆ ಮತ್ತು ದೇಶದ ಪರಿವರ್ತನೆಗೆ ಸಾಕ್ಷಿಯಾಗುವಂತ ಸಾಹಿತ್ಯ ಬರೆಯಬೇಕು ಅಂತ ಸಾಹಿತ್ಯ ಗಟ್ಟಿಯಾಗಿ ಉಳಿಯಬಲ್ಲದು ಮತ್ತು ಪರಿವರ್ತನೆ ಮಾಡಬಲ್ಲದು ಎಂದರು.ಅಲ್ಲದೆ ಕಸಾಪ ಕೇವಲ ವರ್ಷದ ವ್ಯಕ್ತಿ ಎಂದು ಪ್ರಶಸ್ತಿ ಮಾತ್ರ ನೀಡದೆ ಅವರ ಕುರಿತು ಕರತಿಗಳನ್ನು ಬರೆಯಿಸಬೇಕು ಆಗ ಅವರ ಸಾಧನೆಯ ನೆನಪು ನೂರಾರು ವರ್ಷ ಉಳಿಯಲಿದೆ ಎಂದು ಸಲಹೆ ನೀಡಿದರು.

ನಂತರ ನಡೆದ ಕವಿಗೋಷ್ಟಿಯಲ್ಲಿ ಹಿರಿಯ ಸಾಹಿತಿಗಳಾದ ನಬಿಲಾಲ ಮಕಾಂದಾರ,ಕೆ.ವೀರಪ್ಪ,ಬೀರಣ್ಣ ಆಲ್ದಾಳ,ಹೆಚ್.ರಾಠೋಡ,ಗೋಪಣ್ಣ ಯಾದವ್,ಕುತುಬುದ್ದೀನ್ ಅಮ್ಮಾಪುರ, ರಾಜು ಕುಂಬಾರ,ಕನಕಪ್ಪ ವಾಗಣಗೇರಾ,ಶರಣಗೌಡ ಪಾಟೀಲ, ಸಿದ್ದಯ್ಯ ಪಾಟೀಲ,ನೀಲಮ್ಮ ನಾಗರಬೆಟ್ಟ,ವೀರಣ್ಣ ಕಲಕೇರಿ,ದೇವಿಂದ್ರಪ್ಪ ಕರಡಕಲ್,ಪ್ರಕಾಶ ಅಲಬನೂರ,ಮಲ್ಲಿಕಾರ್ಜುನ ಹುದ್ದಾರ,ಈರಯ್ಯ ಕೊಳ್ಳಿಮಠ,ಕೃಷ್ಣಮೂರ್ತಿ ಎ.ಎನ್.ನಾಗರಾಜ ಜಮದ್ರಖಾನಿ,ವೆಂಕಟೇಶಗೌಡ ಪಾಟೀಲ ಸೇರಿದಂತೆ ಅನೇಕರು ತಮ್ಮ ಕವನ ವಾಚನ ಮಾಡಿದರು.

ಅಧ್ಯಕ್ಷತೆ ವಹಿಸಿದ್ದ ಹಿರಿಯ ನಾಟಕಕಾರ ಎಲ್.ಬಿ.ಕೆ.ಆಲ್ದಾಳ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಮಾಜಿ ಸಚಿವ ರಾಜಾ ಮದನಗೋಪಾಲ ನಾಯಕ,ಕಸಾಪ ಜಿಲ್ಲಾಧ್ಯಕ್ಷ ಸಿದ್ದಪ್ಪ ಹೊಟ್ಟಿ,ಚಂದ್ರಕಾಂತ ಕರದಳ್ಳಿ,ಕಸಾಪ ಅಧ್ಯಕ್ಷ ಶ್ರೀನಿವಾಸ ಜಾಲವಾದಿ,ರಾಜೇಖರ ದೇಸಾಯಿ ಉಪಸ್ಥಿತರಿದ್ದರು.ದೇವು ಹೆಬ್ಬಾಳ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

2 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

8 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

18 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

20 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

20 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420