ಸಂಜೆ ಹೊತ್ತಿಗೆ
ಕೆಂಪು ಸೂರ್ಯನ
ಅಸ್ತಂಗತ,
ಕತ್ತಲಾಗುವ ಮೊದಲೇ
ವ್ಯೋಮಾವ್ಯೋಮದಲ್ಲಿ
ಮೂಡಿತೊಂದು
ಬದ್ಧ ಬುದ್ಧತ್ವದ
ಹೊಸ ನಕ್ಷತ್ರ.
ಉಂಡ ನೋವು
ಕೆಂಡವಾಗಿ
ಕೆಂಪೇರಿತ್ತು ನಡೆ-ನುಡಿ,
ಭಿಡೆಯಿಲ್ಲದ
ಬಂಡಾಯದ
ಭೀಮ ಹೆಜ್ಜೆಯಲ್ಲಿ
ನಿತ್ಯದ ನಡೆಯೂ ಚೆನ್ನ,
ಸತ್ಯದ ನುಡಿಯೂ ಚೆನ್ನ.
ಅಂಬಲಿಯ ನೇಮವಂತೂ
ಚಿನ್ನ-ಅಮೃತಕ್ಕೂ ಚೆನ್ನ.
ಬಾಯ್ತುಂಬ
ತಮ್ಮ, ತಂಗಿ, ಅಕ್ಕ, ಅವ್ವರ
ಶಬ್ದಾರ್ಥಗಳ ಹುಗ್ಗಿ,
ಆದರೂ,
ಅಂಗಿ-ಅಂಗ- ಸಂಗ
ಸಹವಾಸಗಳಲ್ಲೂ
ಕೆಂಪಿನದೇ ಸುಗ್ಗಿ.
ಹಂಪನಾಗೆ ಕೊಟ್ಟ
ಪರ್ಯಾಯದ ಕಾಟ,
ಚಂಪಾ ಮನೆಯ
ಶತಮಾನದ ಊಟ,
ಸಾವಿರದ ಏಕಲವ್ಯರ
ಬೆರಳುಳಿಸಿ ಕಲಿಸಿದ
ನಿತ್ಯ ಪಾಠ-
ಗೆಣೆಯ- ಗೆಣತಿಯರ
ಮಹಾಕೂಟ!!
ಅವರವರ ಭಾವಕ್ಕೆ
ಥರಥರಗುಡಿಸಿಯೂ
ನಾಡಿನೆಲ್ಲರ ಬಾಯಲ್ಲೂ
ಉಳಿದ ಒಬ್ಬನೇ ಅಣ್ಣ
ನೀ ಚೆನ್ನಣ್ಣ,
ಮುಂಜಾನೆಯ ಬೆಳಕಾಗುವುದನ್ನೇ
ಕಾಯುತ್ತಿರುವೆ ಚೆನ್ನಣ್ಣ,
ನೋಡಬೇಕಿದೆ ನಾಳಿನ
ಸೂರ್ಯನಿಗೆ ಇರಬಹುದೆ
ನಿ ಬಿಟ್ಟು ಹೋದ ಕೆಂಪು ಬಣ್ಣ!!
— + —
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…