ಬಿಸಿ ಬಿಸಿ ಸುದ್ದಿ

ಹಡಪದ ಸಂಘಟನೆಯ ಜಿಲ್ಲಾ ತಾಲೂಕು ಅಧ್ಯಕ್ಷರ ನೇಮಕ

ಸುರಪುರ: ಹಡಪದ ಸಮಾಜ ಶೈಕ್ಷಣಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಹಿಂದುಳಿದಿದೆ. ಸಂಘಟನೆಯಿಂದ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ’ ಎಂದು ಹಡಪದ ಸಮಾಜದ ಹಿರಿಯ ಮುಖಂಡ ಶರಣಪ್ಪ ಅಮ್ಮಾಪುರ ಹೇಳಿದರು.

ನಗರದ ಟೇಲರ್ ಮಂಜಿಲ್‌ನಲ್ಲಿ ಸಮಾಜದ ಜಿಲ್ಲಾ ಮತ್ತು ತಾಲ್ಲೂಕು ಘಟಕದ ಪದಾಧಿಕಾರಿಗಳ ನೇಮಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಸಮಾಜದ ಎಲ್ಲರೂ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು. ಮಕ್ಕಳು ಸಾಕ್ಷರರಾದರೆ ಸಮಾಜ ತನ್ನಿಂದ ತಾನೆ ಅಭಿವೃದ್ಧಿಯಾಗುತ್ತದೆ. ಈ ದಿಸೆಯಲ್ಲಿ ಸಮಾಜದ ಪದಾಧಿಕಾರಿಗಳು ಶ್ರಮಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಘಟಕದ ಅಧ್ಯಕ್ಷರಾಗಿ ನೇಮಕಗೊಂಡ ಡಾ. ಮಲ್ಲಿಕಾರ್ಜುನ ಹಡಪದ ಮತನಾಡಿ, ಜಿಲ್ಲೆಯಲ್ಲಿ ಹಡಪದ ಸಮಾಜದ ೫೦೦ ಕ್ಕೂ ಹೆಚ್ಚು ಕುಟುಂಬಗಳು ಇವೆ. ನಾವು ಸಂಘಟಿತರಾದಾಗ ರಾಜಕೀಯವಾಗಿ ಪ್ರಬಲರಾಗಲು ಸಾಧ್ಯ ಎಂದರು. ತಾಲ್ಲೂಕು ಘಟಕದ ಅಧ್ಯಕ್ಷರಾದ ನಿಂಗಣ್ಣ ಹಡಪದ ಯಾಳಗಿ ಮಾತನಾಡಿ, ಸಮಾಜದ ಏಳಿಗೆಗಾಗಿ ಜಿಲ್ಲಾ ಮತ್ತು ತಾಲ್ಲೂಕು ಘಟಕದ ಪದಾಧಿಕಾರಿಗಳು ಶ್ರಮಿಸುತ್ತಾರೆ. ಸಮಾಜ ಬಾಂಧವರ ಸಮಸ್ಯೆಗೆ ಸ್ಪಂಧಿಸಲಾಗುವುದು ಎಂದರು.

ನಗರ ಘಟಕದ ಅಧ್ಯಕ್ಷ ದೇವಿಂದ್ರಪ್ಪ ರುಕ್ಮಾಪುರ ಮಾತನಾಡಿದರು. ತಾಲ್ಲೂಕು ಘಟಕದ ಉಪಾಧ್ಯಕ್ಷ ಮಲ್ಲಿಕಾರ್ಜುನ ಯಕ್ತಾಪುರ ಸ್ವಾಗತಿಸಿದರು. ನಗರ ಘಟಕದ ಕಾರ್ಯದರ್ಶಿ ನಿಂಗಣ್ಣ ಸಿದ್ದಾಪುರ ನಿರೂಪಿಸಿದರು. ಆದೇಶ ಹೆಮನೂರ ವಂದಿಸಿದರು. ದೇವಿಂದ್ರ ಹಡಪದ, ಹಣಮಂತ ಸುರಪುರ, ಸಣ್ಣಶರಣಪ್ಪ ಅಮ್ಮಾಪುರ, ಮಲ್ಲಣ್ಣ ಚಿಕ್ಕನಳ್ಳಿ, ತಿರುಪತಿ ಚಿಕ್ಕನಳ್ಳಿ, ಹಂಪಣ್ಣ ಕೆಂಭಾವಿ, ನೀಲಕಂಠ ಕಕ್ಕೇರಾ, ಮಲ್ಲಿಕಾರ್ಜುನ ಜಾಲಿಬೆಂಚಿ ಇತರರು ಇದ್ದರು.

emedialine

Recent Posts

ಕಾಳಗಿ; ರಟಕಲ್ ಗ್ರಾಮದಲ್ಲಿ ವಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

1 min ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

1 hour ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

4 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

5 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

19 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

19 hours ago