ಬಿಸಿ ಬಿಸಿ ಸುದ್ದಿ

ಕಂದಾಯ ಇಲಾಖೆಯ 3 ಸಿಬ್ಬಂದಿಗಳ ಅಮಾನತು

ಕಲಬುರಗಿ: ಕಲಬುರಗಿ ವಿಭಾಗದ ಕಂದಾಯ ಇಲಾಖೆಯ ವ್ಯಾಪ್ತಿಯ ವಿವಿಧ ಕಚೇರಿಗಳಿಗೆ ನಿಯೋಜನೆ ಮೇಲಿದ್ದ ನೌಕರರನ್ನು ನಿಯೋಜನೆ ರದ್ದುಗೊಳಿಸಿ ಮೂಲ ಹುದ್ದೆಯಲ್ಲಿ ಕರ್ತವ್ಯಕ್ಕೆ ಹಾಜರಗಾಲು ಆದೇಶಿಸಿದ್ದರು ಸಹ ಮೂಲ ಹುದ್ದೆಯಲ್ಲಿ ಹಾಜರಾಗದೇ ಕರ್ತವ್ಯ ಲೋಪವೆಸಗಿದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ಮೂರು ಸಿಬ್ಬಂದಿಗಳನ್ನು ಇಲಾಖಾ ವಿಚಾರಣೆ ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಸುಬೋಧ ಯಾದವ್ ಅವರು ಬುಧವಾರ ಆದೇಶ ಹೊರಡಿಸಿದ್ದಾರೆ.

ಯಾದಗಿರಿ ಜಿಲ್ಲಾಧಿಕಾರಿಗಳ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಶಾಜಿಯಾ ಪರ್ವಿನ್ ಅವರನ್ನು ರಾಯಚೂರ ಜಿಲ್ಲಾಧಿಕಾರಿಗಳ ಕಚೇರಿಗೆ ದಿ.೧೩-೦೨-೨೦೧೩ರಂದು, ಯಾದಗಿರಿ ಜಿಲ್ಲೆಯ ಶಹಾಪುರ ತಹಶೀಲ್ದಾರ ಕಚೇರಿಯ ಗ್ರಾಮ ಲೆಕ್ಕಿಗರಾದ ರೇಷ್ಮಾ ಒಂಟಿ ಅವರನ್ನು ಕೊಪ್ಪಳ ತಹಶೀಲ್ದಾರರ ಕಚೇರಿಗೆ ದಿ.೩೧-೦೭-೨೦೧೪ ರಂದು ಹಾಗೂ ಕಲಬುರಗಿ ತಹಶೀಲ್ದಾರ ಕಚೇರಿಯ ಗ್ರಾಮ ಲೆಕ್ಕಿಗರಾದ ಫಕೀರವ್ವ ಹೆಚ್.ಎನ್. ಅವರನ್ನು ಕೊಪ್ಪಳ ತಹಶೀಲ್ದಾರರ ಕಚೇರಿಗೆ ದಿ.೦೮-೧೧-೨೦೧೪ ರಂದು ನಿಯೋಜಿಸಲಾಗಿತ್ತು.

ಮೂರು ವರ್ಷಕ್ಕಿಂತ ಹೆಚ್ಚಿನ ಅವಧಿಯ ಈ ನಿಯೋಜನೆಗಳನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಠಿಯಿಂದ ಕಳೆದ ೨೦೧೯ರ ಆಗಸ್ಟ್ ೧೭ ರಂದು ಪ್ರಾದೇಶಿಕ ಆಯುಕ್ತರು ರದ್ದುಗೊಳಿಸಿ, ಮೂಲ ಹುದ್ದೆಯಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ನೌಕರರಿಗೆ ಸೂಚನೆ ನೀಡಲಾಗಿತ್ತು. ಆದರೂ ಈ ಸಿಬ್ಬಂದಿಗಳು ಮೂಲ ಹುದ್ದೆಗೆ ಹಾಜರಾಗದೆ ಮೇಲಾಧಿಕಾರಿಗಳ ಆದೇಶ ಪಾಲಿಸಿರುವುದಿಲ್ಲ.

ಮೇಲಾಧಿಕಾರಿಗಳ ಆದೇಶ ಪಾಲಿಸದ ಹಾಗೂ ಕರ್ತವ್ಯ ಲೋಪವೆಸಗಿದ ಹಿನ್ನೆಲೆಯಲ್ಲಿ ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಹಾಗೂ ಮೇಲ್ಮನವಿ) ನಿಯಮಾವಳಿಗಳು ೧೯೫೭ರ ನಿಯಮ ೧೦(೧) (ಡಿ) ರನ್ವಯ ಮೇಲ್ಕಂಡ ಮೂರು ಸಿಬ್ಬಂದಿಯವರನ್ನು ತಕ್ಷಣ ಜಾರಿಗೆ ಬರುವಂತೆ ಇಲಾಖಾ ವಿಚಾರಣೆ ಕಾಯ್ದಿರಿಸಿ ಅಮಾನತುಗೊಳಿಸಲಾಗಿದೆ.

ಅಮಾನತ್ತಿನ ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೇ ನೌಕರರು ಕೇಂದ್ರ ಸ್ಥಾನ ಬಿಡುವಂತಿಲ್ಲ. ಈ ಅವಧಿಯಲ್ಲಿ ಸಿಬ್ಬಂದಿಗಳು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳ ನಿಯಮ ೯೮ರನ್ವಯ ಜೀವನಾಧಾರ ಭತ್ಯೆ ಪಡೆಯಲು ಅರ್ಹರಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

1 hour ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

1 hour ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

1 hour ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago