ಬಿಸಿ ಬಿಸಿ ಸುದ್ದಿ

ವೈದ್ಯರ ಸಲಹೆಯಿಲ್ಲದೆ ಔಷಧ ಸೇವನೆ ಬೇಡ

ಕಲಬುರಗಿ: ಇಂದಿನ ಆಧುನಿಕ ಒತ್ತಡದ ಬದುಕಿನಿಂದ ವಿವಿಧ ರೋಗಗಳು ಉದ್ಭವವಾಗುತ್ತಿವೆ. ರೋಗಕ್ಕೆ ತಕ್ಕಂತೆ ಔಷಧ ಸೇವನೆ ಮಾಡಬೇಕು. ವೈದ್ಯರನ್ನು ಸಂಪರ್ಕಿಸದೆ ಸ್ವಯಂ ವೈದ್ಯರಂತೆ ವರ್ತಿಸಿ ಔಷಧವನ್ನು ಸೇವನೆ ಮಾಡುವುದು ಅಪಾಯಕಾರಿಯಾಗಿದೆಯೆಂದು ಖ್ಯಾತ ಕುಟುಂಬ ವೈದ್ಯ ಡಾ.ಸಂತೋಷ ರೆಡ್ಡಿ ಸಲಹೆ ನೀಡಿದರು.

ಅವರು ನಗರದ ಆಳಂದ ಚೆಕ್ ಪೋಸ್ಟ್‌ನಲ್ಲಿರುವ, ’ಶ್ರೇಯಸ್ ಕ್ಲಿನಿಕ್ & ಮೆಡಿಕಲ್ಸ್’ನಲ್ಲಿ, ಇಲ್ಲಿನ ’ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಬುಧವಾರ ’ಔಷಧ ಸಪ್ತಾಹ ಆಚರಣೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಕ್ಲಿನಿಕ್ ಮುಖ್ಯಸ್ಥ ಸೋಮಶೇಖರ ಬಿ.ಮೂಲಗೆ ಮಾತನಾಡಿ, ಕಾಯಿಲೆಯ ಪ್ರಮಾಣಕ್ಕೆ ಹೊಂದಿಕೊಳ್ಳುವಂತಹ ಪ್ರಮಾಣದಲ್ಲಿ ಮಾತ್ರೆ, ಔಷಧ ಸೇವಿಸಬೇಕು. ಬೇಗ ಕಡಿಮೆಯಾಗಬೇಕೆಂಬ ಉದ್ದೇಶದಿಂದ ಹೈಡೋಸ್ ಮಾತ್ರೆ ಸೇವನೆ ಅಡ್ಡ ಪರಿಣಾಮ ಬೀರುತ್ತದೆ. ನೋವು ಶಮನಕಾರಿ ಮಾತ್ರಗಳಿಗೆ ಅಂಟಿಕೊಳ್ಳುವ ಚಟ ಒಳ್ಳೆಯದಲ್ಲವೆಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಬಳಗದ ಸಂಸ್ಥಾಪಕ ಅಧ್ಯಕ್ಷ ಪ್ರೊ.ಎಚ್.ಬಿ.ಪಾಟೀಲ, ಒತ್ತಡದ ಬದುಕಿನಲ್ಲಿ ಆರೋಗ್ಯದ ಕಡೆಗೆ ಲಕ್ಷ್ಯ ವಹಿಸದಿರುವ್ಯದರಿಂದ ಕಾಯಿಲೆಗಳಿಗೆ ನಾವೇ ಆಹ್ವಾನ ನೀಡುವಂತಾಗಿದೆ. ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಆರೋಗ್ಯದಲ್ಲಿ ಏನಾದರೂ ಏರು-ಪೇರಾದರೆ ಅದಕ್ಕೆ ಸೂಕ್ತ ಚಿಕಿತ್ಸೆ ಪಡೆಯಬೇಕೆಂದರು. ಕಾರ್ಯಕ್ರಮದಲ್ಲಿ ಪ್ರಮುಖರಾದ ರಾಜಶೇಖರ ಬಿ.ಮರಡಿ, ಶಿವರಾಜ ಸುರಪ್ಪಗೋಳ್, ಕಾರ್ತಿಕ ಹಡಪದ, ನರಸಪ್ಪ ಬಿರಾದಾರ ದೇಗಾಂವ, ಡಾ.ಯೂಸಫ್ ಮಿಯಾ ಸೇರಿದಂತೆ ಹಲವರಿದ್ದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

21 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

24 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

27 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

1 hour ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

2 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

5 hours ago