ಬಬಲಾದ ಶ್ರೀಮಠದಲ್ಲಿ ಶಿವಾನುಭವಗೋಷ್ಠಿಯ

ಕಲಬುರಗಿ: ದೌರ್ಬಲ್ಯಕ್ಕೆ ಪರಿಹಾರ ಅದರ ಕುರಿತು ಆಲೋಚಿಸುವುದಲ್ಲಾ ಆದರೆ ಶಕ್ತಿಯನ್ನು ಕುರಿತು ವಿಚಾರ ಮಾಡುವುದು ಜನರಿಗೆ ಅವರಲ್ಲಿರುವ ಶಕ್ತಿಯ ವಿಚಾರವಾಗಿ ಜಾಗೃತ ಮಾಡುತ್ತಿರುವ ಶ್ರೀಮಠದ ಕಾರ್ಯ ಶ್ಲಾಘನೀಯ ಎಂದು ಕಣ್ಣೂರ ಸರಕಾರಿ ಶಾಲೆಯ ಶಿಕ್ಷಕರಾದ ಸಂಗಮೇಶ ಕೊಪ್ಪರದ ಹೇಳಿದರು.

ಸೋಮವಾರ ನಗರದ ಭವಾನಿನಗರದಲ್ಲಿರುವ ಬಬಲಾದ ಶ್ರೀಮಠದಲ್ಲಿ ನಡೆದ ಶಿವಾನುಭವಗೋಷ್ಠಿಯ ೭೭ನೇ ಮಾಲಿಕೆಯಲ್ಲಿ ಉಪನ್ಯಾಸ ನೀಡುತ್ತಾ ಇಂದಿನ ದಿನಮಾನಗಳಲ್ಲಿ ಮನುಷ್ಯ ಹಣ ಗಳಿಸುವದರೊಂದಿಗೆ ಶ್ರೀಮಂತನಾಗುತ್ತಿದ್ದಾನೆ ಆದರೆ ಸಂಸ್ಕಾರ, ಶಾಂತಿ, ಸಮಾಧಾನ ಕಳೆದುಕೊಂಡು ಅತೃಪ್ತಿಯ ಬದುಕು ಸಾಗಿಸುತ್ತಿದ್ದಾನೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿಶೇಷ ಪ್ರವಚನ ನೀಡಿದ ಈ ಭಾಗದ ಪ್ರವಚನ ಪಟುಗಳಾದ ಸಂಗಮೇಶ ಶಾಸ್ತ್ರೀ ಮಾಶಾಳ ಮಾತನಾಡುತ್ತಾ ಶರಣರು ನಡೆ-ನುಡಿ ಒಂದಾಗಿಸಿಕೊಂಡು ಜೀವನ ನಡೆಸಿ ಅಮರರಾಗಿದ್ದಾರೆ ಆದರೆ ನಾವು ನಡೆ-ನುಡಿ ಒಂದಾಗಿಸಿ ಜೀವನ ನಡೆಸದೆ ಸಮಾಜ ಅಧೋಗತಿಗೆ ಸಾಗುತ್ತಿದೆ. ಶಾಂತಿ, ಸಮೃದ್ಧಿ, ಜೀವನಕ್ಕೆ ಶರಣ ಸಂತರ ವಿಚಾರಗಳು ಉತ್ತಮ ಜೀವನಕ್ಕೆ ದಾರಿದೀಪವಾಗುತ್ತವೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಪದವಿ ಪೂರ್ವ ಕಾಲೇಜಿಗೆ ಉಪನ್ಯಾಸಕರಾಗಿ ನೇಮಕಾತಿಗೊಂಡ ಬಸವರಾಜ ಜೋಗೂರ ಅವರನ್ನು ಗೌರವಿಸಲಾಯಿತು. ನ್ಯಾಯವಾದಿ ಹಣಮಂತರಾಯ ಎಸ್. ಅಟ್ಟೂರ ನಿರೂಸಿದರು, ಸಂಚಾಲಕರಾದ ಸಂಗಮೇಶ ಹೂಗಾರ ಸ್ವಾಗತಿಸಿದರು, ಧನರಾಜ ಸಣಮನಿ ವಂದಿಸಿದರು.

ಕಾರ್ಯಕ್ರಮದಲ್ಲಿ ಶ್ರೀಮಠದ ಕಾರ್ಯದಶಿ ಸಂಗಮೇಶ ಹೂಗಾರ, ಅಣ್ಣಪ್ಪ ಅಪಚಂದ, ಶಿವಕುಮಾರ ಗಣಜಲಖೇಡ, ಜಗನ್ನಾಥ ಸಜ್ಜನ ಸೇರಿದಂತೆ ಶ್ರೀ ಮಠದ ಅನೇಕ ಭಕ್ತರೂ ಭಾಗವಹಿಸಿದ್ದರು.

emedialine

Recent Posts

ಟ್ರಾಮಾ‌ ಕೇರ್ ನಲ್ಲಿ ನಿರಂತರ ಚಿಕಿತ್ಸೆ, : ವೈದ್ಯರ ಪರಿಶ್ರಮಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಶ್ಲಾಘನೆ

ಕಲಬುರಗಿ: ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಯುವಕನೊಬ್ಬನಿಗೆ ಸುಮಾರು 45 ದಿನಗಳ ಕಾಲ ಐಸಿಯು‌ನಲ್ಲಿ‌‌ ಚಿಕಿತ್ಸೆ ನೀಡುವುದರ ಜೊತೆಗೆ ಅಗತ್ಯವಿದ್ದ ಕ್ಲಿಷ್ಟಕರ…

2 hours ago

ಇಂದಿನ ಮಕ್ಕಳಿಗೆ ಪಠ್ಯದೊಂದಿಗೆ ಪಠ್ಯೆತರ ಚಟುವಟಿಕೆ ಅನಿವಾರ್ಯ

ಕಲಬುರಗಿ; ಕ್ರೀಡ ಚಟುವಟಿಕೆ ಹಮ್ಮಿಕೊಳ್ಳುವ ಮೂಲಕ ಮಕ್ಕಳ ಸರ್ವೋತೊಅಭಿವೃದ್ದಿಗೆ ಮುಂದಾಗಿರುವುದು ಸಂತೋಷದಾಯಕ ಜೊತೆಗೆ ಮಕ್ಕಳಿಗೆ ಈ ಸ್ಪರ್ಧೆಗಳಲ್ಲಿ ಭಾಗವಹಿಸಲು ಪ್ರೋತ್ಸಹ…

2 hours ago

ಗ್ರಾಮೀಣ ಪ್ರದೇಶದಲ್ಲಿ ಘನ-ತಾಜ್ಯ ನಿರ್ವಹಣೆ ಕುರಿತು ತರಬೇತಿ

ಕಲಬುರಗಿ: ನಗರದಲ್ಲಿರುವ ಅಬ್ದುಲ್‌ ನಜೀರ್‌ ಸಾಬ್‌ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆ ಪ್ರಾದೇಶಿಕ ಕೇಂದ್ರ ಕಲಬುರಗಿಯಲ್ಲಿ, ಅಬ್ದುಲ್‌…

2 hours ago

ಶ್ರೀ ವಿನಾಯಕ ಮಿತ್ರ ಮಂಡಳಿಯಿಂದ ಗಣೇಶ್ ವಿಸರ್ಜನೆ

ಕಲಬುರಗಿ: ಬಿದ್ದಾಪುರ ಕಾಲೋನಿಯಲ್ಲಿ ಶ್ರೀ ವಿನಾಯಕ ಮಿತ್ರ ಮಂಡಳಿ ವತಿಯಿಂದ ಗಣೇಶ್ ವಿಸರ್ಜನೆ ಕಾರ್ಯಕ್ರಮವನ್ನು ನೆರವೇರಿತು. ವಿನಾಯಕ ಪುರಾಣಿಕ್, ಅನಿಲ್…

2 hours ago

ಅಯ್ಯಪ್ಪ ಸ್ವಾಮಿ ಮಹಾ ಪೂಜಾ ಕಾರ್ಯಕ್ರಮಕ್ಕೆ ಚಾಲನೆ

ಕಲಬುರಗಿ: ನಾಗನಹಳ್ಳಿ ಕ್ರಾಸ್‍ನಲ್ಲಿರುವ ಗುರುಸ್ವಾಮಿಗಳಾದ ಅಶೋಕ ಹೊನ್ನಳ್ಳಿ ಸನ್ನಿಧಾನದಲ್ಲಿ ಅಯ್ಯಪ್ಪ ಸ್ವಾಮಿ ಮಹಾ ಪೂಜಾ ಕಾರ್ಯಕ್ರಮದಲ್ಲಿ ಮುಗುಳನಾಗಾವ ಅಭಿನವ ಶ್ರೀ…

2 hours ago

ಹುಂಡೈ ಅಲ್ಕಾಜರ್ ನೂತನ ಮಾದರಿ ಕಾರು ಮಾರುಕಟ್ಟೆಗೆ

ಕಲಬುರಗಿ: ಹುಮನಾಬಾದ್ ರಿಂಗ್ ರಸ್ತೆಯಲ್ಲಿ ಶಹಾ ಹುಂಡೈ ಶೋರೂಂನಲ್ಲಿ ಹುಂಡೈ ಕಂಪನಿಯ ಹೊಸ ಮಾದರಿಯ ಅಲ್ಕಾಜರ್  ನೂತನ ಮಾದರಿ ಕಾರನ್ನು…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420