ಕಲಬುರಗಿ: ಜಿಲ್ಲೆಯಲ್ಲಿ ರೈಲ್ವೆ ವಿಭಾಗೀಯ ಕಚೇರಿಯ ಸ್ಥಾಪಸಿಲ್ಲು ಜನಪರ ಹಾಗೂ ಪ್ರಸ್ತಾವನೆ ಸಲ್ಲಿಕೆ ಹೈದ್ರಾಬಾದ ಕರ್ನಾಟಕ ಜನಪರ ಸಂಘರ್ಷ ಸಮಿತಿಯ ವತಿಯಿಂದ ಕಲಬುರಗಿ ರೈಲ್ವೆ ವಿಭಾಗಿಯ ಕಚೇರಿಯ ಸ್ಥಾಪನೆಗೆ ಪ್ರಾದೇಶಿಕ ಆಯುಕ್ತ ಸುಭೋದ್ ಯಾದವ್ ಅವರಿಗೆ ಇಂದು ಭೇಟಿ ನೀಡಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಲಕ್ಷಣ ದಸ್ತಿ ಮಾತನಾಡಿ, 1984 ರ ಸರೀನ್ ಕಮಿಟಿ ವರದಿಯಿಂದ ಇಲ್ಲಿಯವರೆಗೆ ಕೇಂದ್ರ ಸರಕಾರದ ಮಟ್ಟದಲ್ಲಿ ರೈಲ್ವೆ ವಿಭಾಗೀಯ ಕಚೇರಿಯ ಬಗ್ಗೆ ನಡೆದುಬಂದ ದಾರಿ ಮತ್ತು ಕೈಗೊಂಡ ಕ್ರಮಗಳ ವಿಷಯಗಳ ಬಗ್ಗೆ ಸುಮಾರು 10 ಪುಟಗಳ ವಿವರವಾದ ಪ್ರಸ್ತಾವನೆಯನ್ನು ಪ್ರಾದೇಶಿಕ ಆಯುಕ್ತರಿಗೆ ಸಲ್ಲಿಸಿ, ರೈಲ್ವೆ ವಿಭಾಗೀಯ ಕಚೆರಿಯ ಬಗ್ಗೆ ಸರಕಾರಕ್ಕೆ ಅಧಿಕೃತವಾಗಿ ಪ್ರಸ್ತಾವನೆ ಕಳುಹಿಸಲು ಮನವಿ ಮಾಡಲಾಯಿತು.
ಪ್ರಾದೇಶಿಕ ಆಯುಕ್ತರು ರೈಲ್ವೆ ವಿಭಾಗೀಯ ಕಚೇರಿಯ ವಿಷಯವಾಗಿ ಈಗಾಗಲೇ ಸರಕಾರ ತಮಗೆ ಮಾಹಿತಿ ಕೇಳಿದೆ, ಅದಕ್ಕೆ ಪೂರಕವಾಗಿ ಕಲಬುರಗಿ ರೈಲ್ವೆ ವಿಭಾಗೀಯ ಕಚೇರಿಗೆ ಸಂಬಂಧಿಸಿ ಅರ್ಹತೆ ಹೊಂದಿರುವ ಎಲ್ಲಾ ಅಂಶಗಳನ್ನು ವಿಸ್ತ್ರತವಾಗಿ ದಾಖಲಾತಿಗಳೊಂದಿಗೆ ಸಂಗ್ರಹಿಸಿ ಸರಕಾರಕ್ಕೆ ವಾಸ್ತವಿಕವಾದ ಪ್ರಸ್ತಾವನೆಯನ್ನು ಸಲ್ಲಿಸಲಾಗುವದೆಂದು ಆಯೋಕ್ತರು ತಿಳಿಸಿದ್ದಾರೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಲಕ್ಷ್ಮಣ ದಸ್ತಿ, ರೈಲ್ವೆ ವಿಭಾಗೀಯ ಕಚೇರಿಯ ವಿಷಯಕ್ಕೆ ಸಂಬಂಧಿಸಿದ ಪರಿಣಿತರಾದ ಸುನಿಲ್ ಎಚ್, ಆನಂದ ದೇಶಪಾಂಡೆ, ಇಂದುಧರ ಜಾಧವ್, ಬಸವರಾಜ ಯರಗೋಳ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…