ಡಿ. 1ರಂದು ಕಡಕೋಳ ಅವರ ಯಡ್ರಾಮಿ ಸೀಮೆ ಕಥನಗಳು ಕೃತಿ ಬಿಡುಗಡೆ

0
103

ಕಲಬುರಗಿ: ಕಲಬುರಗಿ ಅಭಿವ್ಯಕ್ತಿ -ದಾವಣಗೆರೆ ವತಿಯಿಂದ ನಗರದ ಕನ್ನಡ ಸಾಹಿತ್ಯ ಪರಿಷತ್ ನ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ಡಿಸೆಂಬರ್ 1ರಂದು ಬೆಳಗ್ಗ 10.30ಕ್ಕೆ ಲೇಖಕ ಮಲ್ಲಿಕಾರ್ಜುನ ಕಡಕೋಳ ಅವರ “ಯಡ್ರಾಮಿ ಸೀಮೆ ಕಥನಗಳು” ಪುಸ್ತಕ ಬಿಡುಗಡೆ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಕರ್ನಾಟಕ ಕೇಂದ್ರೀಯ ವಿವಿ ಕುಲಪತಿ ಎಚ್.ಎಂ. ಮಹೇಶ್ವರಯ್ಯ ಕೃತಿ ಬಿಡುಗಡೆ ಮಾಡುವರು. ಹಿರಿಯ ಸಂಸ್ಕೃತಿಕ ಚಿಂತಕ ಪ್ರೊ. ಆರ್.ಕೆ. ಹುಡಗಿ ಅಧ್ಯಕ್ಷತೆ ವಹಿಸಲಿದ್ದಾರೆ. ಗುಲ್ಬರ್ಗ ವಿವಿ ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕ ಪ್ರೊ. ಎಚ್.ಟಿ. ಪೋತೆ ಕೃತಿ ಕುರಿತು ಮಾತನಾಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here