ಲಾರಿ ಡಿಕ್ಕಿ: ಬಾಲಕ ಸ್ಥಳದಲ್ಲೇ ಸಾವು

0
108

ಕಲಬುರಗಿ: ರಸ್ತೆ ಬದಿಗೆ ನಿಂತಿದ್ದಾಗ ಲಾರಿ ಡಿಕ್ಕಿ ಹೊಡೆದು ಬಾಲಕನೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ ಕಲಬುರಗಿ-ಜೇವರ್ಗಿ ರಸ್ತೆಯ ಫರತಾಬಾದ ಬಸ್ ನಿಲ್ದಾಣದ ಎದರುಗಡೆ ನಡೆದಿದೆ.

ತೆಲಂಗಾಣ ರಾಜ್ಯದ ಕಾಮರೆಡ್ಡಿ ಜಿಲ್ಲೆಯ ವಿಠಲವಾಡಿ ಗ್ರಾಮದ ಅರವಿಂದ ಲಕ್ಷ್ಮಣ ರಾಠೋಡ್ (8) ಮೃತಪಟ್ಟ ಬಾಲಕ. ಇಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ಬಾಲಕ ಅರವಿಂದನ ಪಾಲಕರು ಕಬ್ಬು ಕಡಿಯುವ ಕೆಲಸಕ್ಕೆಂದು ತೆಲಂಗಾಣ ರಾಜ್ಯದಿಂದ ಇಲ್ಲಿಗೆ ಬಂದಿದ್ದು,ಕೆಲಸಕ್ಕೆಂದು ಯಡ್ರಾಮಿಗೆ ಹೊರಡಬೇಕಾಗಿದ್ದ ವೇಳೆ ಅವರನ್ನು ಕರೆದುಕೊಂಡು ಹೋಗಬೇಕಿದ್ದ ವಾಹನ ಕೆಟ್ಟಿದ್ದರಿಂದ ಬೇರೆ ವಾಹನಕ್ಕಾಗಿ ಕಾಯುತ್ತ ರಸ್ತೆ ಬದಿಗೆ ನಿಂತಿದ್ದರು ಎಂದು ತಿಳಿದುಬಂದಿದೆ.

Contact Your\'s Advertisement; 9902492681

ಈ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದು ಬಾಲಕ ಅರವಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಮಗುವನ್ನು ಕಳೆದುಕೊಂಡ ಪಾಲಕರ ಆಕ್ರಂದನ ರಸ್ತೆಯಲ್ಲಿ ಮುಗಿಲು ಮುಟ್ಟಿತ್ತು. ಸುದ್ದಿ ತಿಳಿದು ಸಂಚಾರಿ ಪೊಲೀಸ್ ಠಾಣೆಯ ಪಿಐ ರಮೇಶ ಕಾಂಬಳೆ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಂಚಾರಿ ಪೊಲೀಸ್ ಠಾಣೆ-1ರಲ್ಲಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here