ಬಿಸಿ ಬಿಸಿ ಸುದ್ದಿ

ಶಿಕ್ಷಣ ಕ್ಷೇತ್ರ ನೋಡಿದರೆ ಕಾರ್ಮಿಕರನ್ನು ನಿರ್ಮಿಸುವ ಒಂದು ಕಾರ್ಖಾನೆಯಾಗಿದೆ: ಶೈಲಾ ಅಂಜುಟಗಿ

ಕಲಬುರಗಿ: ಭಾರತದ ಮಣ್ಣಿನ ವಿಶೇಷತೆ ಎಂದರೆ, ಒಂದು ವೃತ್ತಿಯನ್ನು ಕೇವಲ ವೃತ್ತಿಯರೀತಿಯಲ್ಲಿಕಾಣದೇ, ಮಾಡುವ ಕೆಲಸದಲ್ಲಿಕಾಯಕದಲ್ಲಿದೇವರನ್ನುಕಾಣುತ್ತೇವೆ. ಅದಕ್ಕೆ ಬಸವಣ್ಣನವರುಕೂಡಕಾಯಕವೇ ಕೈಲಾಸ ಎಂದಿದ್ದು. ಆದರೆ ಇಂದು ಶಿಕ್ಷಣ ಕ್ಷೇತ್ರ ನೋಡಿದರೆ ಕಾರ್ಮಿಕರನ್ನು ನಿರ್ಮಿಸುವ ಒಂದು ಕಾರ್ಖಾನೆ ರೀತಿ ಇಂದಿನ ಶಿಕ್ಷಣ ಪದ್ದತಿ ಕೆಲಸಗಾರರನ್ನು ತಯಾರಿಸುತ್ತಿದಯೇ ಹೊರತು ವ್ಯಕ್ತಿತ್ವವನ್ನು ನಿರ್ಮಿಸುವುದಿಲ್ಲ. ಶಿಕ್ಷಕರ ಬೋಧನೆ ವ್ಯಕ್ತಿತ್ವ ನಿರ್ಮಿಸುವಂತಿರಬೇಕು ಎಂದು ಎಂದು ಶ್ರೀ ವೀರಸಂಗಮೇಶ್ವರ ವಿದ್ಯಾಪೀಠದ ಕಾರ್ಯದರ್ಶಿಗಳಾದ ಶೈಲಾ ರಾಯಗೊಂಡಪ್ಪ ಅಂಜುಟಗಿ ಅವರು ಕರೆ ನೀಡಿದರು.

ಇತ್ತೀಚೆಗೆ ಅಫಜಲ್ಪೂರಿನ ಶಿರವಾಳದಲ್ಲಿರುವ ಶ್ರೀ ವೀರಸಂಗಮೇಶ್ವರ ವಿದ್ಯಾಪೀಠದಲ್ಲಿ ನಡೆದ ಶಿಕ್ಷಕರಿಗಾಗಿ ಜರುಗಿದ ಬೋಧನಾ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು,ಮೊದಲುಗುರುವೇ ನಮಃ, ಅನ್ನುವುದು ಈಗ ಗುರುವೇನ್ ಮಹಾ ಎಂದಾಗುತ್ತಿದೆ. ಇದುತುಂಬ ಆತಂಕಕಾರಿ ಸಂಗತಿ. ನಿಟ್ಟಿನಲ್ಲಿ ಮಕ್ಕಳಲ್ಲಿನ ವಿಶೇಷ ಕೌಶಲ್ಯಗಳನ್ನು ಗುರ್ತಿಸಿ ಅವರಲ್ಲಿನ ಪ್ರತಿಭೆ ಹೊರತೆಗೆಯುವ ಕೆಲಸ ಶಿಕ್ಷಕರಿಂದಾಗಬೇಕಾಗಿದೆ. ಆವಾಗಲೇ ಡಾ..ಪಿ,ಜೆ.ಅಬ್ದುಲ್ ಕಲಾಂ ಅವರ ಭಾರವನ್ನುಒಂದು ವಿಶ್ವಶಕ್ತಿದೇಶವನ್ನಾಗಿ ನಿರ್ಮಿಸಲು ಸಾಧ್ಯವಾಗುತ್ತದೆಎಂದು ಮಾರ್ಮಿಕವಾಗಿ ನುಡಿದರು.

ತರಬೇತಿ ನೀಡಲು ಬೆಂಗಳೂರಿನಿಂಧ ಆಗಮಿಸಿದ ಮನೋತಜ್ಙ ಹಾಗೂ ಶೈಕ್ಷಣಿಕತಜ್ಞ, ಭುಜಬಲಿ ಬೋಗಾರಅವರು ಶಿಕ್ಷಕರಿಗೆ ಆಪ್ತ ಸಮಾಲೋಚನೆಯ ವಿವಧ ಸ್ತರಗಳನ್ನು ಪ್ರಾಯೋಗಿಕ ತಂತ್ರಗಳ ಮೂಲಕ ಮನದಟ್ಟು ಮಾಡಿಕೊಟ್ಟರು. ಉಪನ್ಯಾಸಕರಾಗಿಕಾಲೇಜಿಗೆ ಹೋಗುವಾಗ ಮನಸ್ಸಿನಲ್ಲಿರುವ ಆತಂಕ, ಗೊಂದಲ ಹಾಗೂ ಮಾನಸಿಕ ಒತ್ತಡಕ್ಕೆ ಒಳಗಾಗಿ ಪಾಠ ಮಾಡಬಾರದು. ಬದಲಾಗಿಎಲ್ಲವನ್ನು ಮರೆತು ವಿದ್ಯಾರ್ಥಿಗಳಿಗೆ ಅತ್ಯುತ್ತಮ ಉಪನ್ಯಾಸಕರಾಗಿ ಬೋಧನೆ ಮಾಡಬೇಕು. ಮನೆಗೆ ಹೋಗುವಾಗಲೂ ಕಾಲೆಜಿನಲ್ಲಿರುವ ಯಾವುದೇ ರೀತಿಯ ಆಂತರಿಕ ಒತ್ತಡವನ್ನು ತೆಗೆದುಕೊಂಡು ಹೋಗದೇಒಬ್ಬ ಸಹೋದರಿಯಾಗಿ, ತಾಯಿಯಾಗಿ, ಹೆಂಡತಿಯಾಗಿ ತಮ್ಮ ತಮ್ಮ ಜವಾಬ್ದಾರಿಯನ್ನು ಪ್ರಜ್ಞಾಪೂರ್ವಕವಾಗಿ ನಿಭಾಯಿಸಬೇಕು ಎಂದರು.

ವೃತ್ತಿಜೀವನದಲ್ಲಿ ಪ್ರಗತಿ ಹಾಗು ವೈಯಕ್ತಿಕಜೀವನದಲ್ಲಿ ನೆಮ್ಮದಿಯಿಂದ ಯಶಸ್ವಿ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಹೇಳಿದರು. ತರಬೇತಿ ಶಿಬಿರದ ಕಾರ್ಯಕ್ರಮದಲ್ಲಿ ಮೌನಯೋಗಿ ಫೌಂಡೇಶನ್ನ ಅಧ್ಯಕ್ಷರಾದ ಶ್ರಾವಣಯೋಗಿ ಹಿರೇಮಠ, ಕಾಲೇಜಿನ ಪ್ರಾಂಶುಪಾಲ ಭಗವಂತರಾಯ ಶಿಕ್ಷಕ ವೃಂದದವರೆಲ್ಲರು ಉಪಸ್ಥಿತರಿದ್ದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

2 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

2 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

2 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

3 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

4 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

7 hours ago