ಜಯಕರ್ನಾಟಕ ಸಂಘಟನೆಯಿಂದ ರಾಜ್ಯೋತ್ಸವ ಕಾರ್ಯಕ್ರಮ: ಗಣ್ಯರಿಗೆ ಸನ್ಮಾನ

0
44

ಯಾದಗಿರಿ: ಜಯಕರ್ನಾಟಕ ಸಂಘಟನೆ, ರಾಜಾ ವೆಂಕಟಪ್ಪ ನಾಯಕ ನಾಟ್ಯ ಹವ್ಯಾಸಿ ಕಲಾವಿದರ ಸಾಂಸ್ಕೃತಿಕ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ  ಯಾದಗಿರಿ ನಗರದಲ್ಲಿ ಹಮ್ಮಿಕೊಂಡಿದ್ದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸುರಪುರ ಪೊಲೀಸ್ ಠಾಣೆ ಇನ್ಸ್ಪೇಕ್ಟರ್ ಆನಂದರಾವ್, ಫೇವರ್ಡ ಕರ್ನಾಟಕ ಒಕ್ಕೂಟ್ ರಾಜ್ಯ ನಿರ್ದೇಶಕ ಶಿವರಾಜ ನಾಯಕ ಹಾಗು ಸರಕಾರಿ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ಯಲ್ಲಪ್ಪ ಕಾಡ್ಲೂರ ಹಾಗು ಸಮಾಜ ಸೇವಕರಾದ ರಾಯಪ್ಪ ದಡ್ಡಿಮನಿ ಮತ್ತು ಮಲ್ಲೇಶ್ ಕೋನ್ಹಾಳ ಇವರುಗಳಿಗೆ ರಾಷ್ಟ್ರಕವಿ ಕುವೆಂಪು ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಜಯಕರ್ನಾಟಕ ರಾಜ್ಯಾಧ್ಯಕ್ಷ ಆರ್.ಚಂದ್ರಪ್ಪ,ಕಾರ್ಯಾಧ್ಯಕ್ಷ ಅಣ್ಣಪ್ಪ ಓಲೆಕಾರ,ಪ್ರಧಾನ ಕಾರ್ಯದರ್ಶಿ ರಾಮಚಂದ್ರಯ್ಯ,ಜಿಲ್ಲಾಧ್ಯಕ್ಷ ಬಿ.ಎನ್.ವಿಶ್ವನಾಥ ನಾಯಕ ಮುಖಂಡರಾದ ಬಲಭೀಮನಾಯಕ ಬೈರಿಮಡ್ಡಿ,ಸಂತೋಷ ನಿರ್ಮಲಕರ್,ಸುರಪುರ ತಾಲ್ಲೂಕಾಧ್ಯಕ್ಷ ರವಿ ನಾಯಕ ಬೈರಿಮಡ್ಡಿ ಇತರರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here