ಜೇವರ್ಗಿ: ತಾಪಂ ಕಾಂಗ್ರೆಸ್ ಸದಸ್ಶನನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ

ಜೇವರ್ಗಿ: ದಲಿತರಿಗೆ ಮನೆಹೊಕ್ಕು ಹೊಡೆಯುತ್ತೇವೆಂದು ಭಾಷಣ ಮಾಡಿದ ಕುರಳಗೇರ ತಾಲೂಕ ಪಂಚಾಯತ ಸದಸ್ಶ ಮಲ್ಲಣಗೌಡ ಪಾಟೀಲ್ ಅವರನ್ನು ಬಂಧಿಸಬೇಕು. ದಲಿತ ಯುವಕನನ್ನು ಪ್ರೀತಿಸುತಿದ್ದ ಕುರಳಗೇರ ಗ್ರಾಮದ ಗುರುಬಾಯಿ ಎಂಬ ವಿದ್ಶಾರ್ಥಿನಿಯನ್ನು ಮರ್ಯಾದೆ ಹತ್ಶೆ ಹೆಸರಿನಲ್ಲಿ ಕೊಲೆ ಮಾಡಿದ ಕುಟುಂಬದವರಿಗೆ ಶಿಕ್ಷೆಗೆ ಗುರಿಪಡಿಸಬೇಕೆಂದು ಒತ್ತಾಯಿಸಿ ದಲಿತ ಸಮನ್ವಯ ಸಮಿತಿ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ತಹಸೀಲ ಹಳೆ ಕಚೇರಿಯಿಂದ ಮಿನಿ ವಿಧಾನಸೌಧದವರೆಗೆ ಪ್ರತಿಭಟನೆ ನಡೆಸಿದ ದಲಿತ ಸಮನ್ವಯ ಸಮಿತಿ ಮುಖಂಡರು ತಹಸೀಲ್ದಾರ ಸಿದ್ದರಾಯ ಬೋಸಗಿ ಅವರಿಗೆ ಮನವಿ ಸಲ್ಲಿಸಿದರು.

ನಂತರ ಮಾತನಾಡಿದ ಮುಖಂಡರುˌ ಕುರಳಗೇರಿ ಗ್ರಾಮದಲ್ಲಿ ಯುವತಿಗೆ ಚುಡಾಯಿಸುತ್ತಿದ್ದ ಎನ್ನುವ ಕಾರಣಕ್ಕೆ ಜುಮ್ಮಣ್ಣನನ್ನು ಮತ್ತು ಇತರರನ್ನು ವಿನ: ಕಾರಣ ಬಂಧಿಸಲಾಗಿದೆ. ಯುವತಿಯ ಕುಟುಂಬದವರೆ ಮರ್ಯಾದೆ ಹತ್ಶೆ ಹೆಸರಿನಲ್ಲಿ ಕೊಲೆ ಮಾಡಲಾಗಿದೆ. ಯುವತಿಯ ಮರಣೋತ್ತರ ಪರೀಕ್ಷೆಯಲ್ಲಿ ಪ್ರಭಾವಿಗಳು ಒತ್ತಡ ಹಾಕಿ ಪ್ರಕರಣದ ದಿಕ್ಕು ತಪ್ಪಿಸುತ್ತಿದ್ದಾರೆ. ಯುವತಿಯ ಶವ ಹೊರತೆಗೆದು ಮತ್ತೊಮ್ಮೆ ಮರಣೋತ್ತರ ಪರೀಕ್ಷೆ ಮಾಡಬೇಕು. ದಲಿತರಿಗೆ ಅವಮಾನಿಸುವ ರೀತಿಯಲ್ಲಿ ಮಾತನಾಡಿದ ತಾಪಂ ಸದಸ್ಶ ಮಲ್ಲಣಗೌಡ ಪಾಟೀಲ ಅವರ ಮೇಲೆ ದಲಿತ ದೌರ್ಜನ್ಶ ಪ್ರಕರಣದಡಿಯಲ್ಲಿ ಕೇಸ್ ದಾಖಲಿಸಬೇಕು. ಅವರನ್ನು ಗೂಂಡಾ ಕಾಯ್ದೆಯಡಿ ಬಂಧಿಸಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ ಮ್ರತ ಗುರುಬಾಯಿ ಆತ್ಮಕ್ಕೆ ಶಾಂತಿ ಕೋರಿ ಮೌನವ್ರತ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಶ ಚಂದ್ರಶೇಖರ ಹರನಾಳˌ ಮಲ್ಲಣ್ಣ ಕೊಡಚಿˌ ಭೀಮರಾಯ ನಗನೂರˌ ದವಲಪ್ಪ ಮದನˌ ಶ್ರೀಮಂತ ಧನಕರˌ ಶ್ರೀಹರಿ ಕರಕಿಹಳ್ಳಿˌ ರವಿ ಕುಳಗೇರಿˌ ಸಿದ್ದಪ್ಪ ಆಲೂರˌ ಸಿದ್ರಾಮ ಕಟ್ಟಿˌ ಸಂಗಣ್ಣ ಗುಡೂರˌ ದೇವೇಂದ್ರ ವರ್ಮಾˌ ಸಂಗು ಕಟ್ಟಿಸಂಗಾವಿˌ ಗುರಣ್ಣ ಐನಾಪುರˌ ಶ್ರೀಕುಮಾರ ಕಟ್ಟಿಮನಿˌ ರಾಜು ಹಾಲಗಡ್ಲಾˌ ಬಸವರಾಜ ಹೆಗಡೆˌ ಬಸವರಾಜ ಕೋಳಕೂರˌ ಮಹೇಶ ಕೋಕಿಲೆˌ ಮಹಾದೇವ ಕೋಳಕೂರˌ ಸಿದ್ದು ಶರ್ಮಾˌ ಭೀಮರಾಯ ಬಳಬಟ್ಟಿˌ ವಿಶ್ವರಾಧ್ಶ ಮಾಯಾˌ ಭಾಗಣ್ಣ ಸಿದ್ನಾಳˌ ಭಾಗಣ್ಣ ಕೋಳಕೂರ ಸೇರಿದಂತೆ ಇದ್ದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

3 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

19 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

21 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

21 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420