ಬಿಸಿ ಬಿಸಿ ಸುದ್ದಿ

ಆಲೂರ: ಮಕ್ಕಳ ವಿಜ್ಞಾನ ಹಬ್ಬಕ್ಕೆ ಚಾಲನೆ

ಯಡ್ರಾಮಿ: ಸಮೀಪದ ಆಲೂರ ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ಆಲೂರ ಕ್ಲಸ್ಟರ್ ಮಟ್ಟದ ಮಕ್ಕಳ ವಿಜ್ಞಾನ ಹಬ್ಬವನ್ನು ಉದ್ಘಾಟಿಸಲಾಯಿತು.

ಈ ಉದ್ಘಾಟನಾ ಸಮಾರಂಭದಲ್ಲಿ ಶಿಕ್ಷಣ ಸಂಯೋಜಕರಾದ ಪ್ರಭುಗೌಡ ದೇಸಾಯಿ, ರಾಯಪ್ಪ ದೋರನಹಳ್ಳಿ, ಆಲೂರ ಪ್ರೌಢ ಶಾಲೆಯ ಮುಖ್ಯ ಗುರುಗಳಾದ ಶಾಂತಪ್ಪ ಬಿರಾದಾರ, ಷಣ್ಮುಖಪ್ಪ ಭಜಂತ್ರಿ,ಯಡ್ರಾಮಿ ತಾಲ್ಲೂಕಿನ ಸರಕಾರಿ ನೌಕರರ ಸಂಘದ ಸದಸ್ಯರಾದ ವಿಜಯಕುಮಾರ ಬಡಿಗೇರ, ಯಡ್ರಾಮಿ ತಾಲ್ಲೂಕಿನ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಶಾಂತಮೂರ್ತಿ ಗೊಂಬಿಮಠ, ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಮಂಜುನಾಥ, ದೀಪಕ್ ಹಾಗೂ ಆಲೂರು ಕ್ಲಸ್ಟರಿನ ಎಲ್ಲಾ ಮುಖ್ಯ ಗುರುಗಳು ಹಾಜರಿದ್ದರು.ಆಲೂರ ಕ್ಲಸ್ಟರಿನ ಸಂಪನ್ಮೂಲ ವ್ಯಕ್ತಿಗಳಾದ ಭೀಮಾಶಂಕರ ಬಿರಾಳ ಪ್ರಾಸ್ತಾವಿಕವಾಗಿ ಮಾತನಾಡಿದರು.

ಮಕ್ಕಳ ವಿಜ್ಞಾನ ಹಬ್ಬವನ್ನು ಯಾಕೆ ಆಚರಿಸಲಾಗುತ್ತದೆ? ಇದರ ಹಿಂದಿರುವ ಉದಾತ್ತ ಉದ್ದೇಶವೇನು? ಎಂಬುದನ್ನು ವಿವರಿಸಿದರು.ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸುವ ಜೊತೆಗೆ  ಮೂಢನಂಬಿಕೆಗಳ ಮೂಲೋತ್ಪಾಟನೆ ಮಾಡಲು ಈ ರೀತಿಯ ಮಕ್ಕಳ ವಿಜ್ಞಾನ ಹಬ್ಬಗಳು ಸಹಕಾರಿಯಾಗಿವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಶಿಕ್ಷಣ ಸಂಯೋಜಕರಾದ ಪ್ರಭುಗೌಡ ಸ್ಥಳೀಯ ಸರಕಾರಿ ಪ್ರೌಢ ಶಾಲೆಯ ಮುಖ್ಯ ಗುರುಗಳಾದ ಶಾಂತಪ್ಪ ಬಿರಾದಾರ ಇವರು ವಿಜ್ಞಾನದ ಮಹತ್ವದ ಬಗ್ಗೆ ಮಾತನಾಡಿದರು.

ಮಕ್ಕಳಿಂದ ವಿವಿಧ ವೈಜ್ಞಾನಿಕ ಚಟುವಟಿಕೆಗಳನ್ನು ಮಾಡಿಸಲಾಯಿತು. ಕಾರ್ಯಕ್ರಮವನ್ನು ಶಿಕ್ಷಕ ಸಿದ್ದಪ್ಪ ಸಾಥಖೇಡ ನಿರೂಪಿಸಿದರು.ಶಿಕ್ಷಕರಾದ ಸೈದಪ್ಪ ಜ್ಞಾನೇಶ,ಪರಶುರಾಮ,ರಮೇಶ,ಶಿವರಾಜ,ಸಾಹೇಬಗೌಡ ಹಾಗೂ ಶಿಕ್ಷಕಿಯರಾದ ಕವಿತಾ,ರಾಜೇಶ್ವರಿ ಸೇರಿದಂತೆ ಅನೇಕರಿದ್ದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

51 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

54 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

57 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago