ಕಲಬುರಗಿ: ಭಾರತ ಸಂವಿಧಾನವು ಸರ್ವ ಜನರ ಏಳಿಗೆಗಾಗಿ ಸಮಬಾಳು ಸಮಪಾಲು ಧೋರಣೆಯ ತತ್ವದಲ್ಲಿ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳನ್ನು ಒದಗಿಸಿರುವುದರಿಂದ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗಿದೆ ಎಂದು ವಕೀಲರಾದ ರಾಜು ಮುದ್ದಡಗಿ ಹೇಳಿದರು.
ಆಳಂದ ತಾಲೂಕಿನ ಭೂಸನೂರು ಗ್ರಾಮದಲ್ಲಿ ಇತ್ತೀಚಿಗೆ ಸಮಾಜ ಕಲ್ಯಾಣ ಇಲಾಖೆ, ತಹಸೀಲ್ದಾರ್ ಕಾರ್ಯಲಯ, ಗ್ರಾಮ ಪಂಚಾಯತ್ ಭೂಸನೂರ್ ಹಾಗೂ ಲುಂಬಿನಿ ಯುವ ಸಮಾಜ ಕಲ್ಯಾಣ ಸಂಘ ಜೇವರ್ಗಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಅಸ್ಪೃಶ್ಯತೆ ನಿವಾರಣೆ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಭಾರತ ಸಂವಿಧಾನವು ವಿಶ್ವದಲ್ಲಿ ಸರ್ವಶ್ರೇಷ್ಠ ಸಂವಿಧಾನವಾಗಿದೆ ಅದರಲ್ಲಿನ ಕಾನೂನುಗಳು ಹಾಗೂ ನಿಯಮಗಳು ಮನುಷ್ಯರನ್ನು ಸೇರಿದಂತೆ ಸರ್ವರನ್ನು ರಕ್ಷಿಸುವ ಗುಣಲಕ್ಷಣಗಳನ್ನು ಹೊಂದಿವೆ ಎಂದು ನುಡಿದರು.
ಕಾರ್ಯಕ್ರಮದಲ್ಲಿ ಶ್ರೀ ಸಾಯಿ ಕಲಾತಂಡದ ಗಂಗೂಬಾಯಿ, ಮಲ್ಲಿಕಾರ್ಜುನ ಜಾನಿ ತಂಡದವರಿಂದ ಬೀದಿನಾಟಕ ಜರುಗಿತು. ಅತಿಥಿಗಳಾಗಿ ಜಂಬಯ್ಯ ಸ್ವಾಮಿ ವಿಜಯಕುಮಾರ್ ಪಾಟೀಲ್, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಉಷಾ ಪಾಟೀಲ್, ಶಿವರುದ್ರಯ್ಯ ಸ್ವಾಮಿ ರುದ್ರಸ್ವಾಮಿ, ರೇವಣಸಿದ್ದಪ್ಪ ಪಟ್ಟಣ, ಬಸವಂತರಾಯ ಆಳಂದ, ಮಹೇಶ ಎಂ. ಅಣ್ಣರಾಯ ಸೇರಿದಂತೆ ಗ್ರಾಮದ ನಾಗರಿಕರು, ವಿದ್ಯಾರ್ಥಿಗಳು ಮತ್ತು ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ದಸ್ತಗೀರ್ ಸಾಬ್ ಅಧ್ಯಕ್ಷತೆ ವಹಿಸಿದ್ದರು.
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…