ವಿದ್ಯಾರ್ಥಿಗಳಿಗೆ ಎಚ್.ಐ.ವಿ ಸೋಂಕಿನ ಬಗ್ಗೆ ಅರಿವು ಅಗತ್ಯ: ಡಾ.ಪಸ್ತಾಪುರ

ಕಲಬುರಗಿ: ಪ್ರಸ್ತುತ ಸಮಾಜದಲ್ಲಿ ಸಾವಿರಾರು ಜನರು ಎಚ್.ಐ.ವಿ ವೈರಾಣುವಿನ ಸೋಂಕಿನಿಂದ ಬಳಲುತ್ತಿದ್ದಾರೆ. ಪರಿಣಾಮ ಎಡ್ಸ್ ರೋಗ ಹೆಚ್ಚಾಗುತ್ತಿದೆ. ಇದರಿಂದ ಕಾಲೇಜು ವಿದ್ಯಾರ್ಥಿಗಳು ಇಂತಹ ಮಹಾಮಾರಿ ರೋಗದ ಬಗ್ಗೆ ತಿಳಿದುಕೊಳ್ಳುವುದು ಅಗತ್ಯವಾಗಿದೆ ಎಂದು ಎಚ್.ಐ.ವಿ ಏಡ್ಸ್ ಖ್ಯಾತ ವೈದ್ಯ ಡಾ.ಮುರಗೇಶ ಪಸ್ತಾಪುರ ಹೇಳಿದರು.

ನಗರದ ಶರಣಬಸವ ವಿಶ್ವವಿದ್ಯಾಲಯದ ಸ್ವಯಂ ಹಾಲನಲ್ಲಿ ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ವಿಶೇಷ ಕಾರ್ಯಕ್ರಮದಲ್ಲಿ ಎಚ್.ಐ.ವಿ ಏಡ್ಸ್ ಖ್ಯಾತ ವೈದ್ಯ ಡಾ.ಮುರಗೇಶ ಪಸ್ತಾಪುರ ಮಾತನಾಡಿದರು. ಎಚ್.ಐ.ವಿ ಎಂದರೇ ಹ್ಯೂಮಾನ್ ಇಮ್ಯೂನೋ ಡೆಫಿಷಿಯನ್‌ಸ್ಸಿ ವೈರಸ್ ಆಗಿರುತ್ತದೆ. ಇದು ವ್ಯಕ್ತಿಯಿಂದ ವ್ಯಕ್ತಿಗೆ ಬೇಗನೆ ಹರಡುವ ಕಾಯಿಲೆಯಾಗಿದೆ. ಇದರಿಂದ ಸಂಭೋಗ ಕ್ರಿಯೆ ಮಾಡುವಾಗ ಕಾಂಡೊಮ್ ಬಳಸುವುದು ಅತ್ಯವಶ್ಯಕವಾಗಿದೆ ಎಂದು ತಿಳಿಸಿದರು.

ಪ್ರತಿಯೊಬ್ಬರು ಮೂರು ತಿಂಗಳಿಗೊಮ್ಮೆ ಎಚ್.ಐ.ವಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು. ಸರಕಾರಿ ಆಸ್ಪತ್ರೆಯಲ್ಲಿ ಗರ್ಭಿಣಿಯರಿಗೆ ಕಡ್ಡಾಯವಾಗಿ ಎಚ್.ಐ.ವಿ ರಕ್ತ ಪರೀಕ್ಷೆ ಮತ್ತು ಉಚಿತ ಚಿಕಿತ್ಸೆ ಲಭ್ಯವಿದೆ. ಎಚ್.ಐ.ವಿ ಮತ್ತು ಎಡ್ಸ್ ಸೋಂಕಿತ ವ್ಯಕ್ತಿಯ ಜೊತೆ ಊಟ ಮಾಡಿದರೇ ಮತ್ತು ಅವರಿಗೆ ಮುಟ್ಟಿದರೆ ಸೋಂಕು ತಗಲುವದಿಲ್ಲ. ಇದರಿಂದ ಸೋಂಕಿತರನ್ನು ಪ್ರೀತಿಯಿಂದ ಕಾಣಬೇಕು ಎಂದು ಡಾ.ಮುರಗೇಶ ಪಸ್ತಾಪುರ ಸಲಹೆ ನೀಡಿದರು.

ಶರಣಬಸವ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಮಾತನಾಡಿ, ಸುಮಾರು ವರ್ಷಗಳ ಹಿಂದೆ ಏಡ್ಸ್ ರೋಗದ ಲಕ್ಷಣ ಕಡಿಮೆ ಪ್ರಮಾಣದಲ್ಲಿತ್ತು. ಆದರೆ ಪ್ರಸ್ತುತ ವಿಶ್ವಾದ್ಯಂತ ಏಡ್ಸ್ ರೋಗದ ಲಕ್ಷಣ ದಿನನಿತ್ಯ ಹೆಚ್ಚುತ್ತಿದೆ. ಆದರೆ ಶುಚಿತ್ವ ಸಮಾಜಕ್ಕೆ ಏಡ್ಸ್ ನಿಯಂತ್ರಣ ಅಗತ್ಯವಾಗಿದೆ. ಎಂದು ಹೇಳಿದರು.
ವಿದ್ಯಾರ್ಥಿಗಳು ಈಗಿನಿಂದಲೇ ವಿವಿಧ ಮಹಾಮಾರಿ ರೋಗದ ಬಗ್ಗೆ ತಿಳಿದುಕೊಂಡರೆ ಎಷ್ಟೋ ಬಡ ಜೀವಗಳನ್ನು ಬದುಕಿಸಬಹುದಾಗಿದೆ. ಮತ್ತು ತಮ್ಮ ಬದುಕನ್ನು ಸುಂದರ ಮಾಡಿಕೊಳ್ಳಬಹುದಾಗಿದೆ ಎಂದು ವಿದ್ಯಾರ್ಥಿಗಳಿಗೆ ಬಸವರಾಜ ದೇಶಮುಖ ಸಲಹೆ ನೀಡಿದರು.

ಶರಣಬಸವ ಕುಲಸಚಿವ ಅನೀಲಕುಮಾರ ಬಿಡವೆ ಮಾತನಾಡಿ, ಏಡ್ಸ್ ರೋಗ ಮಹಾಮಾರಿ ಡೆಂಜರೆಸ್ ರೋಗವಾಗಿದೆ. ಇದರಿಂದ ವಿದ್ಯಾರ್ಥಿಗಳು ಬದುಕಿನ ಬಗ್ಗೆ ನಿರ್ಲಕ್ಷ್ಯವಹಿಸದೇ ಎಚ್‌ಐವಿ ಸೋಂಕಿನ ಬಗ್ಗೆ ಅರಿತು ಕೊಳ್ಳುವುದು ಸೂಕ್ತವಾಗಿದೆ. ಎಂದರು.

ಶರಣಬಸವ ಮೌಲ್ಯಮಾಪನ ಕುಲಸಚಿವ ಲಿಂಗರಾಜ ಶಾಸ್ತ್ರಿ, ಡೀನ್ ಲಕ್ಷ್ಮಿ ಮಾಕಾ, ಡೀನ್ ಬಸವರಾಜ ಮಠಪತಿ, ಶಿವುಕುಮಾರ ಜವುಳಗಿ ಇದ್ದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

3 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

20 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

21 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

21 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420