ಕಲಬುರಗಿಯಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನ ಅಧ್ಯಕ್ಷರ ಆಯ್ಕೆಗೆ ನಾಗಲಿಂಗಯ್ಯ ಮಠಪತಿ ಅಕ್ಷೇಪ

0
272

ಕಲಬುರಗಿ: ಕಲಬುರಗಿಯಲ್ಲಿ ಬರುವ ಫೆಬ್ರವರಿ ತಿಂಗಳಿನಲ್ಲಿ ಜರುಗುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾದ್ಯಕ್ಷರನ್ನಾಗಿ ಕಲ್ಯಾಣ ಕರ್ನಾಟಕ ಭಾಗದ ಹಿರಿಯ ಸಾಹಿತಿಗಳನ್ನು ಆಯ್ಕೆ ಮಾಡುವುದು ಬಿಟ್ಟು ಇಂದು ಬೆಂಗಳೂರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಹಿರಿಯ ಸಾಹಿತಿ ಎಚ್.ಎಸ್.ವೆಂಕಟೇಶ ಮೂರ್ತಿಯವರನ್ನು ಸರ್ವಾದ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದಕ್ಕೆ ತಮ್ಮ ವಿರೋಧವಿದೆ ಎಂದು ಜನಪರ ಹೋರಾಟಗಾರ ನಾಗಲಿಂಗಯ್ಯ ಮಠಪತಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯೊಂದನ್ನು ನೀಡಿರುವ ಅವರು ಕಲ್ಯಾಣ ಕರ್ನಾಟಕದ ನೆಲದಲ್ಲಿರುವ ಹಿರಿಯ ಸಾಹಿತಿಗಳು ಕಾರ್ಯಕಾರಿ ಸಮಿತಿಯ ಸದಸ್ಯರುಗಳ ಕಣ್ಣಿಗೆ ಕಾಣಲಿಲ್ಲವೇ ಎಂದು ಖಾರವಾಗಿ ಪ್ರಶ್ನಿಸಿರುವ ಅವರು ಎಲ್ಲಾ ಕ್ಷೇತ್ರಗಳಲ್ಲಿಯೂ ಈ ಭಾಗಕ್ಕೆ ಅನ್ಯಾಯವಾದಂತೆ ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿಯೂ ಈ ರೀತಿಯ ಅನ್ಯಾಯ ಮಾಡುತ್ತಿರುವುದು ನಿಜಕ್ಕೂ ಖಂಡನೀಯವಾಗಿದ್ದು ಈ ನೆಲದ ಸಾಹಿತ್ಯ, ಜನಜೀವನ, ಬದುಕು, ಸಂಸ್ಕೃತಿ ಕನ್ನಡದ ಸ್ಥಿತಿಗತಿ ಗೊತ್ತಿರದ ವೆಂಕಟೇಶಮೂರ್ತಿ ಯವರನ್ನು ಆಯ್ಕೆ ಮಾಡುವ ಮೂಲಕ ಕಲ್ಯಾಣ ಕರ್ನಾಟಕದ ಸಾಹಿತಿಗಳಿಗೆ ಅಪಮಾನ ಮಾಡಿದ್ದಾರೆಂದು ಮಠಪತಿ ಕಿಡಿಕಾರಿದ್ದಾರೆ.

Contact Your\'s Advertisement; 9902492681

ಈಗಾಗಲೇ ಈ ಭಾಗದಲ್ಲಿ ಅತೀವೃಷ್ಟಿ ಮತ್ತು ಅನಾವೃಷ್ಟಿಯಿಂದ ಜನ ಸಂಕಷ್ಟದಲ್ಲಿರುವಾಗ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಸಮ್ಮೇಳನ ನಡೆಸುವ ಅಗತ್ಯತೆ ಇದೆಯೇ ಎಂದು ಪ್ರಶ್ನೆ ಮಾಡಿರುವ ಅವರು ರೈತರು, ಕೃಷಿ ಕೂಲಿಕಾರ್ಮಿಕರು ಹೊಟ್ಟೆ ತುಂಬಿಸಿಕೊಳ್ಳಲು ಗುಳೆ ಹೋಗುತ್ತಿದ್ದು ಇಂತಹ ಸನ್ನಿವೇಶದಲ್ಲಿ ವೈಭವದ ಜಾತ್ರೆ ನಡೆಸುವುದು ಸರಿಯಲ್ಲ.  ಅದರಲ್ಲೂ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಈ ಸೀಮೆಗೆ ಅಪರಿಚಿತರನ್ನು ಸಮ್ಮೇಳನದ ಸರ್ವಾದ್ಯಕ್ಷರೆಂದು ಒಪ್ಪಿಕೊಂಡು ಉತ್ಸವ ಮಾಡಿದರೆ ಏನು ಪ್ರಯೋಜನವೆಂದು ಪ್ರಶ್ನಿಸಿರುವ ಅವರು ಕೂಡಲೇ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಮೊದಲು ಮಾಡಿಕೊಂಡು ಪದಾಧಿಕಾರಿಗಳು ವೆಂಕಟೇಶ ಮೂರ್ತಿಯವರ ಆಯ್ಕೆಯನ್ನು ಕೈಬಿಟ್ಟು ಕಲ್ಯಾಣ ನಾಡಿನ ಸಾಹಿತಿಗಳಿಗೆ ಸರ್ವಾದ್ಯಕ್ಷ ಸ್ಥಾನ ನೀಡಿ ಸಮ್ಮೇಳನವನ್ನು ಸಾರ್ಥಕತೆಗೊಳಿಸಬೇಕು. ಇಲ್ಲವಾದಲ್ಲಿ ಈ ನೆಲ ಪ್ರೀತಿಸುವ ಎಲ್ಲಾ ಮನಸ್ಸುಗಳು ಸಮ್ಮೇಳನವನ್ನು ಬಹಿಷ್ಕರಿಸಬೇಕಾಗುತ್ತದೆಂದು ಎಚ್ಚರಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here