ಹೈದರಾಬಾದ್: ದೇಶವನ್ನೇ ತಲ್ಲಣಗೊಳಿಸಿದ್ದ ಹೈದರಾಬಾದ್ ಪಶುವೈದ್ಯೆ ಸಾಮೂಹಿಕ ಅತ್ಯಾಚಾರ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಇಂದು ಸ್ಪಾಟ್ ಮಹಜರು ವೇಳೆ ಪೊಲೀಸರು ಎನ್ಕೌಂಟರ್ ಮಾಡಿ ಹತ್ಯೆಗೈದಿದ್ದಾರೆ.
ಕಾಮುಕರು ಪಶುವೈದ್ಯೆಯನ್ನು ಬೆಂಕಿ ಹಚ್ಚಿ ಸುಟ್ಟ ಸ್ಥಳದಲ್ಲೇ ಪೊಲೀಸರು ಅತ್ಯಾಚಾರಿಗಳ ಮೇಲೆ ಫೈರಿಂಗ್ ಮಾಡಿ ಹತ್ಯೆ ಮಾಡಿದ್ದಾರೆ. ಪಶುವೈದ್ಯೆಯನ್ನು ಸುಟ್ಟ ಘಟನಾ ಸ್ಥಳ ಹತ್ಯೆಯ ದಿನ ನಡೆದ ಘಟನೆಯ ಮರುಸೃಷ್ಠಿಗೆ ಪೊಲೀಸರು ಮುಂದಾಗಿದ್ದರು. ಆರೋಪಿಗಳ ವಿರುದ್ಧ ಸಾಕ್ಷ್ಯ ಸಂಗ್ರಹಕ್ಕೆ ಮರುಸೃಷ್ಠಿ ಅಗತ್ಯ. ಈ ಹಿನ್ನೆಲೆ ಪೊಲೀಸರು ಆರೋಪಿಗಳನ್ನ ಸ್ಥಳಕ್ಕೆ ಕರೆತಂದಿದ್ರು. ಈ ಸಂದರ್ಭದಲ್ಲಿ ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದ್ದಷ್ಟೇ ಅಲ್ಲದೆ, ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದರಿಂದ ಎನ್ ಕೌಂಟರ್ ಮಾಡಬೇಕಾಯ್ತು ಅಂತಾ ಐಪಿಎಸ್ ಅಧಿಕಾರಿ ವಿ.ಸಿ. ಸಜ್ಜನರ್ ತಿಳಿಸಿದ್ದಾರೆ.
ಪ್ರಕರಣ ಹಿನ್ನೆಲೇ: –
ನವೆಂಬರ್ 27ರಂದು 26 ವರ್ಷದ ಪಶುವೈದ್ಯೆಯನ್ನು ಸ್ಕೂಟಿ ಪಂಕ್ಚರ್ ಹಾಕಿಸಿಕೊಡುವ ನೆಪದಲ್ಲಿ ಲಾರಿ ಚಾಲಕ ಮೊಹಮ್ಮದ್ ಪಾಷಾ, ಮೂವರು ಕ್ಲೀನರ್ ಗಳಾದ ನವೀನ್, ಚೆನ್ನಕೇಶವುಲು ಮತ್ತು ಶಿವಾ ಸೇರಿ ಕಿಡ್ನಾಪ್ ಮಾಡಿ, ಸಾಮೂಹಿಕ ಅತ್ಯಾಚಾರ ಮಾಡಿ ವೈದ್ಯೆಯ ಮೃತ ದೇಹವನ್ನು ಸುಟ್ಟು ಹಾಕಿದ್ದರು.
ಈ ಕುರಿತು ಸೈಬರಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಾಲ್ವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಈ ಕೃತ್ಯಕ್ಕೆ ಇವರನ್ನು ಏಳು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿತ್ತು. ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಅನೇಕ ವಿಚಾರಗಳನ್ನು ಬಹಿರಂಗಪಡಿಸಿದ್ದರು ಎನ್ನಲಾಗಿದ್ದು, ಸಾಮೂಹಿಕ ಅತ್ಯಾಚಾರದ ಬಳಿಕ ಪಶುವೈದ್ಯೆ ಓಡಿಹೋಗಬಾರದು ಎನ್ನುವ ಉದ್ದೇಶದಿಂದ ಅವಳ ಕೈ ಕಾಲುಗಳನ್ನು ಕಟ್ಟಿದ್ದೆವು.
ಅತ್ಯಾಚಾರದ ನಂತರವೂ ಸಂತ್ರಸ್ತೆಗೆ ಮದ್ಯಪಾನ ಮಾಡುವಂತೆ ಒತ್ತಾಯಿಸಿದ್ದೆವು. ಸಂತ್ರಸ್ತೆ ಪ್ರಜ್ಞೆ ತಪ್ಪಿದಾಗ ಆಕೆಯನ್ನು ಸೇತುವೆಯ ಕೆಳಗೆ ಸಾಗಿಸಲಾಗಿತ್ತು. ನಂತರ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ವಿ ಎಂದು ಮುಖ್ಯ ಆರೋಪಿಗಳು ಪೊಲೀಸರ ಮುಂದೆ ತಪ್ಪು ಒಪ್ಪಿಕೊಂಡಿದ್ದಾನೆ ಎಂದು ಮೂಲಗಳನ್ನು ಆಧರಿಸಿ ಮಾಧ್ಯಮ ವರದಿ ಮಾಡಿತ್ತು.
ಬೆಂಕಿ ಹಚ್ಚುವುದಕ್ಕೂ ಮುನ್ನ ಪಶುವೈದ್ಯೆ ಮೃತಪಟ್ಟಿದ್ದಾಳೆ ಎಂದು ಭಾವಿಸಿದ್ದೇವು. ಆದರೆ ಬೆಂಕಿಯ ಹಚ್ಚಿದಾಗ ಅವಳು ಕಿರುಚಲು ಪ್ರಾರಂಭಿಸಿದಳು. ಹೀಗಾಗಿ ಸಂತ್ರಸ್ತೆ ಸಾಯುವವರೆಗೂ ನೋಡುತ್ತಲೇ ಇದ್ದೆವು. ಏಕೆಂದರೆ ಒಂದು ವೇಳೆ ಆಕೆ ಜೀವಂತವಾಗಿ ಉಳಿದರೆ ಪೊಲೀಸರು ನಮ್ಮನ್ನು ಹಿಡಿಯುತ್ತಾರೆ ಎನ್ನುವ ಭಯ ನಮ್ಮಲ್ಲಿತ್ತು ಎಂದು ಆರೋಪಿಗಳು ಬಾಯಿ ಬಿಟ್ಟಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…