ಕಲಬುರಗಿ: ವಾಟರ್ ಮ್ಯಾನ್ ಆಫ್ ಇಂಡಿಯಾ ಎಂದು ಜನಪ್ರೀಯವಾಗಿರುವ ಮ್ಯಾಗಸೆಸ್ಸೆ ಪ್ರಶಸ್ತಿ ವಿಜೇತ ರಾಜೇಂದ್ರಸಿಂಗ್ ಅವರು ಭಾನುವಾರ ೮ ರಂದು ಕಲಬುರಗಿ ನಗರದ ಶರಣಬಸವ ಶತಮಾನೋತ್ಸವ ಸಭಾಂಗಣದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಜಲ ಸಾಕ್ಷರತಾ ಸಮಾವೇಶದಲ್ಲಿ ಜಲ ಸಂರಕ್ಷಣೆ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಜಲ ಸಾಕ್ಷರತಾ ಸಮಾವೇಶವನ್ನು ಶರಣಬಸವ ವಿಶ್ವವಿದ್ಯಾಲಯ, ಕಲಬುರಗಿ, ರಾಷ್ಟೀಯ ಸೇವಾ ಯೋಜನೆ ಕೋಶ, ಗುಲಬರ್ಗಾ ವಿಶ್ವವಿದ್ಯಾಲಯ, ಜಲ ಸಮಿತಿಗಳ ಒಕ್ಕೂಟ, ಜಲ ಜಾಗೃತಿ ಅಭಿಯಾನ ವೇದಿಕೆ, ಥ್ರೀಜೆ ಕ್ಲಬ್ ಆಳಂದ, ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ, ಧಾರವಾಡ ಇವರುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೋಳ್ಳಲಾಗಿದೆ.
ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ, ಮಹಾದಾಸೋಹ ಪೀಠಾಧೀಪತಿಗಳು ಶರಣಬಸವೇಶ್ವರ ಸಂಸ್ಥಾನ, ಅಧ್ಯಕ್ಷರು ಶರಣಬಸವೇಶ್ವರ ವಿದ್ಯಾವರ್ಧಕ ಸಂಘ, ಅಖಿಲ ಭಾರತ ಶಿವಾನುಭವ ಮಂಟಪ ಹಾಗೂ ವಿದ್ಯಾ ಭಂಡಾರಿ ಪೂಜ್ಯ ಡಾ.ಶರಣಬಸವಪ್ಪ ಅಪ್ಪಾ ಅವರು ಪ್ರತಿಜ್ಞಾವಿಧಿ ಭೋಧಿಸಿ ಆಶೀರ್ವಚನ ನೀಡಲಿದ್ದಾರೆ. ಈ ಸಮಾವೇಶದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಶ್ರೀ ಬಸವರಾಜ ದೇಶಮುಖ ಗೌರವಾನ್ವಿತ ಅತಿಥಿಗಳಾಗಿರುವರು ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ನಿರಂಜನ ವ್ಹಿ.ನಿಷ್ಠಿ ಸಮಾವೇಶ ಉದ್ಘಾಟಿಸಲಿದ್ದಾರೆ.
ಈ ಜಲ ಜಾಗೃತಿ ಸಮಾವೇಶದಲ್ಲಿ ವಿಶೇಷ ಉಪನ್ಯಾಸ ನೀಡಲಿರುವ ಡಾ.ರಾಜೇಂದ್ರ ಸಿಂಗ್ ಅವರಲ್ಲದೆ ತೆಲಂಗಾಣ ಸರಕಾರದ ಜಲ ಸಂಪನ್ಮೂಲ ಅಭಿವೃಧಿ ನಿಗಮದ ಅಧ್ಯಕ್ಷರಾದ ಶ್ರೀ ಪ್ರಕಾಶರಾವ, ಧಾರವಾಡದ ಜಲ ಮತ್ತು ನೆಲ ನಿರ್ವಹಣ ಸಂಸ್ಥೆ ಕರ್ನಾಟಕ ಸರಕಾರದ ನಿರ್ದೇಶಕರಾದ ಶ್ರೀ ರಾಜೇಂದ್ರ ಪೊದ್ದಾರ ಹಾಗೂ ಇತರರು ಭಾಗವಹಿಸುವರು.
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…