ಕಲಬುರಗಿಯಲ್ಲಿ ಚಿನ್ನಾಭರಣ ಎಗರಿಸಿ ಪರಾರಿಯಾಗಿದ್ದ ಇಬ್ಬರು ಮಹಿಳಾ ಆರೋಪಿಗಳ ಬಂಧನ

0
111

ಕಲಬುರಗಿ: ಕೇಂದ್ರ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್ನಿಂದ ಚಿನ್ನಾಭರಣ ಎಗರಿಸಿದ ಪರಾರಿಯಾಗಿದ್ದ ಇಬ್ಬರು ಮಹಿಳಾ ಆರೋಪಿಗಳನ್ನು ಅಶೋಕ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೀದರ್ ಮೂಲದ ಜ್ಯೋತಿ ಕಾಂಬಳೆ ಹಾಗೂ ಪೂಜಾ ಉಪಾಧ್ಯಾಯ ಬಂಧಿತ ಆರೋಪಿಗಳು.2019 ಫೆಬ್ರವರಿ 27ರಂದು ಕಲಬುರಗಿ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್ಗಾಗಿ ಕಾಯುತ್ತಿದ್ದ ಶೋಭಾದೇವಿ ಎಂಬವರ ವ್ಯಾನಿಟಿ ಬ್ಯಾಗ್ನಲ್ಲಿ 30ಗ್ರಾಂ ಮತ್ತು ಕೊರಳಲ್ಲಿದ್ದ 5ಗ್ರಾಂ ಚಿನ್ನಾಭರಣ ಕದ್ದು ಪರಾರಿಯಾಗಿದ್ದರು.

Contact Your\'s Advertisement; 9902492681

ಈ ಬಗ್ಗೆ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಬೆನ್ನಟ್ಟಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ 20 ಗ್ರಾಂ ಚಿನ್ನದ ಆಭರಣಗಳನ್ನು ಜಪ್ತಿ ಮಾಡಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here