ಬಿಸಿ ಬಿಸಿ ಸುದ್ದಿ

ಕೌನ ಬನೆಗಾ ಜ್ಞಾನಪತಿ ಕಾರ್ಯಕ್ರಮ ವಿಧ್ಯಾರ್ಥಿಗಳಿಗೆ ದಾರಿದೀಪವಾಗಲಿದೆ: ಮರತೂರ

ಕಲಬುರಗಿ: ಪ್ರಜ್ಞಾ ದಿ ಇನ್ಸ್‌ಟ್ಯೂಟ್ ಆಫ್ ಲರ್ನಿಂಗ್ ಕಲಬುರ್ಗಿ, ಚಾಮ್ಸ್ ಮೈಂಡ್ ಪಾವರ್ ಸಲುಷನ್ ಕಲಬುರ್ಗಿ ಇವರ ಸಹಯೋಗದಲ್ಲಿ ಕೌನ ಬನೆಗಾ ಜ್ಞಾನಪತಿ ಎನ್ನುವ ವಿನೂತನ ವಿಶಿಷ್ಠ ರಸಪ್ರಶ್ನೆ ಕಾರ್ಯಕ್ರಮ ಸಂಗೀತ ಕಲಾ ಮಂಡಳದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಕಲಬುರ್ಗಿ ಜಿಲ್ಲಾ ಪಂಚಾಯತ್  ನ ವಿರೋಧ ಪಕ್ಷದ ನಾಯಕರಾದ ಶಿವಾನಂದ ಪಾಟೀಲ ಮರತೂರ ಮಾತನಾಡುತ್ತಾ  ಒಟ್ಟಾರೆ ಕರ್ನಾಟಕದ ಪ್ರತಿ ವರ್ಷದ ಫಲಿತಾಂಶ ಗಮನಿಸಿದಾಗ ಕಲ್ಯಾಣ ಕರ್ನಾಟಕದ ಫಲಿತಾಂಶ ಕಡಿಮೆಯಿದೆ. ಸಾರ್ವಜನಿಕರು, ಶಿಕ್ಷಣ ಪ್ರೇಮಿಗಳು ಧನಾತ್ಮಕ ಮನಸ್ಸು ಮಾಡಿದರೆ ಫಲಿತಾಂಶ ಸುಧಾರಣೆಯಲ್ಲಿ ಕೈಜೋಡಿಸಬೇಕಾದ  ಅತ್ಯಂತ ಅಗತ್ಯವಿದೆ.  ಈ ಕೌನ ಬನೇಗಾ ಜ್ಞಾನಪತಿ  ಕಾರ್ಯಕ್ರಮವು  ವಿಧ್ಯಾರ್ಥಿಗಳ ಪಾಲಿಗೆ ಪರೀಕ್ಷಾ ದಾರಿದೀಪವಾಗಲಿದೆ. ನಮ್ಮ ವಿಧ್ಯಾರ್ಥಿಗಳಿಗೆ ಮಾತನಾಡುವ ಪರೀಕ್ಷೆ ಎದುರಿಸುವ ಧೈರ್ಯ ತುಂಬಬೇಕಿದೆ ಇದು ಈ ಕಾರ್ಯಕ್ರಮದ ಮೂಲ ನೆರವೇರುತ್ತದೆ ಎಂದು ಅಭಿಪ್ರಾಯ ಪಟ್ಟರು.

ಶಿಕ್ಷಣ ಪ್ರೇಮಿ ಅಜೀತ್ ಕುಮಾರ ಮಾತನಾಡಿ ಇಂತಹ ವಿಶೇಷಕಾರ್ಯಕ್ರಮಗಳು ನಮ್ಮ ಭಾಗಕ್ಕೆ ಅವಶ್ಯಕತೆಯಿವೆ. ಮಕ್ಕಳು ಹೆದರದೆ ಪರೀಕ್ಷೆ ಬರೆಯಲು ಪೂರಕವಾದ ಕಾರ್ಯಕ್ರಮವಿದು. ಇಂತಹ ಕೆಲಸಕ್ಕೆ ನಾವೆಲ್ಲರೂ ಕೈಜೋಡಿಸುವ ಮೂಲಕ ಮಕ್ಕಳಿಗೆ ಪರೀಕ್ಷೆಗೆ ತಯಾರಿಗೊಳಿಸಬೇಕು ಎಂದು ಕಿವಿಮಾತು  ಹೇಳಿದರು.

ಕಾರ್ಯಕ್ರಮದಲ್ಲಿ ಉದ್ಘಾಟಿಸಿ ಮಾತನಾಡಿದ ವಿಜಯಲಕ್ಷ್ಮಿ ಬಿ. ಅವರು ಕಲ್ಯಾಣ ಕರ್ನಾಟಕದ ಹತ್ತನೇಯ ತರಗತಿಯ ಫಲಿತಾಂಶ ಸುಧಾರಿಸುವುದಕ್ಕಾಗಿ ಸರಕಾರ ಅನೇಕ ಕೆಲಸಗಳನ್ನು ಮಾಡುತ್ತಿದೆ ಅದೇ ರೀತಿಯಲ್ಲಿ ಈ ಕಾರ್ಯಕ್ರಮವು ಮಕ್ಕಳಿಗೆ ಸಾಥ್ ನೀಡಲಿದೆ. ಭಾಗದ ಮಕ್ಕಳಲ್ಲಿ ಸ್ಪರ್ಧಾತ್ಮಕ  ಮನೋಭಾವ ಬೆಳೆಸಲು, ಸಭಾ ಕಂಪನ ಹೋಗಲಾಡಿಸುವುದು, ಈ ಕಾರ್ಯಕ್ರಮ ಸಹಕಾರವಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಶಿಕ್ಷಣ ತಜ್ಞ ಕೆ.ಎಂ.ವಿಶ್ವನಾಥ ಮರತೂರ. ಅವರು ಈ ಕಾರ್ಯಕ್ರಮದ ಮೂಲಕ ನಾವು ವಯಕ್ತಿಕವಾಗಿ ಮಕ್ಕಳಿಗೆ ಆತ್ಮಸ್ಥೈರ್ಯ ತುಂಬುವುದು, ಪರೀಕ್ಷೆಯ ಬಗ್ಗೆ ಧೈರ್ಯ ಮೂಡಿಸುವ ಸಲುವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಮೂಲಕ ಹತ್ತನೇಯ ತರಗತಿಯ ಮಕ್ಕಳಲ್ಲಿ ಓದುವ ಚಿಂತನೆಗೆ ಅವಕಾಶ ಮಾಡಿಕೊಡುವುದು. ಮಕ್ಕಳು ಧೈರ್ಯವಾಗಿ ಪರೀಕ್ಷೆ ಎದುರಿಸಲು  ಆತ್ಮಸ್ಥೈರ್ಯ ಹೆಚ್ಚಿಸುವುದು. ಪರೀಕ್ಷಾ ಟಿಪ್ಸ್, ಮೌಲ್ಯಮಾಪನ, ಪರೀಕ್ಷಾ ಬ್ಲೂಪ್ರಿಂಟ್ ಅವಶ್ಯಕವಾದ ಅಧ್ಯಾಯಗಳು ಇತ್ಯಾದಿ ಮಾಹಿತಿಗಳತ್ತ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಚಾಮರಾಜ್ ದೊಡ್ಡಮನಿ ಮಾತನಾಡಿದರು. ಹಿರಿಯ ಸಾಹಿತಿ ಪಿ.ಎಂ.ಮಣ್ಣೂರು, ಇಮಾಮ್ ಪಟೇಲ್, ವಿಜಯಕುಮಾರ, ರಿಯಾಜ್ ಪಟೇಲ್, ಶಾಂತೇಶ,ಉಷಾದೇವಿ ಹಾಜರಿದ್ದರು. ಕಾಶಿನಾಥ ಮರತೂ ರನಿರೂಪಿಸಿದರೆ ಮಲ್ಲಿನಾಥ ವಂದಿಸಿದರು.

emedialine

Recent Posts

ಸಮಸ್ತ ಲಿಂಗಾಯತರ ಪ್ರಗತಿಗೆ ಲಿಂಗಾಯತ ಸ್ವತಂತ್ರ ಧರ್ಮ ಅಗತ್ಯ: ಪೂಜ್ಯ ಶ್ರೀ ಶಿವಾನಂದ ಮಹಾಸ್ವಾಮಿಗಳು

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗಕ್ಕೆ ಕಲಂ 371ಜೆ ಯಂತೆ ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮ ಎಂದು ಘೋಷಣೆ ಮಾಡಲು ಸರಕಾರದ…

37 mins ago

ವಿಭಾಗ ಮಟ್ಟದ ದಾಸ ಸಾಹಿತ್ಯ ಸಮ್ಮೇಳನದಲ್ಲಿ ವೈದ್ಯ ಶ್ರೀ ಪುರಸ್ಕೃತ ಡಾ. ಶರಣಬಸಪ್ಪ ಕ್ಯಾತನಾಳ ಪುರಸ್ಕಾರ

ಕಲಬುರಗಿ: ನಗರದ ಸಂಗಮೇಶ್ವರ ಸಭಾಗೃಹದಲ್ಲಿ  ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ವಲಯದ ವಿಭಾಗ ಮಟ್ಟದ 2ನೇ ದಾಸ ಸಾಹಿತ್ಯ ಸಮ್ಮೇಳನ…

1 hour ago

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

3 hours ago

ಕಲಬುರಗಿ: ಡೆಂಗ್ಯೂ, ಮಲೇರಿಯಾ ರೋಗಗಳನ್ನು ನಿಯಂತ್ರಿಸಲು ಬಾಲರಾಜ್ ಗುತ್ತೇದಾರ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…

3 hours ago

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

5 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

5 hours ago