ಕಲಬುರಗಿ/ಆಳಂದ: ಚಟುವಟಿಕೆ ಆಧಾರಿತ ಕಲಿಕೆಯಿಂದ ಮಕ್ಕಳಲ್ಲಿ ಕಲಿಯುವ ಆಸಕ್ತಿ ಮೂಡುತ್ತದೆ ಇದು ಮಕ್ಕಳ ಸಮಗ್ರ ಪ್ರಗತಿಗೆ ಸಹಕಾರಿಯಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರಪ್ಪ ನೇರಡಗಿ ಅಭಿಪ್ರಾಯಪಟ್ಟರು.
ಸೋಮವಾರ ಆಳಂದ ತಾಲೂಕಿನ ಖಜೂರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಭಾರತ ಜ್ಞಾನ ವಿಜ್ಞಾನ ಸಮಿತಿ ಜಂಟಿಯಾಗಿ ಹಮ್ಮಿಕೊಂಡಿರುವ ಖಜೂರಿ ಕ್ಲಸ್ಟರ್ ಮಟ್ಟದ ಎರಡು ದಿನಗಳ ಮಕ್ಕಳ ವಿಜ್ಞಾನ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಶೈಕ್ಷಣಿಕ ರಂಗದಲ್ಲಿ ವೈಜ್ಞಾನಿಕವಾಗಿ ರಚನಾತ್ಮಕ ಕಾರ್ಯಗಳು ಆಯೋಜಿಸುವುದರಿಂದ ಮಕ್ಕಳಲ್ಲಿ ತೀವ್ರತರವಾದ ಆಸಕ್ತಿ ಮೂಡುತ್ತದೆ ಜೊತೆಗೆ ವಿದ್ಯಾರ್ಥಿಗಳಲ್ಲಿ ಆಲೋಚನಾ ಸಾಮರ್ಥ್ಯ ವೃದ್ಧಿಯಾಗಿ ಸಂಶೋಧನಾ ಭಾವ ಹೆಚ್ಚಾಗುತ್ತದೆ ಹೀಗಾಗಿ ಇದು ಮುಂದೆ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯಲು ಸಹಾಯವಾಗುತ್ತದೆ ಎಂದು ನುಡಿದರು.
ಸಮುದಾಯಗಳ ಸಹಭಾಗಿತ್ವದೊಂದಿಗೆ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರನ್ನು ಸರ್ಕಾರದ ಭಾಗವಾಗಿ ಮಾಡುವುದು ಸರ್ಕಾರದ ಆಶಯವಾಗಿದೆ ಈ ನಿಟ್ಟಿನಲ್ಲಿ ಜರುಗಿರುವ ಕಾರ್ಯಕ್ರಮ ಯಶಸ್ವಿಯಾಗಿದೆ ಎಂದರು. ಕ್ಷೇತ್ರ ಸಮನ್ವಯಾಧಿಕಾರಿ ರಾಜಶೇಖರ ಗೊಸಲ, ಪ್ರೌಢ ಶಾಲೆ ಮುಖ್ಯ ಗುರು ಶ್ರೀಮಂತ ಜಿಡ್ಡೆ, ಭಾರತ ಜ್ಞಾನ ವಿಜ್ಞಾನ ಸಮಿತಿಯ ಶ್ರೀಶೈಲ ಮಾಡ್ಯಾಳೆ, ಫಕ್ರುದ್ದೀನ್ ಮಾತನಾಡಿದರು. ಭಾರತ ಜ್ಞಾನ ವಿಜ್ಞಾನ ಸಮಿತಿಯ ರಾಜ್ಯ ಸಮಿತಿ ಸದಸ್ಯ ಪ್ರಭಾಕರ ಸಲಗರೆ, ಸಿಆರ್ಸಿ ವೆಂಕಟ ಚವ್ಹಾಣ, ಪ್ರೌಢ ಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ಮರೇಪ್ಪ ಬಡಿಗೇರ, ವಿಷಯ ಪರೀವಿಕ್ಷಕ ಶೇಖ ರೌಫ್, ಫಕ್ರುದ್ದೀನ, ಮುಖ್ಯ ಗುರು ವಿಜಯಲಕ್ಷ್ಮೀ, ಕೋರಣೇಶ್ವರ ಗ್ಯಾಸ ಏಜೆನ್ಸಿಯ ವೈಜನಾಥ ವಾಡೆ ವೇದಿಕೆಯ ಮೇಲೆ ಇದ್ದರು.
ಕಾರ್ಯಕ್ರಮದ ಆರಂಭದಲ್ಲಿ ವಿಜ್ಞಾನ ಭಿತ್ತಿ ಪತ್ರಗಳನ್ನು ಹಿಡಿದು ಸ್ಥಳೀಯ ಜಾನಪದ ಕಲಾ ತಂಡಗಳೊಂದಿಗೆ ಗ್ರಾಮದಲ್ಲಿ ಆಕರ್ಷಕ ಮೆರವಣಿಗೆ ಮಾಡಲಾಯಿತು. ಖಜೂರಿ ಕ್ಲಸ್ಟರ್ನ ಬಬಲೇಶ್ವರ, ಜಮಗಾ (ಆರ್), ಬಂಗರಗಾ, ಖಂಡಾಳ, ಜವಳಗಾ, ಕೋತನ ಹಿಪ್ಪರ್ಗಾ, ರುದ್ರವಾಡಿ, ಖಜೂರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ಶಿಕ್ಷಕರು, ಸಂಪನ್ಮೂಲ ವ್ಯಕ್ತಿಗಳು, ವಿದ್ಯಾರ್ಥಿಗಳು ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.
ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ವೆಂಕಟ ಚವ್ಹಾಣ ಸ್ವಾಗತಿಸಿದರೆ, ಯೋಗಿರಾಜ ಮಾಡ್ಯಾಳೆ ವಂದಿಸಿದರು. ಶಿಕ್ಷಕಿ ಇರ್ಷಾದ ಬೇಗಂ ನಿರೂಪಿಸಿದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…