ಮೀಸಲಾತಿ ಸಮಾಜಿಕ ನ್ಯಾಯ : ನಿವೃತ್ತ ನ್ಯಾ. ಎಚ್.ಎನ್ ನಾಗಮೋಹನದಾಸ್

ಕಲಬುರಗಿ: ದೇಶದಲ್ಲಿ ಜಾತಿ ಜಾತಿಗಳ ಮಧ್ಯೆ ವರ್ಗ ವರ್ಗಗಳ ಮಧ್ಯೆ ಅಸಮಾನತೆ ತಾಂಡವಾಡುತ್ತಿತ್ತು. ಅಂತಹ ಸಂದರ್ಭದಲ್ಲಿ ಮೈಸೂರಿನ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಅನ್ಯಾಯಕ್ಕೆ ಒಳಗಾದ ಜನಗಳಿಗೆ ನ್ಯಾಯ ಕೊಡಬೇಕು ಎಂದು ಮೀಸಲಾತಿ ಜಾರಿಗೆ ತಂದರು ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಎಚ್ ಎನ್ ನಾಗಮೋಹನದಾಸ್ ಹೇಳಿದರು.

ಗುಲ್ಬರ್ಗ ವಿಶ್ವವಿದ್ಯಾಲಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರ ಕಲ್ಯಾಣ ಘಟಕದ ವತಿಯಿಂದ ಮಹಾತ್ಮಗಾಂಧಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಮೀಸಲಾತಿ ನೂರು ವರ್ಷ ಎಂಬ ವಿಷಯದ ಕುರಿತು ಅವರು ಮಾತನಾಡಿ ಮೀಸಲಾತಿ ಸೌಲಭ್ಯ ಪಡೆಯುವುದು ಸಂವಿಧಾನ ಬದ್ಧ ಹಕ್ಕು ಇದೆ. ಆದರೆ ದೇಶದಲ್ಲಿ ಮೀಸಲಾತಿ ವಿರುದ್ಧ ಅಪಪ್ರಚಾರ ನಡೆಯುತ್ತಿದೆ. ಇಲ್ಲಿ ಎಲ್ಲ ವರ್ಗದ ಜನರು ಮೀಸಲಾತಿ ಫಲಾನುಭವಿಗಳೆ ಆದರೂ ಮೀಸಲಾತಿ ಬಗ್ಗೆ ಜನಗಳಿಗೆ ಕೆಟ್ಟ ಅಭಿಪ್ರಾಯ ಇದೆ. ಕೇಂದ್ರ ಸರ್ಕಾರದಲ್ಲಿ 6 ಲಕ್ಷ ಹುದ್ದೆಗಳುನ್ನು ಭರ್ತಿ ಆಗಬೇಕು ಅದು ಆಗುತ್ತಿಲ್ಲ. ರಾಜ್ಯ ಸರ್ಕಾರದಲ್ಲಿ 2 ಲಕ್ಷ 54 ಸಾವಿರ ಹುದ್ದೆಗಳನ್ನು ಖಾಲಿ ಬಿದ್ದಿವೆ. ಉದ್ಯೋಗದ ಬಗ್ಗೆ ಯಾರೋಬ್ಬರು ಮಾತಾಡುತ್ತಿಲ್ಲ. ಇದು ತುಂಬಾ ದುರಂತ. ಗುತ್ತಿಗೆ ಕಾರ್ಮಿಕರಿಗೆ ಮೀಸಲಾತಿ ಕೊಡುತ್ತಿಲ್ಲ. ಈ ಮೀಸಲಾತಿ ಸಾಮಾಜಿಕ ನ್ಯಾಯ ಇದನ್ನು ತೆಗೆದು ಹಾಕಲು ತುಂಬಾ ಪ್ರಯತ್ನ ನಡೆದಿದೆ ಎಂದು ಅವರು ಹೇಳಿದರು.

ಉರಲಿಂಗ ಪೆದ್ದಿ ಮಠದ ಜ್ಞಾನ ಪ್ರಕಾಶ್ ಸ್ವಾಮೀಜಿ ಮುಖ್ಯ ಅತಿಥಿಯಾಗಿ ಮಾತನಾಡಿ ಕೆಲವರು ಮೀಸಲಾತಿ ಬಗ್ಗೆ ಹೇಳಿಕೊಳ್ಳಕ್ಕೆ ಮುಜುಗರ ಪಟ್ಟಿಕೊಳ್ಳುತ್ತಾರೆ. ಮೀಸಲಾತಿ ಸಾಮಾಜಿಕ ನ್ಯಾಯದ ಪ್ರತಿಬಿಂಬ ಹೊರತು ಅದು ಬಿಕ್ಷೆ ಅಲ್ಲ. ಅಸ್ಪೃಶ್ಯರ ನೋವು ಅಸ್ಪೃಶ್ಯರಿಗೆ ಮಾತ್ರ ಗೊತ್ತು. ನ್ಯಾಯಾಲಯದ ನ್ಯಾಯಾಧೀಶರು ಸಂವಿಧಾನವನ್ನು ತಾಂತ್ರಿಕವಾಗಿ ಓದುತ್ತಿದ್ದಾರೆ ಹೊರತಾಗಿ ತಾತ್ವಿಕವಾಗಿ ಓದುತ್ತಿಲ್ಲ ಎಂದು ಅವರು ಹೇಳಿದರು.

ಪ್ರಭಾರಿ ಕುಲಪತಿ ಪ್ರೊ, ಲಕ್ಷ್ಮಣ ರಾಜನಳ್ಕರ್, ಕುಲಸಚಿವ ಪ್ರೊ, ಸಿ ಸೋಮಶೇಖರ್, ಮೌಲ್ಯಮಾಪನ ಕುಲಸಚಿವ ಪ್ರೊ, ಸಂಜೀವಕುಮಾರ ಕೆ. ಎಂ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರ ಕಲ್ಯಾಣ ಘಟಕದ ಅಧ್ಯಕ್ಷ ಡಾ. ಗಣಪತಿ ಸಿಂಧೆ, ಡಾ. ವಿ ಟಿ ಕಾಂಬಳೆ, ಡಾ. ಡಿ ಬಿ ಪಾಟೀಲ, ಡಾ. ಎನ್ ಜಿ ಕಣ್ಣೂರ, ಡಾ. ಹಣಮಂತ ಜಂಗೆ ಇತರರು ಇದ್ದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

2 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

7 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

18 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

19 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

20 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420