ಮೀಸಲಾತಿ ಹೆಚ್ಚಳಕ್ಕೆ ಒತ್ತಾಯ: ಆಯೋಗಕ್ಕೆ ಮನವಿ

ಕಲಬುರಗಿ: ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಜಾತಿ ಜನಗಳಿಗೆ ಶೇ. ೩೨ ರಿಂದ ೩೫% ರಷ್ಟು ಮೀಸಲಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಶೇ. ೮% ರಷ್ಟು ಮೀಸಲಾತಿ ನೀಡುವಂತೆ ಒತ್ತಾಯಿಸಿ ರಿಪಬ್ಲಿಕನ್ ಯೂಥ್ ಫೆಡರೇಷನ್ ವತಿಯಿಂದ ನ್ಯಾ. ನಾಗಮೋಹನ್ ದಾಸ್ ಆಯೋಗದ ಅಧ್ಯಕ್ಷರಾದ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರಿಗೆ ಮನವಿ ಸಲ್ಲಿಸಲಾಯಿತು.

ನಗರದ ಎಸ್ ಎಂ ಪಂಡಿತ ರಂಗಮಂದಿರದಲ್ಲಿ ನಡೆದ ವಿಭಾಗದ ಮಟ್ಟದ ಸಮಾಲೋಚನಾ ಸಭೆಯಲ್ಲಿ ಯೂಥ್ ಫೆಡರೇಷನ್ ಅಧ್ಯಕ್ಷ ಹಣಮಂತ ಇಟಗಿ ನೇತೃತ್ವದಲ್ಲಿ ಮನವಿ ಸಲ್ಲಿಸಿದ ಅವರು ಡಾ. ಭೀಮರಾವ ಅಂಬೇಡ್ಕರ್ ಅವರ ಅವಿರತ ಪರಿಶ್ರಮ ಫಲವಾಗಿ ಸಾಂವಿಧಾನಿಕವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಜಾತಿ ಜನರಿಗೆ ಶೇ. ೧೫% ಮತ್ತು ಪರಿಶಿಷ್ಟ ಪಂಗಡದ ಜನಗಳಿಗೆ ಶೇ ೩% ಮೀಸಲಾತಿಯನ್ನು ನೀಡಲಾಗುತ್ತಿದೆ. ಆದರೆ ಪ್ರತಿ ವರ್ಷ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಸಂಖ್ಯೆ ಹೆಚ್ಚಾಗುತ್ತಾ ಬಂದಿದ್ದರೂ ಇದುವರೆಗೂ ಮೀಸಲಾತಿ ಹೆಚ್ಚಳ ಯಾವ ಸರ್ಕಾರವೂ ಆಯೋಗವನ್ನು ರಚಿಸಿರುವುದಿಲ್ಲ. ಆದರೆ ಇದೀಗ ಸರ್ಕಾರ ತಮ್ಮ ನೇತ್ರತ್ವದಲ್ಲಿ ಆಯೋಗವನ್ನು ರಚಿಸಿದ್ದು, ಬಹಳ ಸಂತೋಷದ ವಿಷಯವಾಗಿದೆ. ಆದರೆ ಸದ್ಯ ಇರುವ ಮೀಸಲಾತಿ ಅಭಿವೃದ್ದಿಗೆ ಸಹಕಾರಿಯಾಗುತ್ತಿಲ್ಲ. ಅವರ ಸರ್ವತೋಮುಖ ಅಭಿವೃದ್ಧಿಗೆ ಶೇ. ೩೨ ರಿಂದ ೩೫% ರವರೆಗೆ ಮತ್ತು ಪರಿಶಿಷ್ಟ ಪಂಗಡ ಜನರ ಶೇ. ೮% ಮೀಸಲಾತಿ ಹೆಚ್ಚಿಸಿ ಈ ಜನರಿಗೆ ಸಾಮಾಜಿಕವಾಗಿ ಮುಖ್ಯವಾಹಿನಿಗೆ ತರಬೇಕೆಂದು ತಾವು ನೀಡಿರುವ ಮನವಿಯಲ್ಲಿ ಕೇಳಿಕೊಂಡಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನರ ಒಟ್ಟಾರೆ ಸಾಮಾಜಿಕ, ಆರ್ಥಿಕ, ಮತ್ತು ಶೈಕ್ಷಣಿಕ ಪ್ರಗತಿ ಇದುವರೆಗೂ ಅದೋಗತಿಯಲ್ಲಿದೆ. ಕಾರಣ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ೧೦೨ ಜಾತಿಗಳು ಪಟ್ಟಿಯಲ್ಲಿದ್ದು, ಈ ಜಾತಿಗಳ ಜನರು ಶೇ ೧೫% ಮೀಸಲಾತಿ ಲಭಿಸುತ್ತಿರುವುದರಿಂದ ಇವರ ಜೀವನಮಟ್ಟ ಇಲ್ಲಿಯವರೆಗೂ ಸುಧಾರಣೆ ಕಂಡಿಲ್ಲ ಎಂದು ಮನವಿಯಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಸಂಚಾಲಕರಾದ ಹನುಮಂತ ಇಟಗಿ, ಮುಖಂಡರಾದ ಸಂತೋಷ ಮೇಲ್ಮನಿ, ನಾಗೇಂದ್ರ ಕೆ ಜವಳಿ, ದಿನೇಶ್ ದೊಡ್ಡಮನಿ, ರಾಣು ಮುದ್ದನಕರ್, ಸತೀಶ್ ಮಾಲೆ, ಸಿದ್ಧಾರ್ಥ ಚಿಂಚನಸೂರ, ಶಿವಕುಮಾರ್ ಜಾಲವಾದ, ರತನ ಕನ್ನಡಗಿ, ರವಿ ಡೋಣಿ, ಅಜಯ ಕೋರಳ್ಳಿ, ನಾಗಭೂಷಣ ಹರಳಕಟ್ಟಿ, ಶ್ರವಣಕುಮಾರ ಖಜನ್ದಾರ್ ವಿನೋದ ಕಾಂಬಳೆ, ಅಂಬರೀಶ್ ಅಂಬಲಗಿ, ಶೀವಾ ನರೋಣ, ಮಂಜುನಾಥ ಹಾದಿಮನಿ, ಶಂಭುಲಿಂಗ ಭರಣಿ, ಬಸವರಾಜ ಬಂಗರಗಾ,ದಯಾನಂದ ಕೋಹಿನೂರಕರ್ ಉಪಸ್ಥಿತರಿದ್ದರು

emedialine

Recent Posts

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

49 mins ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

4 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

10 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

21 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

22 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420