ಮಕ್ಕಳ ಕಲಿಕೆಯನ್ನು ಅಭಿವೃದ್ಧಿಪಡಿಸುವಲ್ಲಿ ಮೇಳಗಳು ಸಹಕಾರಿ: ಶಿಕ್ಷಣಾಧಿಕಾರಿ ನಾಗರತ್ನಾ ಓಲೆಕಾರ್

ಸುರಪುರ: ಮಕ್ಕಳ ಕಲಿಕೆಯನ್ನು ಅಭಿವೃದ್ಧಿಪಡಿಸುವಲ್ಲಿ ಶೈಕ್ಷಣಿಕ ಮೇಳಗಳು ಸಹಕಾರಿಯಾಗಿವೆ, ಮಕ್ಕಳು ಭಾಷೆ ಮತ್ತು ಗಣಿತಕ್ಕೆ ಸಂಬಂಧಿಸಿದಂತೆ ಅನೇಕ ಪರಿಕಲ್ಪನೆಗಳನ್ನು ಕುರಿತು ಉತ್ತಮವಾಗಿ ಅಭಿವ್ಯಕ್ತಿಸಿರುವುದಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರತ್ನಾ ಓಲೆಕಾರ್ ಪ್ರಶಂಸೆ ವ್ಯಕ್ತಪಡಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗು ಅಜೀಂ ಪ್ರೇಮ್‌ಜೀ ಪೌಂಡೇಷನ್ ವತಿಯಿಂದ ನಗರದ ಖುರೇಶಿ ಮೊಹಲ್ಲಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾದ ಭಾಷಾ ಮತ್ತು ಗಣಿತ ಮೇಳವನ್ನು ಉದ್ಘಾಟಿಸಿ ಮಾತನಾಡಿ, ಈ ರೀತಿಯಾದ ಶೈಕ್ಷಣಿಕ ಮೇಳಗಳನ್ನು ಇನ್ನುಳಿದ ಶಾಲೆಗಳಲ್ಲಿ ಹಮ್ಮಿಕೊಳ್ಳುವುದರಿಂದ ಮಕ್ಕಳಲ್ಲಿ ಉತ್ತಮವಾದ ಕಲಿಕೆಯನ್ನುಂಟುಮಾಡಲು ಸಾಧ್ಯವಾಗುತ್ತದೆ.ಇದೇ ರೀತಿ ಇತರೆ ಶಾಲೆಗಳಲ್ಲೂ ಮೇಳಗಳನ್ನು ಹಮ್ಮಿಕೊಳ್ಳಲು ಗಮನಹರಿಸೋಣ ಎಂದರು.

ಅಜೀಮ್ ಪ್ರೇಮಜೀ ಫೌಂಡೇಷನ್‌ನ ಸಂಪನ್ಮೂಲ ವ್ಯಕ್ತಿ ಅನ್ವರ ಜಮಾದಾರ ಮಾತನಾಡಿ, ಕಳೆದ ಇಪ್ಪತ್ತು ದಿನಗಳಿಂದ ಶಿಕ್ಷಕರು ಮತ್ತು ಮಕ್ಕಳು ನಿರಂತರವಾಗಿ ಭಾಷೆ ಮತ್ತು ಗಣಿತಕ್ಕೆ ಸಂಬಂಧಿಸಿದ ಅನೇಕ ಚಟುವಟಿಕೆಗಳನ್ನು ಅನುಭವತ್ಮಾಕವಾಗಿ ಕಲಿತಿರುವುದಕ್ಕೆ ಈ ಮೇಳ ಸಾಕ್ಷಿಯಾಗಿದೆ. ಇಂತಹ ಶೈಕ್ಷಣಿಕ ಮೇಳಗಳಿಂದ ಮಕ್ಕಳಲ್ಲಿ ಯೋಚಿಸುವ, ಪ್ರಶ್ನಿಸುವ, ಹಾಗೂ ನಿರರ್ಗಳವಾಗಿ ಮಾತನಾಡುವ ಸಾಮರ್ಥ್ಯಗಳ ಅಭಿವೃದ್ಧಿಯಾಗುವುದು ಎಂದು ಅಭಿಪ್ರಾಯಪಟ್ಟರು.

ಮೇಳದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳಾದ ಖುರೇಶಿ ಮೋಹಲ್ಲಾ,ಕುರಬರಗಲ್ಲಿ, ಪಾಳದಕೇರಿ ಹಾಗು ಸರಕಾರಿ ಕಿರಿಯ ಪ್ರಾಥಮಿಕ ಉರ್ದು ಶಾಲೆ ಖುರೇಶಿ ಮೋಹಲ್ಲಾ ಶಾಲೆಯ ಮಕ್ಕಳು ಚಟುವಟಿಕೆಗಳಲ್ಲಿ ಭಾಗವಹಿಸಿದ್ದವು, ಬಿ.ಆರ್.ಪಿ ಖಾದರಪಟೇಲ್, ಸಿ.ಆರ್.ಪಿ ತಿಪ್ಪಣ್ಣ ಶಿನ್ನೂರ, ಯೂನುಸ ಕಮತಗಿ, ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸೋಮರಡ್ಡಿ ಮಂಗಿಹಾಳ, ಉರ್ದು ಶಾ.ಶಿ. ಅಧ್ಯಕ್ಷ ಜಾಕೀರ ಹುಸೇನ ಮುಖ್ಯ ಶಿಕ್ಷಕ ಸಾಮುವೆಲ್, ಶಿಕ್ಷಕರಾದ ಮಮತಾ, ರವಿಗಲಗಿನ, ರೇಣುಕಾ, ಬಸಯ್ಯ ಮಠಪತಿ, ಮುಲ್ಕಚಾಂದ, ಸುಜಾತ, ಅಮರಯ್ಯ ಚನ್ನಪ್ಪ ಕ್ಯಾದಗಿ, ಇಂದುಮತಿ ಅಬ್ದುಲ್ ರಹೀಮ್, ಸಭಿಯಾಬಾನು, ಶಕೀಲ್, ರಾಜಶೇಖರ ದೇಸಾಯಿ ಪ್ರಮುಖರಾದ ಮಹ್ಮದ ಶಕೀಲ್, ಹನೀಫ, ಎಸ್.ಡಿ.ಎಮ್.ಸಿ ಅಂಬಲಪ್ಪ, ನಾಗೇ,ಶ ಗೋಪಾಲ್, ಎಪಿಏಫನ ಪರಮಣ್ಣ ತೆಳಗೇರಿ, ಸುರಪುರ ಕ್ಲಸ್ಟರನ ವಿವಿಧ ಶಾಲೆಯ ಶಿಕ್ಷಕರು, ಮಕ್ಕಳು ಪಾಲಕ ಪೋಷಕರು ಭಾಗವಹಿಸಿದ್ದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

2 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

8 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

19 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

20 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

20 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420