ಕಲಬುರಗಿ: ಕಲಬುರಗಿ ವಿಮಾನ ನಿಲ್ದಾಣಕ್ಕೆ ಜಗದ್ಗುರು ಶ್ರೀ ರೇಣುಕಾಚಾರ್ಯ ಹೆಸರು ನಾಮಕರಣ ಮಾಡಲು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲು ಇಂದು ಜಗದ್ಗುರು ಶ್ರೀ ರೇಣುಕಾಚಾರ್ಯ ಸದ್ಭಕ್ತ ಮಂಡಳಿ ವತಿಯಿಂದ ಅಖಿಲ ಭಾರತ ವೀರಶೈವ ಮಹಾಸಭೆಯ ಕಲಬುರಗಿ ಜಿಲ್ಲಾ ಘಟಕದ ಅಧ್ಯಕ್ಷರಾದ ಶರಣಕುಮಾರ ಮೋದಿ ಯವರಿಗೆ ನಿಯೋಗದ ಮೂಲಕ ಮನವಿ ಪತ್ರ ಸಲ್ಲಿಸಲಾಯಿತು.
ಮನವಿ ಸ್ವೀಕರಿಸಿ ನಿಯೋಗದ ಮುಖಂಡರೊಂದಿಗೆ ಮಾತನಾಡಿದ ಮೋದಿಯವರು ತಮ್ಮ ಬೇಡಿಕೆ ನ್ಯಾಯಸಮ್ಮತವಾಗಿದ್ದು ಜಿಲ್ಲಾ ಘಟಕದ ಕಾರ್ಯಕಾರಿಣಿ ಸಭೆಯಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಂಡು ಮಹಾಸಭೆಯ ರಾಜ್ಯ ಮತ್ತು ಕೇಂದ್ರ ಘಟಕಕ್ಕೆ ಪತ್ರ ಬರೆಯಲಾಗುವುದು ಮತ್ತು ತಮ್ಮ ಹೋರಾಟಕ್ಕೆ ಬೆಂಬಲ ನೀಡಲಾಗುವುದೆಂದು ಘೋಷಿಸಿದರು. ಮಂಡಳಿ ತೆಗೆದುಕೊಳ್ಳುವ ಎಲ್ಲಾ ಹೋರಾಟಕ್ಕೆ ತಮ್ಮ ಸಂಪೂರ್ಣ ಸಹಕಾರವಿದ್ದು, ರಾಜ್ಯದ ಮುಖ್ಯಮಂತ್ರಿಗಳ ಬಳಿ ತಾವು ತೆಗೆದುಕೊಂಡು ಹೋಗುವ ನಿಯೋಗದ ಜೊತೆಗೆ ತಾವೂ ಬರುವುದಾಗಿ ತಿಳಿಸಿದರು.
ಮಂಡಳಿಯ ಅಧ್ಯಕ್ಷರಾದ ಅಣವೀರಯ್ಯ ಪ್ಯಾಟಿಮನಿ ಮಾತನಾಡಿ ಕಲಬುರಗಿ ಜಿಲ್ಲೆಯಲ್ಲಿ ಜಗದ್ಗುರು ರೇಣುಕಾಚಾರ್ಯರ ದೇವಸ್ಥಾನಗಳು ಗ್ರಾಮೀಣ ಭಾಗ, ಪಟ್ಟಣ, ನಗರಗಳಲ್ಲಿ ಕಾಣಬಹುದಾಗಿದ್ದು, ಜಾತಿ, ಮತ, ಪಂಥ, ಪ್ರದೆಶ ಮೀರಿ ಜಗದ್ಗುರು ರೇಣುಕಾಚಾರ್ಯರ ಸದ್ಭಕ್ತರಿದ್ದು ಶ್ರದ್ಧೆಯಿಂದ, ಭಕ್ತಿಯಿಂದ ಭಜಿಸುತ್ತಾರೆ, ಪೂಜಿಸುತ್ತಾರೆ, ಹೀಗಾಗಿ ಲಕ್ಷಾಂತರ ಜನರ ಬೇಡಿಕೆ ಮತ್ತು ಆಶಯದಂತೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಶ್ರೀ ಜಗದ್ಗುರು ರೇಣುಕಾಚಾರ್ಯರ ಹೆಸರು ನಾಮಕರಣ ಮಾಡುವಂತೆ ತಾವುಗಳು ಮಹಾಸಭೆಯ ವತಿಯಿಂದ ಸರ್ಕಾರದ ಮೇಲೆ ಒತ್ತಡ ತರುವಂತೆ ಕೋರಿದರು.
ಈ ಸಂದರ್ಭದಲ್ಲಿ ಮಹಾಸಭೆಯ ಪದಾಧಿಕಾರಿಗಳು ಮತ್ತು ಆಡಳಿತ ಮಂಡಳಿಯ ಸದಸ್ಯರು ಹಾಜರಿದ್ದರು. ನಿಯೋಗದಲ್ಲಿ ಸದ್ಭಕ್ತ ಮಂಡಳಿಯ ಬಸವರಾಜ ಕುಲಕುಂದಿ, ಸಂಗಯ್ಯ ಹಿರೇಮಠ, ಲಿಂಗನಗೌಡ ಪಾಟೀಲ, ಶಿವಲಿಂಗಯ್ಯ ಸ್ವಾಮಿ ಸಾವಳಗಿ, ಶಿವರಾಜ ಪಾಟೀಲ ಅವರಾದ, ಶಿವು ಸ್ವಾಮಿ, ಸೋಮಶೇಖರ ಹಿರೇಮಠ ಗುರಮಿಠಕಲ್, ಮರುಳಾರಾಧ್ಯ ಕಳ್ಳಿಮಠ, ಗಿರೀಶಗೌಡ ಇನಾಮದಾರ, ಫಕೀರಯ್ಯ ಟೇಂಗಳಿ, ಸಾಗರ ಹಿರೇಮಠ, ಸತೀಶ ಸ್ವಾಮಿ, ನಾಗರಾಜ ಪತ್ತಾರ, ಎನ್.ಎಸ್.ಹಿರೇಮಠ, ಸಂಜು ಟೆಂಗೆ, ಸಿದ್ರಾಮಯ್ಯ ಪುರಾಣಿಕ ಸೇರಿದಂತೆ ಅನೇಕರು ಉಪಸ್ಥಿರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…