ಕಲಬುರಗಿ: ಸೇಡಂ ರಸ್ತೆಯ ವಿಶ್ವವಿದ್ಯಾಲಯದ ಎದುರುಗಡೆ ಇರುವ ಸಿದ್ಧಾರ್ಥ ಕಿವುಡ ಮತ್ತು ಮೂಕ ಮಕ್ಕಳ ವಸತಿ ನಿಲಯ ಪ್ರೌಢಶಾಲೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಮತ್ತು ಸಿದ್ಧಾರ್ಥ ಶ್ರವಣ ದೋಷವುಳ್ಳ ವಿಶೇಷ ಪ್ರೌಢಶಾಲೆ ಇವರುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ವಿಕಲಚೇತನ ದಿನಾಚರಣೆ ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಗೋಮತಿ ರಾಘವೇಂದ್ರ ಅವರು ಉದ್ಘಾಟಿಸಿದರು.
ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಾದ ಬನ್ಸಿ ಪವಾರ, ದಕ್ಷಿಣ ಭಾರತ ದಲಿತ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ, ವೈಜನಾಥ ಝಳಕಿ, ಡಾ.ಶಂಕುತಲಾ ಬುನಾಳೆ, ಡಾ.ಕೃಷ್ಣಪ್ಪಾ, ಶಿವಶರಣ ರಾಜೇ, ಡಾ.ಸಿದ್ಧಾರ್ಥ ಕೊರವಾರ, ಪ್ರಕಾಶ ಕೊರವಾರ ಇದ್ದರು.