ಚಿಂಚೋಳಿ ಶರಣ ಸಾಹಿತ್ಯ ಪರಿಷತ್ ಘಟಕದ ಉದ್ಘಾಟನೆ ನಾಳೆ: ಐನೋಳಿ

0
85
ಚಿಂಚೋಳಿ: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಚಿಂಚೋಳಿಯ ತಾಲೂಕಾ ಘಟಕದ ಉದ್ಘಾಟನಾ ಸಮಾರಂಭವು 13 ರಂದು  ಮಧ್ಯಾಹ್ನ2 ಗಂಟೆಗೆ ಪಟ್ಟಣದ ಹಾರಕೂಡ ಚನ್ನಬಸವೇಶ್ವರ ಪಿ.ಯು ಕಾಲೇಜು ಚಂದಾಪೂರನಲ್ಲಿ ನಡೆಯಲಿದೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ಚಿಂಚೋಳಿ ಅಧ್ಯಕ್ಷ  ಬಸವರಾಜ ಐನೋಳಿ  ತಿಳಿಸಿದ್ದಾರೆ.
ಚಿಂಚೋಳಿ ಸಿಪಿಐ ಮಹಾಂತೇಶ ಪಾಟೀಲ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಕುಪೇಂದ್ರ ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ. ಪತ್ರಕರ್ತ-ಸಾಹಿತಿ ಶಿವರಂಜನ್ ಸತ್ಯಂಪೇಟೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಸಾಪ ತಾಲ್ಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಪಾಲಾಮೂರ ಅತಿಥಿಗಳಾಗಿ ಆಗಮಿಸಲಿದ್ದು, ಚನ್ನವೀರ ಕಲ್ಲೂರ, ಪುಂಡಲೀಕ ಸನಾದಿ, ಕಾಶಿನಾಥ ಮಡಿವಾಳ, ಶರಣಯ್ಯ ಇತರರು ಕಾರ್ಯಕ್ರಮದಲ್ಲಿ ಭಾಗಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here