ಕಲಬುರಗಿ: ಜನಪದವು ಜನರ ಮನಸ್ಸನ್ನು ಶುದ್ಧಗೊಳಿಸುತ್ತದೆ ಇದರಿಂದ ಆರೋಗ್ಯವಂತ ಸಮಾಜವು ನಿರ್ಮಾಣಗೊಂಡು ಸದೃಢ ರಾಷ್ಟ್ರ ನಿರ್ಮಾಣಕ್ಕಾಗಿ ಪೂರಕವಾಗಿದೆ. ಎಂದು ರಾಜ್ಯ ಎನ್ ಎಸ್ ಎಸ್ ಅನುಷ್ಠಾನ ಅಧಿಕಾರಿಗಳಾದ ಡಾ. ಪೂರ್ಣಿಮಾ ಜೋಗಿ ಅವರು ಹೇಳಿದರು.
ಗುಲ್ಬರ್ಗ ವಿಶ್ವವಿದ್ಯಾಲಯದ ಮಹಾತ್ಮಗಾಂಧಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆ ಕೋಶ ಮತ್ತು ಕನ್ನಡ ಜಾನಪದ ಪರಿಷತ್ ಬೆಂಗಳೂರು ಹಾಗೂ ಜಿಲ್ಲಾ ಘಟಕ ಕಲಬುರ್ಗಿ ಇವುಗಳ ಸಂಯುಕ್ತ ಆಶ್ರಯದಲ್ಲಿ ‘ಕಲ್ಯಾಣ ಕರ್ನಾಟಕ ಜಾನಪದ ಸಂಭ್ರಮ’ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿ ಇಂದಿನ ಯುಗ ಡಿಜಿಟಲ್ ಯುಗ ಇರುವುದರಿಂದ ಮಾನವ ಸಂಬಂಧಗಳು ತುಂಬಾ ದೂರ ಆಗುತ್ತಲಿವೆ. ಈ ಮಾನವ ಸಂಬಂಧಗಳನ್ನು ಬೆಸೆಯುಲು ಗ್ರಾಮೀಣ ಸೊಗಡಿನ ಜಾನಪದವನ್ನು ನಶಿಸಿ ಹೋಗುತ್ತಿರುವದರಿಂದ ನಮ್ಮ ಜನತೆ ಸಾಂಸ್ಕೃತಿಕವಾಗಿ ಹಾಳಾಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.
ಸಂಬಂಧಗಳ ಬೆಸಗುಗಾಗಿ ಜನಪದ ಸಂಸ್ಕೃತಿ ಶ್ರಮ ಅದನ್ನು ಪೋಷಿಸಿ ಬೆಳೆಸಲು ಶಾಲಾ ಕಾಲೇಜುಗಳ ಮಟ್ಟದಲ್ಲಿ ಮತ್ತು ಗ್ರಾಮೀಣ ಮಟ್ಟದಲ್ಲಿ ಜನಪದ ಹಬ್ಬ ಹಮ್ಮಿಕೊಳ್ಳುವುದು ಅವಶ್ಯಕ ಇದೆ ಎಂದು ಅವರು ಹೇಳಿದರು.
ಕನ್ನಡ ಜಾನಪದ ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷರಾದ ಡಾ.ಎಸ್ ಬಾಲಾಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ದೇಶಿ ಜಾನಪದ ಕಲೆಗಳು ನಶಿಸಿ ಹೋಗುತ್ತಿವೆ. ಜಾನಪದ ಬಡ ಕಲಾವಿದರಿಗೆ ಯಾವುದೇ ಮಾಶಾಸನ ಇರುವುದಿಲ್ಲ ಹೀಗಾಗಿ ಅವರಿಗೆ ಸರ್ಕಾರದಿಂದ ಮಾಶಾಸನ ಕೊಡಿಸುವ ಭರವಸೆಯನ್ನು ನೀಡಿದರು.
ಗುಲ್ಬರ್ಗ ವಿಶ್ವವಿದ್ಯಾಲಯದ ಎನ್ ಎಸ್ ಎಸ್ ಸಂಯೋಜಕರಾದ ಪ್ರೊ, ರಮೇಶ ಲಂಡನಕರ್ ಪ್ರಾಸ್ತಾವಿಕವಾಗಿ ಮಾತನಾಡಿ ಜನಪದ ಬೆಳವಣಿಗೆ ಆದರೆ ನಮ್ಮ ಸಂಸ್ಕೃತಿ ಉಳಿಯುತ್ತದೆ. ಮುಂದಿನ ಪೀಳಿಗೆಗೆ ಕೊಂಡೊಯ್ಯುಲು ಅನುಕೂಲವಾಗುತ್ತದೆ. ನಾವೆಲ್ಲರೂ ಇಂದು ಜಾನಪದ ಸಾಂಸ್ಕೃತಿಕ ಸೇತುವೆ ನಿರ್ಮಾಣ ಮಾಡಬೇಕಾಗಿದೆ ದೇಶೀಯ ಕಲೆ, ಸಂಸ್ಕೃತಿಗಳನ್ನು ಮರೆತರೆ ಬದುಕಿನ ಸತ್ವವನ್ನು ಕಳೆದುಕೊಂಡಂತೆ. ಜನಪದ ನಮ್ಮ ಸಂಸ್ಕೃತಿಯ ತಾಯಿಬೇರು. ಎಂದು ಅವರು ಹೇಳಿದರು.
ಗುಲ್ಬರ್ಗ ವಿಶ್ವವಿದ್ಯಾಲಯದ ಪ್ರಭಾರಿ ಕುಲಪತಿ ಪ್ರೊ, ಲಕ್ಷ್ಮಣ ರಾಜನಾಳ್ಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ` ಜಾಗತೀಕರಣ, ಪಾಶ್ಚಿಮಾತ್ಯ ಸಂಸ್ಕೃತಿಯ ಅನುಕರಣೆ ಮತ್ತಿತರ ಕಾರಣಗಳಿಂದ ಜನಪದ ಕಲೆಗಳು ಮರೆಯಾಗುತ್ತಿವೆ’ ಎಂದು ಅವರು ಹೇಳಿ `ನಮ್ಮ ಜನಪದಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಅದರ ಮೂಲಕವೇ ನಮ್ಮ ಹಿರಿಯರು ಬದುಕು ಕಟ್ಟಿಕೊಂಡು ಬೆಳೆದವರು. ಬದಲಾದ ಜೀವನ ಶೈಲಿ, ಮಾಧ್ಯಮಗಳ ಪ್ರಭಾವದಿಂದ ನಮ್ಮ ಕಲೆ ಸಂಸ್ಕೃತಿ ಉಳಿಸುವಲ್ಲಿ ನಾವು ಹಿಂದೆ ಬಿದ್ದಿವೆ . ಮುಂದೊಂದು ದಿನ ಜಗತ್ತಿನ ಸಂಪನ್ಮೂಲಗಳೆಲ್ಲ ಮುಗಿದಾಗ ಮತ್ತೆ ನಾವು ಹಳೆಯ ಜೀವನ ಶೈಲಿಗೆ ಮರುಳಬೇಕಾಗಿ ಬರಬಹುದು’ ಎಂದರು.
ವಾಸುದೇವ್ ಸೇಡಂ, ಶರಣಪ್ಪ ಗೋನಾಳ, ಎಸ್ ಜಿ ಭಾರತಿ, ಡಾ. ಪಿ ಎನ್ ಶಹಾ ವಿಶ್ವೇಶ್ವರ ಭೋವಿ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…