ಮಾಧ್ಯಮದಲ್ಲಿ ಕೆಲಸ ಬಂದರೆ ಒಳಗೆ, ಇಲ್ಲ ಹೊರಗೆ: ಡಾ. ಬಿ. ಟಿ ಮುದ್ದೇಶ

ಕಲಬುರಗಿ: ಮಾಧ್ಯಮ ಕ್ಷೇತ್ರದಲ್ಲಿ ಪದಾರ್ಪಣೆ ಮಾಡುವ ವಿದ್ಯಾರ್ಥಿಗಳಿಗೆ ಮೊದಲು ಸಮಯ ಪಾಲನೆಯ ಜ್ಞಾನ ತುಂಬಾ ಅವಶ್ಯಕತೆ ಇದೆ. ಮಾಧ್ಯಮದಲ್ಲಿ ಕೆಲಸ ಬಂದರೆ ಒಳಗೆ ಇಲ್ಲ ಹೊರಗೆ ಎಂದು ತುಮಕೂರಿನ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ನಿರ್ದೇಶಕ ಡಾ. ಬಿ. ಟಿ ಮುದ್ದೇಶ ಹೇಳಿದರು.

ಗುಲ್ಬರ್ಗ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ‘ಟಿ. ವಿ ಕಾರ್ಯಕ್ರಮದ ತಂತ್ರಗಳು’ ಕುರಿತು ವಿಶೇಷ ಉಪನ್ಯಾಸ ನೀಡಿ ಅವರು ಮಾತನಾಡಿ ಯಾವುದೇ ವಿದ್ಯಾರ್ಥಿಗೆ ಶಿಸ್ತು ಬಹಳ ಮಹತ್ವದು. ಯಾರಲ್ಲಿ ಶಿಸ್ತು ಇರಲ ಅವರು ಒಳ್ಳೆಯ ವಿದ್ಯಾರ್ಥಿ ಆಗಕ್ಕೆ ಸಾಧ್ಯವಿಲ್ಲ. ಹೀಗಾಗಿ ಮಾಧ್ಯಮ ವಿದ್ಯಾರ್ಥಿಗಳು ದಿನದ 24 ಗಂಟೆಗಳ ಕಾಲ ಕಾರ್ಯಪ್ರವೃತ್ತವಾಗಿ ಇರಬೇಕು.

ಭೃಷ್ಟಚಾರದ ವಿರುದ್ಧ ಮತ್ತು ಸಮಾಜ ಸುಧಾರಣೆ ಗೋಸ್ಕರ ಮಾಧ್ಯಮ ವಿದ್ಯಾರ್ಥಿಗಳು ಇಂದಿನ ದಿನಗಳಲ್ಲಿ ಶ್ರಮವಹಿಸಬೇಕಾಕಿದೆ. ಇಂದಿನ ಯುಗ ಬಹಳ ದೊಡ್ಡ ಸ್ಪರ್ಧಾತ್ಮಕ ಯುಗ ಇರುವುದರಿಂದ ಪತ್ರಿಕೋದ್ಯಮದಲ್ಲಿ ಯಾರಿಗೆ ಯಾರು ಇಲ್ಲಿ ಕೆಲಸ ಕಲಿಸಿ ಕೊಡುವುದಿಲ್ಲ. ಆ ಕೆಲಸವನ್ನು ನಾವೇ ಪರಿಶ್ರಮದಿಂದ ಕಲಿತುಕೊಳ್ಳಬೇಕಾಗಿದೆ. ಪತ್ರಕರ್ತರಾದವರು ದೇಶ ವಿದೇಶಗಳು ಸುತ್ತೋದರಿಂದ ಹಲವಾರು ತರಹದ ಅನುಭವಗಳನ್ನು ಸಿಗುತ್ತವೆ. ಪತ್ರಿಕೋದ್ಯಮ ಕ್ಷೇತ್ರ ಬಹಳ ಅದ್ಭುತವಾದ ಕ್ಷೇತ್ರ ಅದನ್ನು ಪಳಗಿಸಿಕೊಳ್ಳಬೇಕು ಆಗ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಏನಾದರೂ ಸಾಧನೆ ಮಾಡುವುದಕ್ಕೆ ಸಾಧ್ಯವಾಗುತ್ತದೆ. ನಮ್ಮ ಪಂಚೇಂದ್ರಿಯಗಳನ್ನು ಯಾವಾಗಲೂ ಕಾರ್ಯನಿರ್ವಸುತ್ತಾ ಇರಬೇಕು ಎಂದು ಅವರು ಹೇಳಿ ಇಂದು ಅತಿ ವೇಗದ ಮಾಧ್ಯಮ ಎಂದರೆ ಅದು ಸಮಾಜಿಕ ಅಂತರ್ಜಾಲ ಮಾಧ್ಯಮ. ಈ ಮಾಧ್ಯಮವನ್ನು ವಿದ್ಯಾರ್ಥಿಗಳು ಬಳಿಸಿಕೊಂಡು ಸಮಾಜಕ್ಕೆ ಸೇವೆ ನೀಡಬೇಕು ಎಂದು ಅವರು ಹೇಳಿದರು.

ಪತ್ರಿಕೋದ್ಯಮ ವಿಭಾಗದ ಸಂಯೋಜನಾಧಿಕಾರಿಗಳಾದ ಪ್ರೊ, ಡಿ ಬಿ ಪಾಟೀಲ ಅತಿಥಿ ಉಪನ್ಯಾಸಕರಾದ ಡಾ. ಕೆ. ಎಂ. ಕುಮಾರಸ್ವಾಮಿ, ಡಾ. ರಾಜಕುಮಾರ ಎಂ ದಣ್ಣೂರ, ಇದ್ದರು. ಲಕ್ಷ್ಮೀ ಬಿ ನಿರೂಪಿಸಿದರು, ಸಿದ್ದು ಸ್ವಾಗತಿಸಿದರು, ಸೋಮೇಶಗೌಡ ವಂದಿಸಿದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 hour ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

3 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

3 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

4 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

4 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420