‘ವೈಸ್ ಆಫ್ ಕಲಬುರಗಿ ದಿನಪತ್ರಿಕೆ ಬಿಡುಗಡೆಗೊಳಿಸಿದ ಖರ್ಗೆ

0
406

ಕಲಬುರಗಿ: ಸಾಮಾಜಿಕ ಕಳಕಳಿ, ಸತ್ಯ, ಪ್ರಾಮಾಣಿಕತೆಯಿಂದ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗಬೇಕು ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಪ್ರಿಯಾಂಕ್ ಎಂ. ಖರ್ಗೆ ಸಲಹೆ ನೀಡಿದರು.

ನಗರದ ಪತ್ರಿಕಾ ಭವನದಲ್ಲಿ ಇಂದು ಸಂಜಯ ಬುಳಕರ್ ಸಂಪಾದಕತ್ವದ ವೈಸ್ ಆಫ್‌ ಕಲಬುರಗಿ ಕನ್ನಡ ದಿನಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಪತ್ರಕರ್ತರಿಗೆ ಸಾಮಾಜಿಕ ಬದ್ಧತೆಯ ಜೊತೆಗೆ ಪ್ರಬುದ್ಧ ಸಮಾಜ ನಿರ್ಮಾಣದ ಜವಾಬ್ದಾರಿಯೂ ಇರಬೇಕಾಗುತ್ತದೆ ಎಂದು ಅಭಿಪ್ರಾಯಪಟ್ಟರು.

Contact Your\'s Advertisement; 9902492681

ಸಮಾಜ ಮತ್ತು ಸರ್ಕಾರದ ಕೊಂಡಿಯಾಗಿ ಕಂಡದ್ದನ್ನು ಕಂಡ ಹಾಗೆ ಬರೆಯುವ ಆ ಮೂಲಕ ಸಮಾಜ ಮತ್ತು ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಜಿಪಂ ವಿರೋಧ ಪಕ್ಷದ ನಾಯಕ ಶಿವಾನಂದ ಪಾಟೀಲ, ಎನ್ ಇ ಕೆಎಸ್ ಆರ್ ಟಿಸಿ ಮಾಜಿ ಅಧ್ಯಕ್ಷ ಭೀಮಣ್ಣ ಸಾಲಿ, ಸಂಪಾದಕರ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಜಿಡಗೆ, ಪತ್ರಕರ್ತ ಗುಣಶೇಖರ ಸ್ವಾಮಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಭವಾನಿಸಿಂಗ್ ಠಾಕೂರ, ಉಪಾಧ್ಯಕ್ಷ ಶಾಮಕುಮಾರ ಶಿಂಧೆ ಇತರರು ವೇದಿಕೆಯಲ್ಲಿದ್ದರು.

ವೈಸ್ ಆಫ್ ಕಲಬುರಗಿ ಪತ್ರಿಕೆಯ ಸಂಪಾದಕ ಸಂಜಯ ಬುಳಕರ್ ಸ್ವಾಗತಿಸಿದರು. ರಮೇಶ ಭಟ್ ನಿರೂಪಿಸಿ ವಂದಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here