ಪೌರತ್ವ ಕಾಯ್ದೆ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಮನೆ ಎದುರೇ ಪ್ರತಿಭಟನೆ

0
113

ಮೈಸೂರು: ದೇಶದಲ್ಲಿ ನಿಶೇದಾಗಜ್ಞೆ ಮತ್ತು ಸೆಕ್ಷನ್ 144 ಇದ್ಯಾವುದನ್ನೂ ಲೆಕ್ಕಿಸದೆ ನಮ್ಮ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ತೋರಿಸುವ ಉದ್ದೇಶದಿಂದ ಇಂದು ಪೌರತ್ವ ಕಾಯಿದೆಯನ್ನು ವಿರೋಧಿಸಿ ಕರ್ನಾಟಕ ರಾಜ್ಯ ಹಿಂದುಳಿದವರ್ಗಗಳ ಜಾಗೃತ ವೇದಿಕೆಯ ರಾಜ್ಯ ಘಟಕದ ಅಧ್ಯಕರಾದ ಕೆ.ಎಸ್.ಶಿವರಾಮು ಮತ್ತು ಪ್ರಗತಿಪರ ಚಿಂತಕರಾದ ಪ್ರೊ. ಮಹೇಶ್ಚಂದಗುರು ರವರು ಪ್ರೊ. ಮಹೇಶ್‌ಚಂದ್ರಗುರು ರವರ ನಿವಾಸದ ಎದುರೇ ಪ್ರತಿಭಟನೆ ಮಾಡುವುದರ ಮೂಲಕ ಪೌರತ್ವ ಕಾಯ್ದೆಯನ್ನು ರದ್ದುಗೊಳಿಸಲು ಒತ್ತಾಯಿಸಿ ಪ್ರತಿರೋಧ ವ್ಯಕ್ತಪಡಿಸಿದರು.

ಮಸೂದೆಯನ್ನು ವಿರೋಧಿಸಿ ಇಂದು ಮೈಸೂರಿನ ಪುರಭವನದ ಆವರಣದಲ್ಲಿ ಬೃಹತ್‌ ಶಾಂತಿಯುತ ಪ್ರತಿಭಟನಾ ಧರಣಿಯನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ ಸರ್ಕಾರ ಏಕಾಏಕಿ 144 ಸೆಕ್ಷನ್ ಜಾರಿಗೊಳಿಸುವುದರ ಮೂಲಕ ನಮ್ಮ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸವನ್ನು ಮಾಡಿತು. ಆ ಮೂಲಕ ನಮ್ಮ ಧ್ವನಿಗಳನ್ನು ಅಡಗಿಸುವ ಕೆಲಸವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವ್ಯವಸ್ಥಿತವಾಗಿ ಮಾಡುತ್ತಿವೆ, ದೇಶದಲ್ಲಿ ಪೌರತ್ವ ಕಾಯ್ದೆ ವಿರುದ್ಧ ಬಹಳ ದೊಡ್ಡಮಟ್ಟದಲ್ಲಿ ವಿರೋಧ ವ್ಯಕ್ತವಾಗಿತಿದೆ ಎಂದರು.

Contact Your\'s Advertisement; 9902492681

ಡಾ.ಬಿ.ಆರ್.ಅಂಬೇಡ್ಕರ್ ರವರ ಸಂವಿಧಾನದ ಆಶಯದ ವಿರುದ್ಧವಾಗಿ ಪೌರತ್ವ ಕಾಯ್ದೆ ಇರುವುದರಿಂದ ಮತ್ತು ಸಂವಿಧಾನವನ್ನು ಬುಡಮೇಲು ಮಾಡುವ ಕೃತ್ಯ ಇದಾಗಿರುವುದರಿಂದ ಈ ಕಾಯ್ದೆಯನ್ನು ಕೇಂದ್ರ ಸರ್ಕಾರ ಈ ಕೂಡಲೇ ರದ್ದುಗೊಳಿಸಿ ಜತ್ಯಾತೀತ ಸಮಾಜದ ನಿರ್ಮಾಣಕ್ಕೆ ಸಹಕರಿಸಬೇಕೆಂದು ಒತ್ತಾಯಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here