ಅನುದಾನಿತ ಶಾಲಾ ಕಾಲೇಜುಗಳ ನೌಕರರಿಗೂ ಪಿಂಚಣಿ ನೀಡಿ: ಚಂದಪ್ಪ ಯಾದವ್

ಸುರಪುರ: ರಾಜ್ಯದಲ್ಲಿರುವ ಅನುದಾನಿತ ಶಾಲಾ ಕಾಲೇಜುಗಳಲ್ಲಿನ ನೌಕರರಿಗೂ ಸರಕಾರ ಪಿಂಚಣಿ ನೀಡಬೇಕು ಎಂದು ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ಜಿಲ್ಲಾಧ್ಯಕ್ಷ ಚಂದಪ್ಪ ಯಾದವ್ ಸರಕಾರಕ್ಕೆ ಒತ್ತಾಯಿಸಿದರು.

ನಗರದ ತಹಸೀಲ್ ಕಚೇರಿ ಮುಂದೆ ಸಾಂಕೇತಿಕ ಹೋರಾಟ ನಡೆಸಿ ಮಾತನಾಡಿದ ಅವರು, ೦೧ ಏಪ್ರಿಲ್ ೨೦೦೬ರ ಮೊದಲು ನೇಮಕಗೊಂಡು ನಂತರ ೨೦೦೬ರ ಏಪ್ರಿಲ್ ೦೧ ರ ನಂತರ ಅನುದಾನಕ್ಕೊಳಪಟ್ಟು ವೇತನ ಪಡೆಯುತ್ತಿರುವ ಶಾಲಾ ಕಾಲೇಜುಗಳ ನೌಕರರಿಗೆ ಪಿಂಚಣಿ ನೀಡದೆ ಸರಕಾರ ಅನ್ಯಾಯ ಮಾಡುತ್ತಿದೆ.ಈಗಾಗಲೇ ನೌಕರಿಯಿಂದ ನಿವೃತ್ತಿ ಹೊಂದಿದ ಹಾಗು ಕೆಲಸದಲ್ಲಿರುವಾಗಲೆ ಮರಣ ಹೊಂದಿದೆ ಎಷ್ಟೊ ಕುಟುಂಬಗಳು ಇಂದು ಬದುಕಲು ಪರದಾಡಬೇಕಾದ ಸ್ಥಿತಿಗೆ ಬಂದಿವೆ.ಇದನ್ನು ಕುರಿತು ಈ ಹಿಂದೆ ಅನೇಕಬಾರಿ ಹೋರಾಟ ಮಾಡಿದರೂ ಪ್ರಯೋಜನೆಯಾಗುತ್ತಿಲ್ಲ ಸರಕಾರ ಈಗಲಾದರೂ ನಮ್ಮ ನ್ಯಾಯಯುತವಾದ ಬೇಡಿಕೆ ಈಡೇರಿಸಬೇಕು.

ನೌಕರರು ಅನುದಾನಕ್ಕೊಳಪಡುವ ಪೂರ್ವದಲ್ಲಿಯೇ ಸೇವೆಗೆ ಸೇರಿದ್ದ ದಿನಾಂಕದಿಂದಲೇ ವಿವಿಧ ಸೌಲಭ್ಯಗಳನ್ನು ನೀಡಬೇಕೆಂದು ಆದೇಶ ಮಾಡಿದೆ.ಆದರೆ ಸರಕಾರ ನೀಡುತ್ತಿಲ್ಲ.ಇತರೆ ರಾಜ್ಯಗಳಲ್ಲಿ ಅನುದಾನಿತ ನೌಕರರ ಪಾಲೀನ ಪಿಂಚಣಿ ವಂತಿಗೆ ಹಣವನ್ನು ಸರಕಾರಗಳೆ ಭರಿಸುತ್ತಿವೆ.ಆದರೆ ನಮ್ಮ ರಾಜ್ಯದಲ್ಲಿ ಮಾತ್ರ ತಾರತಮ್ಯ ಮಾಡಲಾಗುತ್ತಿದೆ. ಇನ್ನು ಏಪ್ರಿಲ್ ೦೧ ೨೦೦೬ಕ್ಕಿಂತ ಮೊದಲು ಅನುದಾನಕ್ಕೊಳಪಟ್ಟು ನೌಕರರು ಪಿಂಚಣಿ ಪಡೆಯುತ್ತಿದ್ದಾರೆ.ಆದರೆ ನಮಗೇಕೆ ತಾರತಮ್ಯ,೧೨.೦೨.೨೦೧೪ರಂದು ಮಾಡಲಾದ ವಿಧೇಯಕದಲ್ಲಿ ಎಲ್ಲಾ ಆರ್ಥಿಕ ಸೌಲಭ್ಯಗಳನ್ನು ನೀಡಲಾಗುವುದೆಂದು ತಿಳಿಸಲಾಗಿದೆ.ಆದರೆ ೨೦೦೬ರ ಏಪ್ರಿಲ್ ೦೧ ನಂತರ ಅನುದಾನಕ್ಕೊಳಪಟ್ಟವರಿಗೆ ಸರಕಾರ ವಂಚನೆ ಮಾಡುತ್ತಿರುದೇಕೆ.

ನೂತನ ಪಿಂಚಣಿ ಕಾಯಿದೆಗೆ ಕೂಡಲೆ ತಿದ್ದುಪಡಿ ತಂದು ನೌಕರರ ಪಾಲಿನ ವಂತಿಗೆ ಪ್ರತಿಯಾಗಿ ನೇಮಕಾತಿ ಪ್ರಾಧಿಕಾರದ ಪಾಲಿನ ವಂತಿಗೆಯನ್ನು ಸರಕಾರಿ ನೌಕರರಿಗೆ ನೀಡುತ್ತಿರುವಂತೆ ಯಥಾವತ್ತಾಗಿ ಸರಕಾರವೇ ನೀಡಬೇಕೆಂದು ಒತ್ತಾಯಿಸುತ್ತೆವೆ.ಈ ನಮ್ಮ ಬೇಡಿಕೆಗೆ ಸರಕಾರ ಸ್ಪಂಧಿಸದಿದ್ದಲ್ಲಿ ಜನೆವರಿ ೧೦ ರಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಅಹೋ ರಾತ್ರಿ ಅನಿರ್ಧಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಸಿದರು.ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ತಹಸೀಲ್ದಾರ ನಿಂಗಣ್ಣ ಬಿರೆದಾರ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ಮಲ್ಲಿಕಾರ್ಜುನ ಕಟ್ಟಿಮನಿ,ಕೋಶಾಧ್ಯಕ್ಷ ಸಾಹೇಬರಡ್ಡಿ ಇಟಗಿ,ದಿಗಂಬರ ಬಾಬರೆ,ಸಾಹೇಬಗೌಡ ಸೇರಿದಂತೆ ಅನೇಕರಿದ್ದರು.

emedialine

Recent Posts

ಶ್ರೀ ಭವಾನಿ 1ನೇ ದಿನದ ಪುರಾಣ, ಕಳಸ ರೋಹಣ

ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…

3 mins ago

ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ್ಲ –ಮುದ್ದಾ

ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…

8 mins ago

ಅಹಿಂಸೆಯ ದಾರಿಯಲ್ಲಿ ನಡೆದಾಗ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ

ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…

13 mins ago

ನಾನು ಆಕಾಂಕ್ಷಿ ಅಧ್ಯಕ್ಷ ಸ್ಥಾನ ಸಿಗುವ ವಿಶ್ವಾಸವಿದೆ; ಕೋರವಿ

ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…

1 hour ago

ಸದ್ಗುಣ ಮೈಗೂಡಿಸಿ ಪ್ರಗತಿಪರ ಬದುಕು ಕಟ್ಟೋಣ : ಬಸವರಾಜ್ ಪಾಟೀಲ್ ಸೇಡಂ

ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…

3 hours ago

ನಾಡಹಬ್ಬ ಆಚರಣೆ ಅಂಗವಾಗಿ ನಾಡ ದೇವತೆ ಸ್ತಬ್ಧ ಚಿತ್ರಗಳ ಮೆರವಣಿಗೆ

ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…

17 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420