ಬಿಸಿ ಬಿಸಿ ಸುದ್ದಿ

ಗರುಡಾದ್ರಿಯಲ್ಲಿ ಸಾಹಿತ್ಯ ಲೋಕದ ತ್ರಿಮೂರ್ತಿಗಳಿಗೆ ನುಡಿ ನಮನ

ಸುರಪುರ: ಇಂದು ಕನ್ನಡ ಸಾಹಿತ್ಯಕ್ಕೆ ದುಡಿದ ಮೂವರು ಮಹನಿಯರುಗಳನ್ನು ಕಳೆದುಕೊಂಡ ಸಾಹಿತ್ಯ ಲೋಕ ಬಡವಾಗಿದೆ ಎಂದು ಮಾಜಿ ಸಚಿವರು ಹಾಗು ಸುರಪುರ ಕನ್ನಡ ಸಾಹಿತ್ಯ ಸಂಘದ ಅಧ್ಯಕ್ಷರಾದ ರಾಜಾಅ ಮದನಗೋಪಾಲ ನಾಯಕ ಮಾತನಾಡಿದರು.

ಇತ್ತೀಚೆಗೆ ನಿಧನರಾಗಿರುವ ಬಂಡಾಯ ಸಾಹಿತಿ ಚೆನ್ನಣ್ಣ ವಾಲಿಕಾರ,ಮಕ್ಕಳ ಸಾಹಿತಿ ಚಂದ್ರಕಾಂತ ಕರದಳ್ಳಿ ಹಾಗು ವಿಮರ್ಶಕ ಎಲ್.ಎಸ್.ಶೇಷಗಿರಿರಾವ್ ಅವರಿಗೆ ನಗರದ ಗರುಡಾದ್ರಿ ಕಲಾ ಮಂದಿರದಲ್ಲಿ ಹಮ್ಮಿಕೊಂಡಿದ್ದ ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ,ಚೆನ್ನಣ್ಣ ವಾಲಿಕಾರರು ಬಂಡಾಯ ಸಾಹಿತಿಗಳಾಗಿ ಸಮಾಜದಲ್ಲಿ ತುಳಿತಕ್ಕೊಳಗಾದವರ ಪರವಾಗಿ ದೊಡ್ಡ ಮಟ್ಟದಲ್ಲಿ ಧ್ವನಿ ಎತ್ತಿದವರು.ಅದರಂತೆ ಚಂದ್ರಕಾಂತ ಕರದಳ್ಳಿಯವರು ಕನ್ನಡ ಸಾಹಿತ್ಯದಲ್ಲಿ ಬಹುದೊಡ್ಡ ಹೆಸರು ಮಾಡಿದವರು.ಅವರು ಮಕ್ಕಳ ಸಾಹಿತ್ಯದಲ್ಲಿ ಸುಮಾರು ಇಪ್ಪತ್ತೈದಕ್ಕು ಹೆಚ್ಚು ಕೃತಿಗಳನ್ನು ರಚಿಸಿದವರು.ಇತ್ತೀಚೆಗೆ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹಾಗು ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದರಿಂದ ಕಳೆದ ತಿಂಗಳು ಅವರಿಗೆ ಇದೇ ಗರುಡಾದ್ರಿ ಕಲಾ ಮಂದಿರದಲ್ಲಿ ಸನ್ಮಾನವನ್ನುಕೂಡ ಮಾಡಲಾಗಿತ್ತು.ಅಂದು ನಮ್ಮೊಂದಿಗೆ ಭಾಗವಹಿಸಿ ಲವಲವಿಕೆಯಿಂದ ಮಾತನಾಡಿದ್ದರು.

ಅಂತವರು ಇಂದು ನಮ್ಮೊಂದಿಗಿಲ್ಲ ಎನ್ನುವುದೆ ನೋವಿನ ಸಂಗತಿಯಾಗಿದೆ.ಇನ್ನು ಎಲ್.ಎಸ್.ಶೇಷಗಿರಿರಾವ್ ಅವರು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಮರ್ಶಕರಾಗಿ,ಇಂಗ್ಲೀಷ ಮತ್ತು ಕನ್ನಡ ಭಾಷೆಯಲ್ಲಿ ಸಾಹಿತ್ಯವನ್ನು ರಚಿಸಿ ನಾಡಿಗೆ ಚಿರಪರಿಚಿತರಾಗಿದ್ದವರು.ಇಂತಹ ಮಹನಿಯರುಗಳು ಇಂದು ನಮ್ಮನ್ನ ಅಗಲಿದ್ದು ದುಖಃದ ಸಂಗತಿ.ಈ ಮೂವರು ಸಾಹಿತ್ಯ ದಿಗ್ಗಜರ ಆತ್ಮಕ್ಕೆ ಶಾಂತಿ ಸಿಗಲಿ ಹಾಗು ಇವರು ಕುಟುಂಬಗಳಿಗೆ ಇವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಆ ಭಗವಂತ ನೀಡಲೆಂದು ಪ್ರಾರ್ಥಿಸುವುದಾಗಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಮೂವರು ಸಾಹಿತಿಗಳ ಆತ್ಮಕ್ಕೆ ಶಾಂತಿ ಸಿಗಲೆಂದು ಎರಡು ನಿಮಿಷಗಳ ಮೌನಾಚರಣೆ ಮಾಡಲಾಯಿತು.ನಂತರ ಸಾಹಿತಿಗಳಾದ ಕನಕಪ್ಪ ವಾಗಣಗೇರಾ,ಬೀರಣ್ಣ ಆಲ್ದಾಳ, ಡಾ. ಯಲ್ಲಪ್ಪ ನಾಯಕ,ಸಿದ್ದಯ್ಯಸ್ವಾಮಿ ಸ್ಥಾವರಮಠ,ಇಕ್ಬಾಲ್ ರಾಹಿ ತಿಮ್ಮಾಪುರ,ನಬಿಲಾಲ ಮಕಾಂದಾರ,ಕಸಾಪ ಮಾಜಿ ಅಧ್ಯಕ್ಷ ಶಾಂತಪ್ಪ ಬೂದಿಹಾಳ,ಕಸಾಪ ಅಧ್ಯಕ್ಷ ಶ್ರೀನಿವಾಸ ಜಾಲವಾದಿ,ಎಪಿಎಫ್ ನ ಅನ್ವರ ಜಮಾದಾರ,ವಕೀಲ ಮಲ್ಲಿಕಾರ್ಜುನ ಹಿರೇಮಠ,ಪಂಡೀತ ನಿಂಬೂರೆ,ಬಸವರಾಜ ಜಮದ್ರಖಾನಿ ಇತರರು ಮಾತನಾಡಿದರು.ಕಸಾಪ ಗೌರವ ಕಾರ್ಯದರ್ಶಿ ದೇವು ಹೆಬ್ಬಾಳ ಕಾರ್ಯಕ್ರಮ ನಿರೂಪಿಸಿದರು ರಾಜಶೇಖರ ದೇಸಾಯಿ ವಂದಿಸಿದರು.

ಕಾರ್ಯಕ್ರಮದಲ್ಲಿ ಬಸವರಾಜಪ್ಪ ನಿಷ್ಠೀ ದೇಶಮುಖ,ದೊಡ್ಡಮಲ್ಲಿಕಾರ್ಜುನ ಹುದ್ದಾರ,ಜಯಲಲಿತ ಪಾಟೀಲ,ಸಾಹೇಬರಡ್ಡಿ ಇಟಗಿ,ಶಸರಣಬಸಪ್ಪ ಯಳವಾರ,ಅಯ್ಯನಗೌಡ ಪಾಟೀಲ,ಎಂ.ಡಿ.ಸರ್ವರ್,ಪ್ರಕಾಶ ಅಲಬನೂರ,ಕೆ.ವೀರಪ್ಪ,ಮದ್ದಪ್ಪ ಅಪ್ಪಾಗೋಳ,ರಾಘವೇಂದ್ರ ಭಕ್ರಿ,ಮೋನಯ್ಯ ಗೋನಾಲ,ಯಲ್ಲಪ್ಪ ಹುಲಕಲ್,ರಾಘವೇಂಧ್ರರಾವ್ ಕುಲಕರ್ಣಿ,ಬಿ.ಎಲ್.ಲಕ್ಷ್ಮಣ,ಮಲ್ಲಿಕಾರ್ಜುನ ಜೇಟಗಿಮಠ,ಮೂರ್ತಿ ಬೊಮ್ಮನಹಳ್ಳಿ,ವಿಜಯಕುಮಾರ ಬಣಗಾರ,ಬಸವರಾಜ ಗೋಗಿ,ರಾಜಶೇಖರ ದೇಸಾಯಿ ಇತರರಿದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

4 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

4 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

4 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

4 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

5 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

6 hours ago