ವನವಾಸಿ ಕಲ್ಯಾಣ ನಗರ ಸಮಿತಿ ಸದಸ್ಯರಿಗೆ ಅಭ್ಯಾಸ ವರ್ಗ

ಸುರಪುರ: ವನವಾಸಿ ಕಲ್ಯಾಣ ಸಮಿತಿಯಿಂದ ಜನರಲ್ಲಿ ದೇಶಭಕ್ತಿ ಮತ್ತು ಉತ್ತಮ ಸಂಸ್ಕಾರ ಮೂಡಿಸಲಾಗುತ್ತಿದೆ ಮತ್ತು ಮಾನವೀಯ ಮೌಲ್ಯಗಳನ್ನು ರೂಢಿಸುತ್ತದೆ ಎಂದು ವನವಾಅಸಿ ಕಲ್ಯಾಣ ಸಮಿತಿಯ ಜಿಲ್ಲಾಧ್ಯಕ್ಷ ಗಂಗಾಧರ ನಾಯಕ ತಿಂಥಣಿ ತಿಳಿಸಿದರು.

ನಗರದ ದರಬಾರ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಸಮಿತಿಯ ಕಲಬುರ್ಗಿ ವಿಭಾಗ ಮಟ್ಟದ ನಗರ ಸಮಿತಿ ಸದಸ್ಯರಿಗೆ ಹಮ್ಮಿಕೊಂಡಿದ್ದ ಅಭ್ಯಾಸ ವರ್ಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ,ಯಾದಗಿರಿ ಜಿಲ್ಲೆಯಾದ್ಯಂತ ವನವಾಸಿ ಕಲ್ಯಾಣದ ವತಿಯಿಂದ ಉಚಿತ ಮನೆ ಪಾಠ ಕೇಂದ್ರಗಳು,ಹೊಲಿಗೆ ತರಬೇತಿ ಕೇಂದ್ರಗಳು,ಮಹಿಳಾ ಸಂಘಗಳನ್ನು ಪರಿಶಿಷ್ಟ ಪಂಗಡದ ಜನರ ಜೀವನ ಮಟ್ಟ ಸುಧಾರಣೆಗೆ ಶ್ರಮಿಸಲಾಗುತ್ತಿದೆ.ಇದರ ಜೊತೆಗೆ ಜಾಗೃತಿ ಕಾರ್ಯಕ್ರಮಗಳಾದ ಸರ್ಕಾರಿ ಸೌಲಭ್ಯಗಳನ್ನು ಕೊಡಿಸುವುದು,ರಕ್ಷಾ ಬಂಧನ,ವೃಕ್ಷರೋಪಣಾ,ಭಾರತ ಮಾತೆಯ ಪೂಜೆ ಕಾರ್ಯಕ್ರಮ ಜೊತೆಗೆ ವೈದ್ಯಕೀಯ ಪರೀಕ್ಷೆಗಳಂತ ಜನೊಪೊಯೋಗಿ ಕಾರ್ಯಕ್ರಮಗಳ ಮೂಲಕ ಸಮಾಜವನ್ನು ಅಭಿವೃಧ್ಧಿಯತ್ತ ಕೊಂಡೊಯ್ಯಲಾಗುತ್ತಿದೆ ಎಂದರು.

ರಾಜ್ಯ ನಗರ ಸಮಿತಿಯ ಪ್ರಮುಖರಾದ ಮಾತೆ ವೇದಾವತಿಯವರು ಮಾತನಾಡಿ,ವನವಾಸಿ ಕಲ್ಯಾಣವು ದೇಶಪರ ಚಿಂತನೆಯುಳ್ಳ ಸಂಸ್ಥೆಯಾಗಿದ್ದು,ಇದರ ಮೂಲಕ ಆದಿವಾಸಿಗಳಿಗೆ ಮತ್ತು ಪರಿಶಿಷ್ಟ ಪಂಗಡದ ಜನತೆಯನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಪ್ರಮುಖವಾದ ಸಂಸ್ಥೆಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ನಗರ ಸಮಿತಿ ಅಧ್ಯಕ್ಷರಾದ ಛಾಯಾ ಕುಂಟೋಜಿ,ಸದಸ್ಯರಾದ ಅನಿತಾ ಅಂಬುರೆ,ದರಬಾರ ಶಾಲೆ ಪ್ರಧಾನಗುರು ಸೋಮರಡ್ಡಿ ಮಂಗಿಹಾಳ,ವೆಂಕಟೇಶ ಸಾವಂತಗಿರಿ,ನಗರ ಪ್ರಮುಖ ಗುರುನಾಥರಡ್ಡಿ ಶೀಲವಂತ,ದೇವರಾಜ ನಾಯಕ ಗಿರಣಿ,ಮಹಾಂತಪ್ಪ ಉಪಸ್ಥಿತರಿದ್ದರು ಹಾಗು ವಿವಿಧ ಜಿಲ್ಲೆಗಳ ಸುಮಾರು ಇಪ್ಪತ್ತೆರಡು ಜನರು ಅಭ್ಯಾಸ ವರ್ಗದಲ್ಲಿ ಭಾಗವಹಿಸಿದ್ದರು.ಶಿವಲೀಲಾ ಸಾವಂತಗಿರಿ ಪ್ರಾರ್ಥಿಸಿದರು,ಶರಣು ನಾಯಕ ಸ್ವಾಗತಿಸಿದರು,ಅನಿತಾ ಅಂಬುರೆ ವಂದಿಸಿದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

4 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

6 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

6 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

6 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

6 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

6 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420