ಬಿಸಿ ಬಿಸಿ ಸುದ್ದಿ

ಅಜಾತ ಶತ್ರು ಎನ್. ಧರ್ಮಸಿಂಗ್: ಎನ್.ಎಸ್. ಭೋಸ್ ರಾಜ್

ಕಲಬುರಗಿ: ಮಾಜಿ ಮುಖ್ಯಮಂತ್ರಿ ಎನ್.‌ಧರ್ಮ ಸಿಂಗ್ ಅವರು ಈ ಭಾಗದ ಏಳಿಗೆಗೆ ಸಾಕಷ್ಟು ಶ್ರಮಿಸಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಎನ್. ಬೋಸ್ ರಾಜ್ ಅಭಿಪ್ರಾಯಪಟ್ಟರು.

ಇಲ್ಲಿನ ವಿಶ್ವಜ್ಯೋತಿ ಪ್ರತಿಷ್ಠಾನದ ವತಿಯಿಂದ ಮಂಗಳವಾರ ಬೆಳಗ್ಗೆ ನಗರದ ದಿ ಐಡಿಯಲ್ ಫೈನ್ ಆರ್ಟ್ ಕಾಲೇಜು ಸಭಾಂಗಣದಲ್ಲಿ ಜರುಗಿದ ಎನ್. ಧರ್ಮಸಿಂಗ್ ಅವರ 83ನೇ ಜನುಮ ದಿನದ ಅಂಗವಾಗಿ ಆಯೋಜಿಸಿದ್ದ ಧರ್ಮಪ್ರಜೆ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು, ಕಲಬುರಗಿಯಲ್ಲಿ ಸ್ಥಾಪಿಸಲಾಗಿರುವ ಹೈಕೋರ್ಟ್, ಸಂವಿಧಾನದ ಆರ್ಟಿಕಲ್ 371 ತಿದ್ದುಪಡಿ, ಹಲವು ನೀರಾವರಿ ಯೋಜನೆ, ರಾಷ್ಟ್ರೀಯ ಹೆದ್ದಾರಿ ಮುಂತಾದ ಕಾರ್ಯಗಳಲ್ಲದೆ ಹಲವು ಜನರಿಗೆ ಮಾಡಿದ ಉಪಕಾರ ಇಂದಿಗೂ ಸ್ಮರಣೀಯ ಎಂದು ಹೇಳಿದರು.

ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಅವರು ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಕಾಂಗ್ರೆಸ್ ಮುಖಂಡ ಸಿ.ಬಿ. ಪಾಟೀಲ ಓಕಳಿ ಮಾತನಾಡಿ, ಖರ್ಗೆ ಮತ್ತು ಧರ್ಮಸಿಂಗ್ ಅವರು ಈ ಭಾಗಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ, ಸವಿತಾ ಸಜ್ಜನ್, ಹಣಮಂತ ಭೂಸನೂರ, ಬಿ.ಎಂ. ಪಾಟೀಲ ಕಲ್ಲೂರ ಇತರರು ಇದ್ದರು. ಡಾ. ಕೆ. ಗಿರಿಮಲ್ಲ ವಂದಿಸಿದರು.
ಕಾಂಗ್ರೆಸ್ ಪಕ್ಷಕ್ಕಾಗಿ ಸಾಕಷ್ಟು ಜನ ತ್ಯಾಗ, ಬಲಿದಾನ ಮಾಡಿದ್ದಾರೆ.‌ ಆದರೆ ಇತ್ತೀಚಿಗೆ ಪಕ್ಷದಲ್ಲಿ ಸಂಘಟನೆಯ ಕೊರತೆ ಎದ್ದು ಕಾಣುತ್ತದೆ. ದೇಶದಲ್ಲಿ ಏಕತೆ, ರಾಷ್ಟ್ರೀಯತೆ ಹೆಸರಿನಲ್ಲಿ ಭಾವೈಕ್ಯತೆಗೆ ಧಕ್ಕೆ ತರುವ ಕೆಲಸ ಆಡಳಿತ ಪಕ್ಷದಿಂದ ನಡಡಯುತ್ತಿದೆ. ಇದಕ್ಕೆ ಕಾಂಗ್ರೆಸ್ ಪಕ್ಷದಿಂದ ತೀವ್ರ ಪ್ರತಿರೋಧ ವ್ಯಕ್ತವಾಗುತ್ತಿಲ್ಲ.                          -ಸಿ.ಬಿ. ಪಾಟೀಲ ಓಕಳಿ

ಪ್ರಶಸ್ತಿ ಪುರಸ್ಕೃತರು: ಧರ್ಮರಾಜ ಗುಜಗುಂಡ, ಶೈಲಜಾ ಪಾಟೀಲ, ಚಂದ್ರಶೇಖರ ಪುರಾಣಿಕ, ಖಾಸಿಂ ಪಟೇಲ್, ಶರಣಪ್ಪಗೌಡ ಪಾಟೀಲ ಇವರಿಗೆ ಧರ್ಮ ಪ್ರಜೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಹಿರಿಯ ಕಲಾವಿದ ವಿ.ಜಿ. ಅಂದಾನಿ ಅಧ್ಯಕ್ಷತೆ ವಹಿಸಿದ್ದರು. ಕಾಂಗ್ರೆಸ್ ಪಕ್ಷದ ಮುಖಂಡರಾದ ಚಂದ್ರಿಕಾ ಪರಮೇಶ್ವರ ವೇದಿಕೆಯಲ್ಲಿದ್ದರು. ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪರಮೇಶ್ವರ ಶೆಟಕಾರ ಅವರು ಶಾಹಿರಿ ಹೇಳಿ ಧರ್ಮಸಿಂಗ್ ಅವರನ್ನು ನೆನಪಿಸಿಕೊಂಡರು. ಭುವನೇಶ್ವರಿ ಗಂಗಶೆಟ್ಟಿ ನಿರೂಪಿಸಿದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

6 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

6 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

8 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

8 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

8 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

9 hours ago