ಶಹಾಪುರ: ಡಿಸೆಂಬರ್ ೨೯ ರಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಶಹಾಪುರ ತಾಲ್ಲೂಕು ಆಡಳಿತ ವತಿಯಿಂದ ಜರುಗುವ ವಿಶ್ವ ಮಾನವ ದಿನಾಚರಣೆಯಲ್ಲಿ ತಾಲ್ಲೂಕಿನ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ತಾಲ್ಲೂಕು ದಂಡಾಧಿಕಾರಿಗಳಾದ ಜಗನ್ನಾಥ್ ರೆಡ್ಡಿ ಅವರು ಹೇಳಿದರು.
ಶಹಾಪುರ ತಾಲೂಕು ತಹಸೀಲ್ದಾರ ಕಾರ್ಯಾಲಯದಲ್ಲಿ ಕರೆದಿರುವ ವಿಶ್ವ ಮಾನವ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ವಿಶ್ವ ಮಾನವ ದಿನಾಚರಣೆಯ ದಿನದಂದು ಕುವೆಂಪು ಅವರ ಜನ್ಮ ದಿನಾಚರಣೆಯನ್ನಾಗಿ ಆಚರಿಸಿ ಅವರ ಸಂದೇಶವನ್ನು ಎಲ್ಲರಿಗೂ ತಿಳಿಪಡಿಸುವ ನಿಟ್ಟಿನಲ್ಲಿ ಕೇವಲ ಕಾಟಾಚಾರಕ್ಕಾಗಿ ಆಚರಣೆ ಮಾಡಿದರೆ ಸಲ್ಲದು ಬಹಳ ಅರ್ಥಪೂರ್ಣವಾಗಿ ಆಚರಣೆ ಮಾಡುವುದರ ಜೊತೆಗೆ ತಾಲ್ಲೂಕಿನ ಎಲ್ಲ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕೆಂದು ಈ ಮೂಲಕ ಎಚ್ಚರಿಕೆ ನೀಡಿದರು.
ಈ ಪೂರ್ವಭಾವಿ ಸಭೆಯಲ್ಲಿ ಎಲ್ಲ ತಾಲ್ಲೂಕು ಅಧಿಕಾರಿಗಳು ಹಾಗೂ ಸಾಹಿತಿ ಬಸವರಾಜ ಸಿನ್ನೂರು ಶಿವಕುಮಾರ ತಳವಾರ ಹಾಗೂ ಇತರರು ಭಾಗವಹಿಸಿದ್ದರು.