ಆಳಂದ: ಜಗತ್ತಿನ ಪ್ರತಿ ಶಾಲೆಯ ತರಗತಿಯ ಕೋಣೆಗಳು ಜೀವಂತ ದೇವಾಲಯಗಳಿದ್ದಂತೆ ಅವುಗಳನ್ನು ಅತ್ಯಂತ ಜವಾಬ್ದಾರಿಯಿಂದ, ಗೌರವದಿಂದ ಕಾಪಾಡುಕೊಳ್ಳುವುದು ಸಮಾಜದಲ್ಲಿರುವವರ ಕರ್ತವ್ಯವಾಗಿದೆ ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಅಭಿಪ್ರಾಯಪಟ್ಟರು.
ಇತ್ತೀಚಿಗೆ ಆಳಂದ ತಾಲೂಕಿನ ಹಡಲಗಿ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ೨೦೧೯-೨೦ ಸಾಲಿನ ಸಾಮಾಜಿಕ ವಲಯದ ಸಾಮಾನ್ಯ ಅನುದಾನದಲ್ಲಿ ೨೦ ಲಕ್ಷ ರೂ ವೆಚ್ಚದ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ೨ ಕೋಣೆಗಳ ನಿರ್ಮಾಣ ಕಾಮಗಾರಿಗೆ ಶಂಕು ಸ್ಥಾಪನೆ ನೇರವೇರಿಸಿ ಮಾತನಾಡಿದರು.
ದೇಶದ ಭವಿಷ್ಯವು ತರಗತಿಯ ಕೋಣೆಗಳಲ್ಲಿ ಅಡಕವಾಗಿದೆ ಅದಕ್ಕಾಗಿ ಶಿಕ್ಷಕರು ತಮ್ಮ ಸಾಮರ್ಥ್ಯವನ್ನು ಧಾರೆಯೆರೆದು ಮಕ್ಕಳಲ್ಲಿನ ಜ್ಷಾನವನ್ನು ಜಗತ್ತಿಗೆ ಪರಿಚಯಿಸಬೇಕು ಈ ನಿಟ್ಟಿನಲ್ಲಿ ಸರ್ಕಾರವು ಶಾಲೆಗಳ ಮೂಲ ಸೌಕರ್ಯಕ್ಕಾಗಿ ಹೆಚ್ಚಿನ ಅನುದಾನ ಒದಗಿಸುತ್ತಿದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರಪ್ಪ ನೇಡರಗಿ ಪ್ರಾಸ್ತಾವಿಕ ಮಾತನಾಡಿ, ಶಾಸಕರ ಪರಿಶ್ರಮದಿಂದ ತಾಲೂಕಿನಲ್ಲಿ ಹೆಚ್ಚು ಶಾಲಾ ಕೋಣೆಗಳು ಮಂಜೂರಾಗಿವೆ. ಶಿಕ್ಷಕರ ಕೊರತೆ ನಿಗಿಸುವಲ್ಲಿಯೂ ಅವರು ಶ್ರಮಿಸುತ್ತಿದ್ದಾರೆ ಅದಕ್ಕಾಗಿ ಸರ್ಕಾರದ ಮೇಲೆ ಒತ್ತಡ ತಂದು ೨೦೦ ಜನ ಅತಿಥಿ ಶಿಕ್ಷಕರು ನೇಮಕವಾಗುವಂತೆ ಮಾಡಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಲೆಗೆ ಜಮೀನು ನೀಡಿದ ಭೂದಾನಿ ಸಿದ್ದಾರಾಮ ಭೈರಾಮಡಗಿ, ತಾ.ಪಂ ಸದಸ್ಯ ಸಾತಲಿಂಗಯ್ಯ ಮಠಪತಿ, ಸತೀಶ್ ಕುಲಕರ್ಣಿ, ಶ್ರಾವಣಕುಮಾರ ತಮ್ಮನ, ಚಂದ್ರಕಾಂತ ಅತನೂರ, ಶಿವಾನಂದ ಜೋಗನ, ಯಲ್ಲಾಲಿಂಗ ಕಲಾಲ, ಚಂದ್ರಕಾಂತ ಸಾಣಕ, ಮಲ್ಲಿನಾಥ ಹಳ್ಳೆ ಅಧ್ಯಕ್ಷತೆ ವಹಿಸಿದ್ದರೆ, ಸಾನಿಧ್ಯವನ್ನು ಶಾಂತೇಶ್ವರ ಮಠದ ಶಾಂತಬಸವ ಶಿವಾಚಾರ್ಯರು ವಹಿಸಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…