ರುಕ್ಮಾಪುರ ಗ್ರಾಮಕ್ಕೆ ಆರೋಗ್ಯ ಸಚಿವ ಶ್ರೀರಾಮುಲು ಭೇಟಿ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮಕ್ಕೆ ಕರ್ನಾಟಕ ಸರಕಾರದ ಆರೋಗ್ಯ ಸಚಿವ ಶ್ರೀರಾಮುಲು ಭೇಟಿ ನೀಡಿದರು.ಶಹಾಪುರದಲ್ಲಿಯ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಅವರು ರುಕ್ಮಾಪುರದಲ್ಲಿರುವ ನಿವೃತ್ತ ಎಸ್.ಪಿ ಚಂದ್ರಕಾಂತ ಭಂಡಾರೆಯವರ ಫಾರ್ಮ ಹೌಸಿಗೆ ಬಂದು ಕೆಲ ಕಾಲ ಕಳೆದರು ಹಾಗು ಆಹಾರ ಸೇವಿಸಿ ನಂತೆ ಭಂಡಾರೆಯವರು ತೋಟದಲ್ಲಿನ ಹಣ್ಣುಗಳು ಸವಿದು ಸಂತೋಷಪಟ್ಟರು.

ಈ ಸಂದರ್ಭದಲ್ಲಿ ಇತ್ತೀಚೆಗೆ ತನ್ನ ಅಂಗಾಂಗಗಳ ದಾನ ಮಾಡಿ ಹಲವರ ಜೀವಕ್ಕೆ ವರವಾಗಿದ್ದ ಗ್ರಾಮದ ಡಬಗಾ ಕುಟುಂಬದ ಯುವಕ ಕಾರ್ತಿಕ ಕೀರಪ್ಪಾ ಬಡಗಾ ಕುಟುಂಬದವರಿಗೆ ಭೇಟಿ ಮಾಡಿ ಕಾರ್ತಿಕನ ಸಾವು ವ್ಯರ್ಥಗೊಳಿಸದೆ ಮಾನವೀಯವಾಗಿ ಯೋಚಿಸಿದ ಕುಟುಂಬ ವರ್ಗದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.ಇದೇ ಸಂದರ್ಭದಲ್ಲಿ ನಿವೃತ್ತ ಎಸ್.ಪಿ ಚಂದ್ರಕಾಂತ ಭಂಡಾರೆಯವರು ಆರೋಗ್ಯ ಸಚಿವರಿಗೆ ದೂರವಾಣಿ ಮೂಲಕ ಬಡಗಾ ಕುಟುಂಬಕ್ಕ ನೆರವು ನೀಡುವಂತೆ ಮನವಿ ಮಾಡಿದಾಗ.ತಮ್ಮ ಆರೋಗ್ಯ ಇಲಾಖೆಯಿಂದ ಹಾಗು ಮುಖ್ಯಮಂತ್ರಿಗಳಿಂದ ಆರ್ಥಿಕ ನೆರವು ಕೊಡಿಸುವುದಾಗಿ ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ಪೌರತ್ವ ಕಾಯಿದೆಯ ಕುರಿತು ವರದಿಗಾರರು ಕೇಳಿದ ಪ್ರಶ್ನೆಗೆ ವಿವರಿಸುತ್ತಾ ಮಾತನಾಡಿ,ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರು ಎಲ್ಲಾ ವಿಚಾರಿಸಿಯೇ ಈ ಕಾಯಿದೆಯನ್ನು ರೂಪಿಸಿದ್ದಾರೆ.ಪೌರತ್ವ ಕಾಯಿದೆಯಿಂದ ದೇಶದಲ್ಲಿನ ಯಾವುದೆ ಧರ್ಮದವರಿಗೂ ತೊಂದರೆಯಾಗುವುದಿಲ್ಲ ಇದರ ಬಗ್ಗೆ ಅನುಮಾನ ವ್ಯಕ್ತಪಡಿಸುವ ಅವಶ್ಯಕತೆಯಿಲ್ಲ ಎಂದರು.

ಸಂಕ್ರಾತಿ ಒಳಗಡೆಯೆ ಸರಕಾರದ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ.ನನಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿದರೆ ನಿಭಾಯಿಸುವುದಾಗಿ ತಿಳಿಸಿದರು.ಅಲ್ಲದೆ ಎಸ್ಟಿ ಸಮಾಜದ ಏಳಿಗೆಗಾಗಿ ಮೀಸಲಾತಿ ಹೆಚ್ಚಳ ಮಾಡುವ ಅವಶ್ಯಕತೆಯಿದೆ.ಇದರ ಕುರಿತು ಸರಕಾರದಿಂದಲೂ ಉತ್ತಮವಾದ ಪ್ರತಿಕ್ರೀಯೆ ವ್ಯಕ್ತವಾಗಿದೆ.ಮುಂದೆ ಮೀಸಲಾತಿ ಹೆಚ್ಚಳವಾಗುವ ಆಶಾಭಾವನೆ ಹೊಂದಿರುವುದಾಗಿ ತಿಳಿಸಿದರು.ಈ ಸಂದರ್ಭದಲ್ಲಿ ಕೆಪಿಸಿಸಿ ನೂತನ ಸದಸ್ಯರಾದ ಡಾ: ರಂಗರಾಜ ವನದುರ್ಗ ಹಾಗು ಅನೇಕ ಜನ ಅಧಿಕಾರಿಗಳು ಮುಖಂಡರು ಮತ್ತು ಗ್ರಾಮಸ್ಥರಿದ್ದರು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

3 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

3 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

3 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

3 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

3 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420