ಕಂಕಣ ಸೂರ್ಯ ಗ್ರಹಣ ಬಗ್ಗೆ ಜನರಲ್ಲಿದ್ದ ಭಯವನ್ನು ನಿವಾರಿಸುವ ನಿಟ್ಟಿನಲ್ಲಿ ವೈಚಾರಿಕ ಜಾಗೃತಿ ಕಾರ್ಯಕ್ರಮ

ಕಲಬುರಗಿ: ಕಂಕಣ ಸೂರ್ಯ ಗ್ರಹಣ ಬಗ್ಗೆ ಜನರಲ್ಲಿದ್ದ ಭಯವನ್ನು ನಿವಾರಿಸುವ ನಿಟ್ಟಿನಲ್ಲಿ ಇಲ್ಲಿನ ಸಹೃದಯಿ ಸ್ನೇಹ ಬಳಗದ ವತಿಯಿಂದ ಗುರುವಾರದಂದು ನಗರದ ಪ್ರಮುಖ ಬಡಾವಣೆಗಳಿಗೆ ತೆರಳಿ ವೈಚಾರಿಕ ಜಾಗೃತಿ ಮೂಡಿಸುವ ಕಾರ್ಯಕ್ರಮವೊಂದನ್ನು ನಡೆಸಿತು.

ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸುರೇಶ ಬಡಿಗೇರ, ನ್ಯಾಯವಾದಿ ಹಣಮಂತರಾಯ ಅಟ್ಟೂರ ಮಾತನಾಡಿ, ಗ್ರಹಣ ಎಂಬುದು ಒಂದು ಸಹಜ ಕ್ರಿಯೆಯಾಗಿದೆ. ನಮ್ಮ ಮನದಲ್ಲಿ ಅಡಗಿರುವ ಮೂಢತೆಯಿಂದ ಹೊರಬರಬೇಕಾಗಿದೆ. ಆ ಮೂಲಕ ಸಮಾನತೆ ಮತ್ತು ಮೌಢ್ಯಮುಕ್ತ ಸಮಾಜ ನಿರ್ಮಾಣ ಮಾಡಬೇಕು ಎಂದ ಅವರು, ಈ ನಿಟ್ಟಿನಲ್ಲಿ ಸೂರ್ಯ ಗ್ರಹಣವಿರಲಿ, ಚಂದ್ರ ಗ್ರಹಣವಿರಲಿ ಜನರ ಮೇಲೆ ಇವುಗಳಿಂದ ಯಾವುದೇ ತರಹದ ಪರಿಣಾಮ ಬೀರುವುದಿಲ್ಲ. ಹಾಗಾಗಿ, ನಮ್ಮೆಲ್ಲರ ಮನಸ್ಸಿಗೆ ಹಿಡಿದ ಗೃಹಣವನ್ನು ಮೊದಲು ಕಿತ್ತೊಗೆಯಬೇಕು ಎಂದು ಮಾರ್ಮಿಕವಾಗಿ ಹೇಳಿದರು.

ಪ್ರಮುಖರಾದ ಅಣಿವೀರಯ್ಯ ಪ್ಯಾಟಿಮನಿ, ಮಲ್ಕಾರಿ ಪೂಜಾರಿ, ಸಂದೇಶ ಕುನ್ನೂರ, ಮಹಾಂತೇಶ ಮಠ, ಡಾ.ಸತೀಶ ದೊಡ್ಡಮನಿ, ಲಕ್ಷ್ಮಣ ಕುಂಬಾರ, ರಾಜಶೇಖರ ಕುರಿ, ಶರಣಕುಮಾರ ಡಿಗ್ಗಿ ಸೇರಿದಂತೆ ಬಡಾವಣೆಗಳ ಪ್ರಮುಖರೂ ಸಹ ಈ ಸಮಾಜಿಕ ಜಾಗೃತಿ ಕಾರ್ಯಕ್ರಮಕ್ಕೆ ಸಾಥ್ ನೀಡಿದರು.

emedialine

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

51 mins ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

1 hour ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

1 hour ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

1 hour ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

1 hour ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

1 hour ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420