ಕಲಬುರಗಿ: ಕಂಕಣ ಸೂರ್ಯ ಗ್ರಹಣ ಬಗ್ಗೆ ಜನರಲ್ಲಿದ್ದ ಭಯವನ್ನು ನಿವಾರಿಸುವ ನಿಟ್ಟಿನಲ್ಲಿ ಇಲ್ಲಿನ ಸಹೃದಯಿ ಸ್ನೇಹ ಬಳಗದ ವತಿಯಿಂದ ಗುರುವಾರದಂದು ನಗರದ ಪ್ರಮುಖ ಬಡಾವಣೆಗಳಿಗೆ ತೆರಳಿ ವೈಚಾರಿಕ ಜಾಗೃತಿ ಮೂಡಿಸುವ ಕಾರ್ಯಕ್ರಮವೊಂದನ್ನು ನಡೆಸಿತು.
ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸುರೇಶ ಬಡಿಗೇರ, ನ್ಯಾಯವಾದಿ ಹಣಮಂತರಾಯ ಅಟ್ಟೂರ ಮಾತನಾಡಿ, ಗ್ರಹಣ ಎಂಬುದು ಒಂದು ಸಹಜ ಕ್ರಿಯೆಯಾಗಿದೆ. ನಮ್ಮ ಮನದಲ್ಲಿ ಅಡಗಿರುವ ಮೂಢತೆಯಿಂದ ಹೊರಬರಬೇಕಾಗಿದೆ. ಆ ಮೂಲಕ ಸಮಾನತೆ ಮತ್ತು ಮೌಢ್ಯಮುಕ್ತ ಸಮಾಜ ನಿರ್ಮಾಣ ಮಾಡಬೇಕು ಎಂದ ಅವರು, ಈ ನಿಟ್ಟಿನಲ್ಲಿ ಸೂರ್ಯ ಗ್ರಹಣವಿರಲಿ, ಚಂದ್ರ ಗ್ರಹಣವಿರಲಿ ಜನರ ಮೇಲೆ ಇವುಗಳಿಂದ ಯಾವುದೇ ತರಹದ ಪರಿಣಾಮ ಬೀರುವುದಿಲ್ಲ. ಹಾಗಾಗಿ, ನಮ್ಮೆಲ್ಲರ ಮನಸ್ಸಿಗೆ ಹಿಡಿದ ಗೃಹಣವನ್ನು ಮೊದಲು ಕಿತ್ತೊಗೆಯಬೇಕು ಎಂದು ಮಾರ್ಮಿಕವಾಗಿ ಹೇಳಿದರು.
ಪ್ರಮುಖರಾದ ಅಣಿವೀರಯ್ಯ ಪ್ಯಾಟಿಮನಿ, ಮಲ್ಕಾರಿ ಪೂಜಾರಿ, ಸಂದೇಶ ಕುನ್ನೂರ, ಮಹಾಂತೇಶ ಮಠ, ಡಾ.ಸತೀಶ ದೊಡ್ಡಮನಿ, ಲಕ್ಷ್ಮಣ ಕುಂಬಾರ, ರಾಜಶೇಖರ ಕುರಿ, ಶರಣಕುಮಾರ ಡಿಗ್ಗಿ ಸೇರಿದಂತೆ ಬಡಾವಣೆಗಳ ಪ್ರಮುಖರೂ ಸಹ ಈ ಸಮಾಜಿಕ ಜಾಗೃತಿ ಕಾರ್ಯಕ್ರಮಕ್ಕೆ ಸಾಥ್ ನೀಡಿದರು.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…