ಬಿಸಿ ಬಿಸಿ ಸುದ್ದಿ

ಎಸ್.ಎಸ್.ಕೆ ವಿಶ್ವಕರ್ಮ ಸಂಘದ ಕ್ಯಾಲೆಂಡರ್ ಬಿಡುಗಡೆ

ಮಂಡ್ಯ,ನಾಗಮಂಗಲ: ತಾಲೂಕಿನ ಎಸ್ ಎಸ್ ಕೆ ವಿಶ್ವಕರ್ಮ ಸಮಾಜ ಸೇವಾ ಸಂಘದ ವತಿಯಿಂದ ನೂತನ ವರ್ಷದ 2020ರ ಕ್ಯಾಲೆಂಡರನ್ನು ನಾಗಮಂಗಲ ಪೊಲೀಸ್ ವಿಭಾಗದ ಡಿವೈಎಸ್ಪಿ ವಿಶ್ವನಾಥ್ ಬಿಡುಗಡೆಗೊಳ್ಳಿಸಿದರು.

ನಂತರ ಮಾತನಾಡಿದ ರವರು ಇಂದಿನ ದಿನದಲ್ಲಿ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು ಮಕ್ಕಳಿಗೆ ಶಿಕ್ಷಣ ಒದಗಿಬೇಕಾದ್ದು ನಮ್ಮ ಕರ್ತವ್ಯವಾಗಿದೆ ಹಲವಾರು ವಿದ್ಯಾಸಂಸ್ಥೆಗಳು ಹಾಗೂ ಸರ್ಕಾರ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಿದೆ ನಿಮ್ಮ ಸಮಾಜ ಕಡಿಮೆ ಸಂಖ್ಯೆಯಲ್ಲಿ ಇರುವುದರಿಂದ ವೃತ್ತಿಯ ಜೊತೆಗೆ ಸಮಾಜದ ಪ್ರಮುಖ ಹುದ್ದೆಗಳನ್ನು ಏರಲು ಶಿಕ್ಷಣ ಅತ್ಯಗತ್ಯ ಸಂಘ ಸಂಸ್ಥೆಯಲ್ಲಿ ಸಂಘಟನೆಯಿಂದ ಮಾತ್ರ ನಿಮ್ಮ ಸಮಾಜದ ಏಳಿಗೆ ಸಾಧ್ಯ ಒಬ್ಬ ವ್ಯಕ್ತಿಗೆ ತೊಂದರೆಯಾದಾಗ ನ್ಯಾಯಯುತವಾಗಿ ಎಲ್ಲರೂ ಕೂಡ ಆತನ ಬೆಂಬಲಕ್ಕೆ ನಿಲ್ಲಬೇಕು ನಾವು ಕೂಡ ಕಾನೂನುಬದ್ಧವಾಗಿ ನಿಮ್ಮ ನೆರವಿಗೆ ನಿಲ್ಲುತ್ತೇವೆ ಎಂದರು.

ವಕೀಲರಾದ ಕಂಚಿನಹಳ್ಳಿ ಲಕ್ಷ್ಮೀ ಸಾಗರ್ ಮಾತನಾಡುತ್ತಾ ಕಡಿಮೆ ಸಂಖ್ಯೆಯಲ್ಲಿರುವ ನಮ್ಮ ಸಮಾಜ ವಿಸ್ತಾರವಾಗಿ ಬೆಳೆಯಬೇಕಾದರೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕು ನಮ್ಮ ಸಮಾಜದ ಬಡವರು ಏಳಿಗೆಗಾಗಿ ದುಡಿಯಬೇಕು ವಿದ್ಯಾರ್ಥಿಗಳಿಗೆ ಶಿಕ್ಷಣ ದೊರಕಿಸಿ ಗಣ್ಯ ವ್ಯಕ್ತಿಯಾಗಿ ರೂಪಿಸಬೇಕಾದ ನಮ್ಮ ಕರ್ತವ್ಯ ಸಂಘದ ಏಳಿಗೆಗಾಗಿ ಪ್ರತಿಯೊಬ್ಬರು ಕೈಜೋಡಿಸಿ ದುಡಿಯಬೇಕೆಂದು ತಿಳಿಸಿದರು.

ಗಣ್ಯರಿಂದ ನೂತನ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು ಹಾಗೂ ಡಿವೈಎಸ್ಪಿ ವಿಶ್ವನಾಥ್ ರವರಿಗೆ ಎಸ್ ಎಸ್ ಕೆ ವಿಶ್ವಕರ್ಮ ಸಮಾಜದ ವತಿಯಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ನಾಗಮಂಗಲ ಎಸ್ ಎಸ್ ಕೆ ವಿಶ್ವಕರ್ಮದ ಅಧ್ಯಕ್ಷರಾದ ಕೃಷ್ಣಚಾರಿ ದಿವಾಕರ್ ವಿಶ್ವಮೂರ್ತಿ ಜ್ಞಾನಮೂರ್ತಿ ಡಿವಿ ರಾಮಾಚಾರಿ ಸಂಘದ ಸದಸ್ಯರು ನಿರ್ದೇಶಕರು ಹಾಜರಿದ್ದರು.

emedialine

Recent Posts

ಕಾಳಗಿ; ರಟಕಲ್ ಗ್ರಾಮದಲ್ಲಿ ವಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

14 mins ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

1 hour ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

4 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

6 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

19 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

19 hours ago