ಬಿಸಿ ಬಿಸಿ ಸುದ್ದಿ

ಕಲಬುರಗಿ ರಂಗಾಯಣಕ್ಕೆ ಪ್ರಭಾಕರ ಜೋಶಿ ನೇಮಕ

ಕಲಬುರಗಿ: ಸೇಡಂನ ರಂಗಕಲಾವಿದ ಪ್ರಭಾಕರ ಜೋಶಿ ಅವರು ಕಲಬುರಗಿ ರಂಗಾಯಣದ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್ ಸರ್ಕಾರದ ಪತನದ ನಂತರ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದ ತೆರವಾಗಿದ್ದ ಈ ಸ್ಥಾನಕ್ಕೆ ಪತ್ರಕರ್ತ, ಸಾಹಿತಿ ಪ್ರಭಾಕರ ಜೋಶಿ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಈ ಹಿಂದೆ ಕಲಾವಿದ ಮಹೇಶ ಪಾಟೀಲ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದರು. ಅದಕ್ಕೂ ಮುನ್ನ ಪ್ರೊ. ಆರ್.ಕೆ. ಹುಡಗಿ ಕಾರ್ಯನಿರ್ವಹಿಸಿದ್ದರು.

ಅದ್ಯಾಕೋ ಗೊತ್ತಿಲ್ಲ ಕಲಬುರಗಿ ರಂಗಾಯಣ ಅಸ್ತಿತ್ವಕ್ಕೆ ಬಂದಾಗಿನಿಂದ ಯಾವ ನಿರ್ದೇಶಕರು ಸಹ ತಮ್ಮ ಪೂರ್ಣಾವಧಿ ಮುಗಿಸಿಲ್ಲ. “ರಂಗಾಯಣವೋ ಅಥವಾ ರಾಂಗಾಯಣವೋ” ಎಂದು ಈ ಹಿಂದೆ ಜೋಶಿಯವರೆ ಪತ್ರಿಕೆಯಲ್ಲಿ ಬರೆದಿದ್ದರು. ಅದೀಗ ರಾಂಗಾಯಣ ಆಗದೆ ರಂಗಾಯಣವಾಗಿ ಉಳಿಯಲಿ ಎಂಬುದು ಅನೇಕ ಸಾಹಿತ್ಯಾಸಕ್ತ ಮತ್ತು ಕಲಾವಿದರ ಆಶಯವಾಗಿದೆ. ಇದನ್ನವರು ಎಷ್ಟರ ಮಟ್ಟಿಗೆ ಈಡೇರಿಸಬಲ್ಲರೋ ಎಂಬುದಕ್ಕೆ ಕಾಲವೇ ಉತ್ತರಿಸುತ್ತದೆ.

ಮಾಧ್ಯಮ ಮಿತ್ರರೊಬ್ಬರು ರಂಗಾಯಣಕ್ಕೆ ನೇಮಕಗೊಂಡಿರುವುದಕ್ಕೆ ಇ-ಮೀಡಿಯಾಲೈನ್ ಸಂಪಾದಕೀಯ ಬಳಗ ಹೃದಯಪೂರ್ವಕವಾಗಿ ಅಭಿನಂದಿಸುತ್ತದೆ.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

57 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

1 hour ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

1 hour ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago