3ನೇ ಕಲ್ಯಾಣ ಕರ್ನಾಟಕ ಗಡಿನಾಡು ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಹಿರಿಯ ಕವಯತ್ರಿ ಡಾ. ಚಂದ್ರಕಲಾ ಬಿದರಿ ಆಯ್ಕೆ

ಕಲಬುರಗಿ: ಶ್ರೀ ಚನ್ನಕೇಶ್ವರ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಟ್ರಸ್ಟ್ ಸಂಚಾಲಿತ ಶ್ರೀ ಕೇಶವ ಸೆಂಟ್ರಲ್ ಸ್ಕೂಲ್ ಮೇದಕ ಇವರ ವತಿಯಿಂದ ಆಯೋಜಿಸುವ ಶ್ರೀ ಚನ್ನಕೇಶ್ವರ ಉತ್ಸವ-೨೦೧೯ ರ ನಿಮಿತ್ತ ಏರ್ಪಡಿಸುವ 3ನೇ ಕಲ್ಯಾಣ ಕರ್ನಾಟಕ ಗಡಿನಾಡು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸೇಡಂನ ಹಿರಿಯ ಕವಯತ್ರಿ  ಡಾ. ಚಂದ್ರಕಲಾ ಬಿದರಿ ಸರ್ವಾನುಮತದಿಂದ ಟ್ರಸ್ಟಿನ ಪದಾಧಿಕಾರಿಗಳು ಮತ್ತು ಸಂಸ್ಥೆಯ ಸಂಸ್ಥಾಪಕರು ಮತ್ತು ಮಾರ್ಗದರ್ಶಕರಾದ ಕೆ.ಮೊಗುಲಪ್ಪ ಯಾನಾಗುಂದಿ ಇವರ ಸಮ್ಮುಖದಲ್ಲಿ ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಗೌರವಾಧ್ಯಕ್ಷರಾದ ಭೀಮಶಪ್ಪ ಪೂಜಾರಿ ತಿಳಿಸಿದ್ದಾರೆ.

೩ನೇ ಕಲ್ಯಾಣ ಕರ್ನಾಟಕ ಗಡಿನಾಡು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅಕ್ಷರಧಾಮ ಮೇದಕನಲ್ಲಿ ಪ್ರತಿ ವರ್ಷದಂತೆ ಸಮ್ಮೇಳವನ್ನು ಈ ವರ್ಷವೂ ಸಹಿತ ಫೆಬ್ರವರಿ ೧ರಂದು  ಮಾಡಲು ಸಭೆಯಲ್ಲಿ ನಿರ್ಣಯಿಸಲಾಯಿತು. ಸಮ್ಮೇಳನದ ಪೂರ್ವ ಸಿದ್ದತೆಗಳ ಕುರಿತು ಈಗಾಗಲೆ ಹವಾರು ಸುತ್ತಿನ ಸಭೆಗಳನ್ನು ಮಾಡಿ ಸಮ್ಮೇಳನಕ್ಕೆ ಬೇಕಾಗುವ ಎಲ್ಲಾ ಪೂರ್ವ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಸಮ್ಮೇಳನ ಸ್ವಾಗತ ಸಮಿತಿಯ ಅಧ್ಯಕ್ಷೃರು ಮತ್ತು ಜಿಲ್ಲಾ ಪಂಚಾಯತಿ ಸದಸ್ಯರಾದ ದಾಮೋಧರ ರೆಡ್ಡಿ ಪಾಟೀಲ್, ಮೇದಕ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಬನ್ನಮ್ಮ ಭೀಮಶಪ್ಪ ನಾಯಿಕಿನ್, ಯುವ ಮುಖಂಡರಾದ  ಸುಭಾಶ ಸಜ್ಜನ್ ಮತ್ತು ಚನ್ನಪ್ಪ ದೊಬ್ಬಲಿ ಪತ್ರಕರ್ತರಾದ ಚನ್ನಕೇಶವುಲು ಗೌಡ್ , ಶ್ರೀ ಕೇಶವ ಸೆಂಟ್ರಲ್ ಸ್ಕೂಲ್‌ನ ಮುಖ್ಯ ಶಿಕ್ಷಕರಾದ ಮಲ್ಲಪ್ಪ ಪೂಜಾರಿ ಸಮ್ಮೇಳನ ಉಸ್ತುವರಿ ನರಸಪ್ಪ ಅನ್ನಸಾರಮ್ ಹಾಗೂ ಮಹಾದೇವ ಅಲ್ಲೂರ್ ಮತ್ತು ಹಲವಾರು ಜನ ಶಿಕ್ಷಕ ವೃಂದದವರು ಸಭೆಯಲ್ಲಿ ಉಪಸ್ಥಿತರಿದ್ದರು.

emedialine

View Comments

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

3 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

3 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

3 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

3 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

4 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420