ಕಲಬುರಗಿ: ನಗರದ ಕಲಾ ಮಂಡಳದಲ್ಲಿ ಇಂದು ಸಂಜೆ ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಘಟಕ ಉದ್ಘಾಟನೆ ಹಾಗೂ ಡಾ. ಚಿ.ಸಿ. ನಿಂಗಣ್ಣ ಅವರ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ಜರುಗಿತು.
ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಉದ್ಘಾಟಿಸಿ ಮಾತನಾಡಿ, ಮಾನವೀಯ ಮೌಲ್ಯಗಳ ವೃದ್ಧಿಗೆ ಸಾಹಿತ್ಯ ಕೃತಿಗಳು ಅವಶ್ಯ ಎಂದು ತಿಳಿಸಿದರು.
ಜಿಪಂ ಮಾಜಿ ಅಧ್ಯಕ್ಷ ನಿತಿನ್ ಗುತ್ತೇದಾರ ಪುಸ್ತಕಗಳ ಲೋಕಾರ್ಪಣೆಗೊಳಿಸಿದರು. ವೈಚಾರಿಕತೆ ಮತ್ತು ಸಾಹಿತ್ಯ ಕುರಿತು ಡಾ. ಗವಿಸಿದ್ದಪ್ಪ ಪಾಟೀಲ ಮಾತನಾಡಿದರು. ಕಡೆಗೀಲು ಬಂಡಿಗಾಧಾರ ಕೃತಿ ಕುರಿತು ಶಿವರಂಜನ್ ಸತ್ಯಂಪೇಟೆ ಮಾತನಾಡಿದರು.
ಹಿರಿಯ ಸಾಹಿತಿ ಡಾ. ಸ್ವಾಮಿರಾವ ಕುಲಕರ್ಣಿ ಅಧ್ಯಕ್ಷತೆ ವಹಿಸಿದ್ದರು. ನ್ಯಾಯವಾದಿ ಹಣಮಂತ ಯಳಸಂಗಿ, ಹಿರಿಯ ಪತ್ರಕರ್ತ ಶಂಕರ ಕೋಡ್ಲಾ ಮುಖ್ಯ ಅತಿಥಿಗಳಾಗಿದ್ದರು.
ಡಾ. ಚಿ.ಸಿ. ನಿಂಗಣ್ಣ, ಕಜಾಪ ತಾಲ್ಲೂಕು ಅಧ್ಯಕ್ಷ ಬಿ.ಎಸ್. ಮಾಲಿಪಾಟೀಲ, ಪ. ಮಾನು ಸಗರ ಉಪಸ್ಥಿತರಿದ್ದರು. ಜಿ.ಜಿ. ವಣಕ್ಯಾಳ ನಿರೂಪಿಸಿದರು.
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…