ಬಿಸಿ ಬಿಸಿ ಸುದ್ದಿ

ವೈಚಾರಿಕ ಸಾಹಿತ್ಯ ಕುವೆಂಪು ಕೊಡುಗೆ: ಹಿಪ್ಪರಗಾ ಶ್ರೀ ಅಭಿಮತ

ಆಳಂದ: ಕನ್ನಡ ನಾಡು, ನುಡಿ ಹಾಗೂ ನಿಸರ್ಗ ಸೌಂದರ್ಯದ ಜೊತೆಗೆ ಹೊಸಗನ್ನಡಕ್ಕೆ ವೈಚಾರಿಕ ಸಾಹಿತ್ಯವನ್ನು ನೀಡುವಲ್ಲಿ ರಾಷ್ಟ್ರಕವಿ ಕುವೆಂಪು ಅವರ ಕೊಡುಗೆ ಅಪಾರವಾದದು ಎಂದು ಮಾದನ ಹಿಪ್ಪರಗಾದ ಅಭಿನವ ಶಿವಲಿಂಗ ಸ್ವಾಮೀಜಿ ತಿಳಿಸಿದರು.

ಪಟ್ಟಣದ ಸರ್ಕಾರಿ ಕನ್ಯಾ ಪಿಯು ಕಾಲೇಜಿನಲ್ಲಿ ಶನಿವಾರ ಕಲಬುರ್ಗಿಯ ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿವತಿಯಿಂದ ವಿಶ್ವಮಾನವ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡ ‘ಕಳಶಪ್ರಾಯದ ಕುವೆಂಪು’ಸರಣಿ ಸಾಹಿತ್ಯ ಪರಿಚಯ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಮಾತನಾಡಿದರು.

ಯುವಕರಲ್ಲಿ ಉತ್ತಮ ಮೌಲ್ಯ ಮತ್ತು ಸಂಸ್ಕಾರಗಳು ಬೆಳೆಸಲು ಇಂತಹ ಸಾಹಿತ್ಯದ ಚಟುವಟಿಕೆಗಳು ಶಾಲಾ ಕಾಲೇಜುಗಳಲ್ಲಿ ನಡೆಯಬೇಕು.                    – ದಯಾನಂದ ಪಾಟೀಲ, ತಹಶೀಲ್ದಾರ್‌

ಕುವೆಂಪು ಅವರ ಸರ್ವೋದಯ, ಸಮನ್ವಯ, ಪೂರ್ಣದೃಷ್ಟಿ ತತ್ವಗಳು ಆಚರಣೆಗೆ ಬರಬೇಕು. ಮನುಷ್ಯ ಸಂಬಂಧಗಳು ಉತ್ತಮಗೊಂಡಾಗ ಮಾತ್ರ ವಿಶ್ವಪಥ ನಿರ್ಮಿಸಲು ಸಾಧ್ಯವಿದೆ ಎಂದರು. ತಹಶೀಲ್ದಾರ್ ದಯಾನಂದ ಪಾಟೀಲ ಮಾತನಾಡಿ‘ಸಮಾಜದಲ್ಲಿ ಪ್ರಗತಿದಾಯಕ ಬದಲಾವಣೆಗೆ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು.  ಸಾಧನೆ ಮೂಲಕ ಸಮಾಜಮುಖಿ ಗುಣ ಅಳವಡಿಸಿಕೊಳ್ಳಲು ತಿಳಿಸಿದರು.

ಉಪನ್ಯಾಸಕ ಸಂಜಯ ಪಾಟೀಲ ಮಾತನಾಡಿ‘ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಕುವೆಂಪು ಅವರು ಅಖಂಡ ಕರ್ನಾಟಕ ನಿರ್ಮಾಣ, ಸಮ ಸಮಾಜ ರೂಪಿಸಲು ಶ್ರಮಿಸಿದ ಚಿಂತಕರು ಎಂದು ಬಣ್ಣಿಸಿದರು.

ವಚನ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಮಾತನಾಡಿ‘ಮೊಬೈಲ್‌, ಟಿವಿ ಧಾರವಾಹಿಗಳ ಮಧ್ಯದಲ್ಲಿ ಮಾನವ ಸಂಬಂಧ ಮರೆಯುತ್ತಿರುವ ಯುವ ಸಮುದಾಯಕ್ಕೆ ಸಾಹಿತ್ಯಾಭಿರುಚಿ ಅಗತ್ಯವಿದೆ ಎಂದರು.

ಪ್ರಾಚಾರ್ಯ ಅಮೃತರಾವ ಬೆಳಮಗಿ ಅಧ್ಯಕ್ಷತೆವಹಿಸಿದರು. ಬಿಜೆಪಿ ಮುಖಂಡ ಅಶೋಕ ಗುತ್ತೇದಾರ, ಪದವಿ ಕಾಲೇಜು ಪ್ರಾಚಾರ್ಯ ಡಾ.ಕಾಶಿನಾಥ ಬಿರಾದಾರ, ಸಂಗಮೇಶ ಶಾಸ್ತ್ರಿ, ಎಸ್.ವಿ.ಪೋದ್ದಾರ, ಶರಣರಾಜ ಛಪ್ಪರಬಂದಿ, ಶಿವಾನಂದ ಸಾಲಿಮಠ, ಕವಿತಾ ಪಾಟೀಲ, ಶ್ರೀಶೈಲ ಮಾಡ್ಯಾಳೆ, ಅಂಬಾದಾಸ ಜಮದಾರ ಇದ್ದರು.

ಉಪನ್ಯಾಸಕಿ ಸುಮಂಗಲಾ ನಿರೂಪಿಸಿದರೆ, ಹಣಮಂತ ಅಟ್ಟೂರು ಸ್ವಾಗತಿಸಿದರು. ಶ್ರೀಶೈಲ ಮಾಡ್ಯಾಳೆ ವಂದಿಸಿದರು. ಗಾಯಕ ಸಂಗಮೇಶ ಶಾಸ್ತ್ರಿ, ಹಣಮಂತ ಅಟ್ಟೂರು ಹಾಗೂ ವಿದ್ಯಾರ್ಥಿನಿಯರು ಕುವೆಂಪು ವಿರಚಿತ ಗೀತೆಗಳನ್ನು ಹಾಡಿ ಗಮನ ಸೆಳೆದರು.

emedialine

Recent Posts

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

1 hour ago

ಕಲಬುರಗಿ: ಡೆಂಗ್ಯೂ, ಮಲೇರಿಯಾ ರೋಗಗಳನ್ನು ನಿಯಂತ್ರಿಸಲು ಬಾಲರಾಜ್ ಗುತ್ತೇದಾರ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…

1 hour ago

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

3 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

3 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

3 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

4 hours ago