ಸದೃಢ ದೇಹದಲ್ಲಿ ಸದೃಢ ಮನಸ್ಸು: ಡಾ. ಲಂಡನಕರ್

ಕಲಬುರಗಿ: ಸದೃಢ ದೇಶ ನಿರ್ಮಾಣವಾಗಬೇಕಾದರೆ ಯುವಕರು ಸದೃಢ ದೇಹಾರಾಗ್ಯ ಹೊಂದಿರಬೇಕು ಎಂದು ಗುಲ್ಬರ್ಗ ವಿವಿ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕ ಡಾ. ರಮೇಶ ಲಂಡನಕರ್ ಅಭಿಪ್ರಾಯಪಟ್ಟರು.

ಪದವಿಪೂರ್ವ ಶಿಕ್ಷಣ ಇಲಾಖೆ ರಾಷ್ಟ್ರೀಯ ಸೇವಾ ಯೋಜನೆ ಕೋಶ ಬೆಂಗಳೂರು, ಚಿತ್ತಾಪುರವ ತಾಲ್ಲೂಕಿನ ರೇವಗ್ಗಿ ಸರ್ಕಾರಿ ಪದವಿ ಕಾಲೇಜು ಆಶ್ರಯದಲ್ಲಿ ನಗರದ ಹೊರ ವಲಯದ ಬುದ್ಧ ವಿಹಾರ ಆವರಣದ ಪಾಲಿ ಸಂಸ್ಥೆಯಲ್ಲಿ ಶನಿವಾರ ನಡೆದ ಕಲಬುರಗಿ ವಿಭಾಗ ಮಟ್ಟದ ಬಾಲಕರ ಎನ್.ಎಸ್.ಎಸ್. ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಸದೃಢ ದೇಹದಲ್ಲಿ ಸದೃಢ ಮನಸ್ಸು ಇರುತ್ತದೆ. ಅಪೌಷ್ಠಿಕತೆ ನಿವಾರಣೆ ಮತ್ತು ಹಸಿವುಮುಕ್ತ ಭಾರತ ನಿರ್ಮಾಣ ಮಾಡುವ ಜವಾಬ್ದಾರಿ ಯುವಕರ ಮೇಲಿದೆ ಎಂದು ತಿಳಿಸಿದರು.

ಮುಖ್ಯ ಅತಿಥಿಯಾಗಿದ್ದ ಪತ್ರಕರ್ತ- ಸಾಹಿತಿ ಶಿವರಂಜನ್ ಸತ್ಯಂಪೇಟೆ ಮಾತನಾಡಿ, ಬದಲಾಗಬೇಕಾಗಿರುವ ಭಾರತದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸಂವಿಧಾನಾತ್ಮಕ ಹಕ್ಕುಗಳುನ್ನು ಕಸಿದುಕೊಳ್ಳುವ ಹುನ್ನಾರ ನಡೆದಿದ್ದು, ಒಂದು ರೀತಿಯಲ್ಲಿ ಭಾರತದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣ ಮಾಡುವ ಮೂಲಕ ಸಂವಿಧಾನಕ್ಕೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ. ಯುವಕರು ಶಿಸ್ತು, ಶ್ರಮ, ವೈಚಾರಿಕತೆಯನ್ನು ಬೆಳಸಿಕೊಳ್ಳಬೇಕು ಎಂದು ಕರೆ ನೀಡಿದರು.

ಅತಿಥಿಗಳಾಗಿ ಆಗಮಿಸಿದ್ದ ಜೇವರ್ಗಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಮೊಹ್ಮದ್ ಅಲ್ಲಾವುದ್ದೀನ್ ಸಾಗರ್, ಸರ್ಕಾರಿ ಸ್ವತಂತ್ರ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಬಸವರಾಜ ಗಾಣೂರೆ, ಶರಣಬಸವೇಶ್ವರ ಕಲಾ ವಾಣಿಜ್ಯ ಮತ್ತು ವಿಜ್ಞಾನ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಬಿ.ಸಿ. ಚವ್ಹಾಣ, ಗುವಿಗು ಸಿಂಡಿಕೇಟ್ ಮಾಜಿ ಸದಸ್ಯ ಈಶ್ವರ ಇಂಗನ್ ಮಾತನಾಡಿದರು.

ರಾಷ್ಟ್ರೀಯ ಸೇವಾ ಯೋಜನೆ ಕಲಬುರಗಿ ವಿಭಾಗೀಯ ಅಧಿಕಾರಿ ಡಾ. ಚಂದ್ರಶೇಖರ ದೊಡ್ಡಮನಿ ಸಮಾರೋಪ ನುಡಿಗಳನ್ನಾಡಿದರು. ಶಿಬಿರಾಧಿಕಾರಿ ಶರೀಫ್ ಎಂ.ಎಫ್ ವರದಿ ವಾಚನ ಮಾಡಿದರು. ರೇವಗ್ಗಿ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಪಾಟೀಲ ಶಿವಾಜಿ ಅಧ್ಯಕ್ಷತೆ ವಹಿಸಿದ್ದರು. ಇದೇವೇಳೆಯಲ್ಲಿ ಶಿಬಿರಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಣೆ ಮಾಡಲಾಯಿತು. ಶಿಬಿರಾಧಿಕಾರಿಗಳನ್ನು ಸತ್ಕರಿಸಲಾಯಿತು. ಪಾಂಡು ಎಲ್. ರಾಠೋಡ್ ನಿರೂಪಿಸಿದರು. ಅಂಬಾರಾಯ ಹಾಗರಗಿ ಸ್ವಾಗತಿಸಿದರು. ಭಗವಾನ್ ಬಿರಾದಾರ ವಂದಿಸಿದರು.
ಡಾ. ಅಂಬಾರಾಯ, ಭೀಮರಾವ ಜಿ. ಗಿರಿ, ಡಾ. ಭಗವಂತರಾಯ ಬಳೂಂಡಗಿ, ಮೋನಯ್ಯ ಗೋನಾಲ, ಅಲ್ಲಾಪಟೇಲ್ ಇತರರಿದ್ದರು.

emedialine

Recent Posts

ಶರಣಬಸವ ವಿಶ್ವವಿದ್ಯಾಲಯದಲ್ಲಿ 14ರಂದು ರಾಷ್ಟ್ರೀಯ ವಿಚಾರ ಸಂಕಿರಣ

ಕಲಬುರಗಿ; ಶರಣಬಸವ ವಿಶ್ವವಿದ್ಯಾಲಯ ಮತ್ತು ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯ ಜಂಟಿಯಾಗಿ, ನಗರದ ಶರಣಬಸವ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿರುವ ದೊಡ್ಡಪ್ಪ ಅಪ್ಪ…

1 hour ago

ಕಾ.ಸೀತಾರಾಮ ಯೇಚೂರಿಗೆ ಸಿಪಿಐಎಂ ಕಚೇರಿಯಲ್ಲಿ ಶೃದ್ಧಾಂಜಲಿ

ಕಲಬುರಗಿ: ಸಿಪಿಐಎಂ ಪಕ್ಷದ ಅಖಿಲ ಭಾರತ ಪ್ರದಾನ ಕಾರ್ಯದರ್ಶಿಗಳಾಗಿದ್ದ 72 ವಯಸ್ಸಿನ ಕಾ.ಸೀತಾರಾಮ ಯೇಚೂರಿಯವರು ಇಂದು ಸಂಜೆ ನಿಧನ ಹೊಂದಿದ್ದು,…

1 hour ago

ಕ್ರೀಡೆಗಳು ವಿದ್ಯಾರ್ಥಿಗಳನ್ನು ಸಧೃಡ ಆರೋಗ್ಯವಾಗಿ ಇಡುತ್ತವೆ

ಕಲಬುರಗಿ: ಕ್ರೀಡೆಗಳು ವಿದ್ಯಾರ್ಥಿಗಳು ಸದೃಢವಾಗಿ ಮತ್ತು ಆರೋಗ್ಯವಾಗಿರಲು ಸಹಾಯ ಮಾಡುತ್ತದೆ. ಅವರು ದೈನಂದಿನ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಅನಿರೀಕ್ಷಿತ ರೋಗಗಳು…

1 hour ago

PDA ಕಾಲೇಜಿನಲ್ಲಿ ಸೆ. 13,14 ರಂದು ವಿಚಾರ ಸಂಕಿರಣ

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಯರಿಂಗ ಕಾಲೇಜಿನಲ್ಲಿ ನಾಳೆಯಿಂದ ಎರಡುದಿನಗಳ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ…

1 hour ago

ಲಿಂಗಾಯತ ದೀಕ್ಷ ಪಂಚಮಸಾಲಿ ವಕೀಲರ ಪರಿಷತ್ತ ನೂತನ ಸಮಿತಿ ರಚನೆ

ಕಲಬುರಗಿ: ಲಿಂಗಾಯತ ದೀಕ್ಷ ಪಂಚಮಸಾಲಿ ವಕೀಲರ ಪರಿಷತ್ತಿನ ಸಭೆಯಲ್ಲಿ ಜಿಲ್ಲಾ ಸಮಿತಿ ರಚಿಸಲಾಯಿತು. ಈ ವೇಳೆಯಲ್ಲಿ ಜಿಲ್ಲಾ ಅಧ್ಯಕ್ಷರಾಗಿ ರವೀಂದ್ರ…

1 hour ago

ಕಲಬುರಗಿ: ಸೆ. 13 ರಿಂದ “ಪ್ರವಾದಿ ಮುಹಮ್ಮದ್(ಸ) ಮಹಾನ್ ಚಾರಿತ್ರ್ಯವಂತ”ರು ಅಭಿಯಾನ

ಕಲಬುರಗಿ: ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ರಾಜ್ಯ ಘಟಕದ ವತಿಯಿಂದ "ಪ್ರವಾದಿ ಮುಹಮ್ಮದ್(ಸ) ಮಹಾನ್ ಚಾರಿತ್ರ್ಯವಂತ" ಎಂಬ ಧ್ಯೇಯವಾಕ್ಯದಡಿ ರಾಜ್ಯವ್ಯಾಪಿ…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420