ಬಿಸಿ ಬಿಸಿ ಸುದ್ದಿ

ಶರಣಬಸವ ವಿವಿಯಲ್ಲಿ ವಿದ್ಯಾರ್ಥಿಗಳಿಗೆ ಅಪಘಾತ ತಡೆ ಜಾಗೃತಿ

ಕಲಬುರಗಿ: ನಗರದ ಶರಣಬಸವ ವಿಶ್ವವಿದ್ಯಾಲಯದಲ್ಲಿ ನಗರದ ಸಂಚಾರಿ ಪೊಲೀಸ್ ಇಲಾಖೆಯಿಂದ ಹಮ್ಮಿಕೊಂಡ ರಸ್ತೆ ಸುರಕ್ಷತೆ ಹಾಗೂ ಅಪಘಾತ ತಡೆ ಜಾಗೃತಿ ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ರಸ್ತೆ ಅಪಘಾತ ತಡೆ ಹಾಗೂ ರಸ್ತೆ ನಿಯಮಗಳ ಕುರಿತು ಜಾಗೃತಿ ಮೂಡಿಸಲಾಯಿತು.

ರಸ್ತೆ ನಿಯಮಗಳನ್ನು ಉಲ್ಲಂಘಿಸಿದ ಪರಿಣಾಮ ದಿನನಿತ್ಯ ರಸ್ತೆ ಅಪಘಾತಗಳು ಹೆಚ್ಚಾಗುತ್ತಿವೆ. ಇದರಿಂದ ಸಾವಿರಾರು ಕುಟುಂಬಗಳು ಕಣ್ಣೀರಿನಲ್ಲೇ ಕೈತೊಳೆಯುವಂತಾಗಿದೆ. ಪರಿಣಾಮ ರಸ್ತೆ ನಿಯಮಗಳ, ರಸ್ತೆ ಸುರಕ್ಷತಾ ಮಾರ್ಗಸೂಚಿಗಳನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳುವುದು ಅಗತ್ಯವಾಗಿದೆ. ಎಂದು ನಗರದ ಸಂಚಾರಿ ಪೊಲೀಸ್ ಸಿಬ್ಬಂದಿ ರಾಜು ಕೋಬಾಳ ತಿಳಿಸಿದರು.

ರಸ್ತೆ ಸುರಕ್ಷತೆ ನಿಯಮಗಳು ಪಾಲನೆ ಮಾಡದ ಪರಿಣಾಮ ಭಾರತದಲ್ಲಿ ರಸ್ತೆ ಅಪಘಾತದಿಂದ ೧.೫೦ಲಕ್ಷ ಜನರು ಸಾವುನ್ನಪ್ಪುತ್ತಿದ್ದಾರೆ. ಇದರಿಂದ ವಾಹನ ಸವಾರರು ವಾಹನಕ್ಕೆ ಸಂಬಂಧಿಸಿದ ಪರವಾನಿಗೆ ಸೇರಿದಂತೆ ಇತರ ದಾಖಲೆಗಳ ಸಮೇತ ವಾಹನ ಚಲಾಯಿಸುವುದು ಉತ್ತಮ ಎಂದು ತಿಳಿಸಿದರು.

ರಸ್ತೆ ಸುರಕ್ಷತೆಯ ಪ್ರಾಮುಖ್ಯತೆ, ರಸ್ತೆ ಸಂಕೇತಗಳು, ಸಂಚಾರಿ ದೀಪಗಳು ಮತ್ತು ಅವುಗಳ ಪಾತ್ರದ ಬಗ್ಗೆ ಹಾಗೂ ಸಂಚಾರ ಸುರಕ್ಷತೆಯ ನಿಯಮಗಳ ಪಾಲನೆ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು.
ಸಂಚಾರಿ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಸೂರ್ಯಕಾಂತ, ಪ್ರಾಧ್ಯಾಪಕರಾದ ಡಾ.ಎಸ್.ಎಚ್ ಹೊನ್ನಳ್ಳಿ, ಪ್ರೋ.ಎಸ್.ಎಸ್ ಕರಡ್ಡಿ, ಪ್ರೋ.ಗೀತಾ, ಪ್ರೋ.ಸುನೀತಾ, ಪ್ರೋ.ರೂಪತಾರಾ, ಪ್ರೋ.ಪ್ರೇಮಾವತಿ ಇದ್ದರು.

emedialine

Recent Posts

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

14 mins ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

20 mins ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

23 mins ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

28 mins ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

30 mins ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

38 mins ago