ಭೀಮುನಾಯಕ ಸಮ್ಮುಖದಲ್ಲಿ ಕರವೇ ಯುವ ಶಕ್ತಿ ಜಿಲ್ಲಾಧ್ಯಕ್ಷ ಅಂಬರೇಶ ಹತ್ತಿಮನಿ ಕರವೇ ಸೇರ್ಪಡೆ

ಯಾದಗಿರಿ: ಕರವೇ ಯುವಶಕ್ತಿ ಸಂಘಟನೆಯ ಜಿಲ್ಲಾಧ್ಯಕ್ಷ ಅಂಬರೇಶ ಹತ್ತಿಮನಿ ತಮ್ಮ ಬೆಂಬಲಿಗ ಕಾರ್ಯಕರ್ತರೊಂದಿಗೆ ಶನಿವಾರ ಕರ್ನಾಟಕ ರಕ್ಷಣಾ ವೇದಿಕೆಗೆ ಅಧಿಕೃತವಾಗಿ ಸೇರ್ಪಡೆಗೊಂಡರು.
ನಗರದ ಕರವೇ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ಸಮ್ಮುಖದಲ್ಲಿ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಮಾತನಾಡಿದ ಟಿ.ಎನ್. ಭೀಮುನಾಯಕ ಕನ್ನಡ ಪರ ಹೋರಾಟವನ್ನು ಒಗ್ಗೂಡಿ ಮಾಡಿದಲ್ಲಿ ಯಶಸ್ಸು ಲಭಿಸಲಿದೆ ಈ ನಿಟ್ಟಿನಲ್ಲಿ ನಾರಾಯಣಗೌಡರ ನೇತೃತ್ವದ ಸಂಘಟನೆಯಲ್ಲಿ ಕರವೇ ಯುವಶಕ್ತಿ ಜಿಲ್ಲಾಧ್ಯಕ್ಷರ ಸೇರ್ಪಡೆ ಕನ್ನಡ ಪರ ಸಂಘಟನೆಗಳ ಒಗ್ಗೂಡಿಸುವ ನಿಟ್ಟಿನಲ್ಲಿ ಉತ್ತಮ ಬೆಳವಣಿಗೆಯಾಗಿದೆ ಎಂದು ಅವರು ನುಡಿದರು.

ಸಂಘಟನೆಗಳು ಹೆಚ್ಚಾದರೆ ಹೋರಾಟಕ್ಕೆ ಬಲ ಬರದೇ ಕೇವಲ ವ್ಯಕ್ತಿಗತ ತೋರಿಕೆಯ ಬಲ ಕಂಡುಬರುತ್ತದೆ ಆದರೆ ಜಿಲ್ಲೆಯ ಏಳ್ಗೆಗಾಗಿ ಎಲ್ಲರೂ ಒಂದೇ ವೇದಿಕೆಯಡಿ ಸೇರಿ ಹೋರಾಟ ನಡೆಸಿದರೆ ಸರ್ಕಾರವೇ ತಲೆ ಬಾಗಲಿದೆ ಎಂದು ಅವರು ಹೇಳಿದರು. ಕರವೇ ಸಂಘಟನೆಯಲ್ಲಿ ಕಾರ್ಯಕರ್ತರು ಪದಾಧಿಕಾರಿಗಳ ಮದ್ಯೆ ಬೇದ ಭಾವ ಇಲ್ಲ ಎಲ್ಲರೂ ಕನ್ನಡದ ಕಟ್ಟಾಳುಗಳೇ ಎಂಬುದನ್ನು ಗಮನದಲ್ಲಿರಿಸಿಕೊಂಡು ಪ್ರತಿಯೊಬ್ಬರು ಇಲ್ಲಿ ಕನ್ನಡಕ್ಕಾಗಿ ದುಡಿಯುವ ಸಂಘಟನೆಯೇ ಕರವೇ ಎಂದರು.

ಕರವೇ ಸೇರ್ಪಡೆಯಾದ ಅಮರೇಶ ಹತ್ತಿಮನಿ ಮಾತನಾಡಿ, ರಾಜ್ಯದಲ್ಲಿ ಬಲಿಷ್ಟವಾಗಿರುವ ಕರವೇ ನಾರಾಯಣಗೌಡರ ನೇತೃತ್ವದಲ್ಲಿ ಕನ್ನಡ ಕಟ್ಟುವ ಕೆಲಸ ಮಾಡುತ್ತಿದ್ದು ಈ ನಿಟ್ಟಿನಲ್ಲಿ ನಾವು ಕರವೇ ಸೇರಲು ಮುಂದಾಗಿದ್ದಾಗಿ ತಿಳಿಸಿದರು.

ಅಂಬರೇಶ ಹತ್ತಿಮನಿ ಅವರೊಂದಿಗೆ ಕಾರ್ಯಕರ್ತರಾದ ಈರಣ್ಣ ವಾಲಿ, ಭೀಮು ಹೊನಿಗೇರಾ, ಗವೀಂದ್ರ ತಾತಳಗೇರಾ, ಶರಣು ತಾತಳಗೇರಾ, ಮನೋಹರ್, ಸುರೇಶ, ಶರಣು ಕುರಕುಂದಿ ಸೇರಿದಂತೆ ಅನೇಕರು ಸೇರ್ಪಡೆಯಾದರು. ಎಲ್ಲರಿಗೂ ಭೀಮುನಾಯಕ ಕನ್ನಡ ಧ್ವಜ ನೀಡಿ ಸಂಘಟನೆಗೆ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಮಲ್ಲು ಮಾಳಿಕೇರಿ, ಸಿದ್ದು ನಾಯಕ ಹತ್ತಿಕುಣಿ, ಸಾಹೇಬಗೌಡ ನಾಯಕ, ಸಿದ್ದಪ್ಪ ಕುಯಿಲೂರು, ಸಾಬು ಹೋರುಂಚಾ, ರವಿ ನಾಯಕ, ಭೀಮು ಬಸವಂತಪುರ ಇನ್ನಿತರರು ಇದ್ದರು.

emedialine

Recent Posts

ನಾಡಹಬ್ಬ ಆಚರಣೆ ಅಂಗವಾಗಿ ನಾಡ ದೇವತೆ ಸ್ತಬ್ಧ ಚಿತ್ರಗಳ ಮೆರವಣಿಗೆ

ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…

13 hours ago

ವೀರಪ್ಪ ನಿಷ್ಠಿ ಕಾಲೇಜ್ ಮಹಾತ್ಮ ಗಾಂಧಿಜಿ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ

ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…

13 hours ago

ಲೈಂಗಿಕ ದೌರ್ಜನ್ಯ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ 8ಕ್ಕೆ ಸುರಪುರ ಬಂದ್

ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…

13 hours ago

ಗರ್ಭಿಣಿ ಮಹಿಳೆಯರಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ:  ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…

13 hours ago

ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…

13 hours ago

ಜುಡೋಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420