ಎನ್‌ಎಸ್‌ಎಸ್‌ನಿಂದ ಸಹಕಾರ ಮತ್ತು ಹೊಂದಾಣಿಕೆ ಮನೋಭಾವ ಬೆಳೆಯಲಿದೆ : ಮಠ

0
26

ಯಾದಗಿರಿ: ಸಹಕಾರ ಮತ್ತು ಹೊಂದಾಣಿಕೆ ಮನೋಭಾವ ಬರುವುದು ಎನ್‌ಎಸ್‌ಎಸ್‌ನಂತಹ ಶಿಬಿರಗಳಿಂದ ಈ ಶಿಬಿರದಲ್ಲಿ ನಾವು ಬದುಕಿನ ಹಲವು ಮಜಲುಗಳಲ್ಲಿ ಕಲಿಯಬೇಕಾದ ಘಟನೆಗಳನ್ನು ಕೂಡ ಕಲಿಯುತ್ತೇವೆ. ಇಲ್ಲಿ ನಾವು ಮೊದಲು ಕಲಿಯುವುದು ಶುಚಿತ್ವವೇ ಧೈವತ್ವ ಎನ್ನುವುದನ್ನು ಎನ್ನುವುದನ್ನು ಮರೆಯದಿರೋಣ ಎಂದು ಗುರುಮಠಕಲ್ ಬಾಲಕೀಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಮಲ್ಲಯ್ಯಸ್ವಾಮಿ ಹಿರೇಮಠ ಅಭಿಪ್ರಾಯಪಟ್ಟರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಯಾದಗಿರಿ ಬಾಲಕೀಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಎನ್‌ಎಸ್‌ಎಸ್ ಶಿಬಿರದ ಸಮಾರೋಪದಲ್ಲಿ ಭಾಗವಹಿಸಿ ಮಾತನಾಡಿದರು. ರಾಷ್ಟ್ರಸೇವೆಯಲ್ಲಿ ನಮ್ಮದು ಒಂದು ಪಾತ್ರ ಇದೆ ಎನ್ನುವುದನ್ನು ವಿದ್ಯಾರ್ಥಿಗಳು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದರು.

Contact Your\'s Advertisement; 9902492681

ವರದಿಗಾರರಾದ ಮಹೇಶ ಕಲಾಲ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಮೂಡಿಸಲು ಎನ್‌ಎಸ್‌ಎಸ್ ಶಿಬಿರಗಳು ಸಹಕಾರಿಯಾಗಿದ್ದು, ವಿದ್ಯಾರ್ಥಿ ಜೀವನದಲ್ಲಿ ನಮ್ಮ ಬದುಕಿಗೆ ಉಪಯೋಗವಾಗುವಂತಹ ಕೌಶಲ್ಯವನ್ನು ಕಲಿತುಕೊಳ್ಳಬೇಕಿದೆ ಎಂದು ಅಭಿಪ್ರಾಯಪಟ್ಟರು.

ಕಾಲೇಜಿನ ಎನ್‌ಎಸ್‌ಎಸ್ ಅಧಿಕಾರಿ ಶಂಕರಲಿಂಗಪ್ಪ ಗೂಳಿ ಅಧ್ಯಕ್ಷತೆವಹಿಸಿ ಮಾತನಾಡಿ, ವಿದ್ಯಾರ್ಥಿಗಳು, ಶಿಸ್ತು, ಸಮಯ ಪ್ರಜ್ಞೆ ಅಳವಡಿಸಿಕೊಂಡಲ್ಲಿ ತಮ್ಮ ವಿದ್ಯಾರ್ಥಿ ಜೀವನವನ್ನು ಯಶಸ್ವಿಯಾಗಿ ಪೂರೈಸಿಕೊಂಡು ಉತ್ತಮ ಬದುಕಿಗೆ ಅಡಿಪಾಯ ಹಾಕುವಿರಿ. ಅದರ ಜೊತೆಗೆ ಕಠಿಣ ಪರಿಶ್ರಮ ಮತ್ತು ಶ್ರದ್ಧೆಯ ಮನೋಭಾವವನ್ನೂ ಕೂಡ ನಿಮ್ಮ ಬದುಕಿನಲ್ಲಿ ಅಳವಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾಲೇಜಿನ ಉಪನ್ಯಾಸಕರಾದ ಮರೆಪ್ಪ, ಸುಭಾಷ ಮಾನೆಗಾರ, ದಶರಥ ಕೆ, ಮಾತನಾಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಶಿಬಿರಾರ್ಥಿಗಳು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here